AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ

ಪತಿ ತನ್ನ ಜತೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಆತ ನನ್ನ ಮೆಲೆ ಮಾಡಿರುವುದು ಅತ್ಯಾಚಾರ ಎಂದು ಪತಿ ವಿರುದ್ಧ ಹೆಂಡತಿಯೇ ದೂರು ದಾಖಲಿಸಿದ್ದಳು.

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 27, 2021 | 5:01 PM

Share

ಮದುವೆ ನಂತರದಲ್ಲಿ ಹೆಂಡತಿ ಜತೆ ಪತಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ರೇಪ್​ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಿಲಾಸ್​ಪುರ್​ (ಛತ್ತೀಸ್‌ಗಡ್‌) ಹೈಕೋರ್ಟ್​ ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ತಾಪ್ಸೀ ಪನ್ನು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪತಿ ತನ್ನ ಜತೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಆತ ನನ್ನ ಮೇಲೆ ಮಾಡಿರುವುದು ಅತ್ಯಾಚಾರ ಎಂದು ಪತಿ ವಿರುದ್ಧ ಹೆಂಡತಿಯೇ ದೂರು ದಾಖಲಿಸಿದ್ದಳು. ಇಬ್ಬರೂ ಕಾನೂನು ಬದ್ಧವಾಗಿ ಮದುವೆ ಆಗಿದ್ದರು. ಈ ಕಾರಣಕ್ಕೆ ಕಾನೂನುಬದ್ಧವಾಗಿ ಮದುವೆಯಾದ ಪತ್ನಿಯೊಂದಿಗೆ ಪತಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ. ಲೈಂಗಿಕ ಕ್ರಿಯೆ ಬಲವಂತವಾಗಿದ್ದರೂ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿದ್ದರೂ ಸಹ ಅದನ್ನು ರೇಪ್​ ಎಂದು ಕರೆಯಲು ಸಾಧ್ಯವಿಲ್ಲ ಎಂದು ಕೋರ್ಟ್​ ತೀರ್ಪು ನೀಡಿತ್ತು.

ಈ ಬಗ್ಗೆ ಮಾಡಲಾದ ಟ್ವೀಟ್​ ರೀ ಟ್ವೀಟ್​ ಮಾಡಿಕೊಂಡಿರುವ ತಾಪ್ಸೀ, ‘ಇದೊಂದು ಕೇಳುವುದು ಬಾಕಿ ಇತ್ತು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕೋರ್ಟ್​ ಆದೇಶದ ಬಗ್ಗೆ ತೀವ್ರ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಪ್ಸೀ ಅವರು ‘ಪಿಂಕ್’​ ಸಿನಿಮಾದಲ್ಲಿ ನಟಿಸಿದ್ದರು. ಯಾವುದೇ ಹೆಣ್ಣಾಗಿರಲಿ ಅವಳು ಒಮ್ಮೆ ಒಪ್ಪಿಗೆ ಸೂಚಿಸಿಲ್ಲ ಎಂದರೆ ಅದರ ಅರ್ಥ ಬೇಡ ಎಂದೇ ಆಗಿರುತ್ತದೆ. ಆಕೆ ನೋ ಹೇಳಿದ ವಿಚಾರದಲ್ಲಿ ಮುಂದುವರಿಯಲೇ ಬಾರದು ಎಂಬುದು ಪಿಂಕ್​ ಸಿನಿಮಾ ಸಾರಾಂಶ. ಇಡೀ ಚಿತ್ರದಲ್ಲಿ ಹೆಣ್ಣಿನ ಹಕ್ಕಿನ ರಕ್ಷಣೆ ಬಗ್ಗೆ ಸಾಕಷ್ಟು ವಿವರವಾಗಿ ಹೇಳಲಾಗಿತ್ತು.

ಕಳೆದ ತಿಂಗಳು ತಾಪ್ಸೀ ಪನ್ನು ನಟನೆಯ ‘ಹಸೀನ್​ ದಿಲ್​ರುಬಾ’ ಸಿನಿಮಾ ರಿಲೀಸ್​ ಆಗಿತ್ತು. ತಾಪ್ಸೀ ಪನ್ನು ಸದಾ ಒಂದಿಲ್ಲೊಂದು ಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಎದುರಾಗುತ್ತಾರೆ. ಈ ಬಾರಿ ಅವರು ‘ಹಸೀನ್​ ದಿಲ್​ರುಬಾ’ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದರು. ಈ ಚಿತ್ರ ಚಿಕ್ಕ ನಗರದಲ್ಲಿ ನಡೆಯುವ ಕಥೆ. ಗಂಡನನ್ನು ಹತ್ಯೆ ಮಾಡಿದ ಆರೋಪ ಕಥಾ ನಾಯಕಿ ವಿರುದ್ಧ ಕೇಳಿಬರುತ್ತದೆ. ಕಥಾ ನಾಯಕಿ ಗಂಡನ ಸಾವಿನ ನಂತರ, ಆಕೆಯ ಪ್ರಿಯಕರ ಕೂಡ ಕಾಣೆ ಆಗುತ್ತಾನೆ. ಕಥಾ ನಾಯಕಿ ಕಟಕಟೆ ಏರುವ ಪರಿಸ್ಥಿತಿ ಬಂದೊದಗುತ್ತದೆ. ಮುಂದೇನಾಗುತ್ತದೆ ಎನ್ನುವುದೇ ಸಿನಿಮಾದ ಕುತೂಹಲ.

ಇದನ್ನೂ ಓದಿ: ನಟಿ ತಾಪ್ಸೀ ಪನ್ನು ಡೇಟ್​ ಮಾಡುವ ಹುಡುಗನಿಗೆ ಈ ಗುಣ ಇರಲೇಬೇಕು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ