AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ

ಪತಿ ತನ್ನ ಜತೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಆತ ನನ್ನ ಮೆಲೆ ಮಾಡಿರುವುದು ಅತ್ಯಾಚಾರ ಎಂದು ಪತಿ ವಿರುದ್ಧ ಹೆಂಡತಿಯೇ ದೂರು ದಾಖಲಿಸಿದ್ದಳು.

ಹೆಂಡತಿ ಜತೆ ಗಂಡನ ಬಲವಂತದ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂಬ ಕೋರ್ಟ್​ ಆದೇಶಕ್ಕೆ ತಾಪ್ಸೀ ಪನ್ನು ಖಡಕ್​ ಪ್ರತಿಕ್ರಿಯೆ
TV9 Web
| Edited By: |

Updated on: Aug 27, 2021 | 5:01 PM

Share

ಮದುವೆ ನಂತರದಲ್ಲಿ ಹೆಂಡತಿ ಜತೆ ಪತಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ರೇಪ್​ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಬಿಲಾಸ್​ಪುರ್​ (ಛತ್ತೀಸ್‌ಗಡ್‌) ಹೈಕೋರ್ಟ್​ ತೀರ್ಪು ನೀಡಿದೆ. ಈ ತೀರ್ಪಿನ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ತಾಪ್ಸೀ ಪನ್ನು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪತಿ ತನ್ನ ಜತೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಆತ ನನ್ನ ಮೇಲೆ ಮಾಡಿರುವುದು ಅತ್ಯಾಚಾರ ಎಂದು ಪತಿ ವಿರುದ್ಧ ಹೆಂಡತಿಯೇ ದೂರು ದಾಖಲಿಸಿದ್ದಳು. ಇಬ್ಬರೂ ಕಾನೂನು ಬದ್ಧವಾಗಿ ಮದುವೆ ಆಗಿದ್ದರು. ಈ ಕಾರಣಕ್ಕೆ ಕಾನೂನುಬದ್ಧವಾಗಿ ಮದುವೆಯಾದ ಪತ್ನಿಯೊಂದಿಗೆ ಪತಿ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ. ಲೈಂಗಿಕ ಕ್ರಿಯೆ ಬಲವಂತವಾಗಿದ್ದರೂ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿದ್ದರೂ ಸಹ ಅದನ್ನು ರೇಪ್​ ಎಂದು ಕರೆಯಲು ಸಾಧ್ಯವಿಲ್ಲ ಎಂದು ಕೋರ್ಟ್​ ತೀರ್ಪು ನೀಡಿತ್ತು.

ಈ ಬಗ್ಗೆ ಮಾಡಲಾದ ಟ್ವೀಟ್​ ರೀ ಟ್ವೀಟ್​ ಮಾಡಿಕೊಂಡಿರುವ ತಾಪ್ಸೀ, ‘ಇದೊಂದು ಕೇಳುವುದು ಬಾಕಿ ಇತ್ತು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕೋರ್ಟ್​ ಆದೇಶದ ಬಗ್ಗೆ ತೀವ್ರ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಪ್ಸೀ ಅವರು ‘ಪಿಂಕ್’​ ಸಿನಿಮಾದಲ್ಲಿ ನಟಿಸಿದ್ದರು. ಯಾವುದೇ ಹೆಣ್ಣಾಗಿರಲಿ ಅವಳು ಒಮ್ಮೆ ಒಪ್ಪಿಗೆ ಸೂಚಿಸಿಲ್ಲ ಎಂದರೆ ಅದರ ಅರ್ಥ ಬೇಡ ಎಂದೇ ಆಗಿರುತ್ತದೆ. ಆಕೆ ನೋ ಹೇಳಿದ ವಿಚಾರದಲ್ಲಿ ಮುಂದುವರಿಯಲೇ ಬಾರದು ಎಂಬುದು ಪಿಂಕ್​ ಸಿನಿಮಾ ಸಾರಾಂಶ. ಇಡೀ ಚಿತ್ರದಲ್ಲಿ ಹೆಣ್ಣಿನ ಹಕ್ಕಿನ ರಕ್ಷಣೆ ಬಗ್ಗೆ ಸಾಕಷ್ಟು ವಿವರವಾಗಿ ಹೇಳಲಾಗಿತ್ತು.

ಕಳೆದ ತಿಂಗಳು ತಾಪ್ಸೀ ಪನ್ನು ನಟನೆಯ ‘ಹಸೀನ್​ ದಿಲ್​ರುಬಾ’ ಸಿನಿಮಾ ರಿಲೀಸ್​ ಆಗಿತ್ತು. ತಾಪ್ಸೀ ಪನ್ನು ಸದಾ ಒಂದಿಲ್ಲೊಂದು ಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ಎದುರಾಗುತ್ತಾರೆ. ಈ ಬಾರಿ ಅವರು ‘ಹಸೀನ್​ ದಿಲ್​ರುಬಾ’ ಚಿತ್ರಕ್ಕಾಗಿ ಹಾಟ್​ ಅವತಾರ ತಾಳಿದ್ದರು. ಈ ಚಿತ್ರ ಚಿಕ್ಕ ನಗರದಲ್ಲಿ ನಡೆಯುವ ಕಥೆ. ಗಂಡನನ್ನು ಹತ್ಯೆ ಮಾಡಿದ ಆರೋಪ ಕಥಾ ನಾಯಕಿ ವಿರುದ್ಧ ಕೇಳಿಬರುತ್ತದೆ. ಕಥಾ ನಾಯಕಿ ಗಂಡನ ಸಾವಿನ ನಂತರ, ಆಕೆಯ ಪ್ರಿಯಕರ ಕೂಡ ಕಾಣೆ ಆಗುತ್ತಾನೆ. ಕಥಾ ನಾಯಕಿ ಕಟಕಟೆ ಏರುವ ಪರಿಸ್ಥಿತಿ ಬಂದೊದಗುತ್ತದೆ. ಮುಂದೇನಾಗುತ್ತದೆ ಎನ್ನುವುದೇ ಸಿನಿಮಾದ ಕುತೂಹಲ.

ಇದನ್ನೂ ಓದಿ: ನಟಿ ತಾಪ್ಸೀ ಪನ್ನು ಡೇಟ್​ ಮಾಡುವ ಹುಡುಗನಿಗೆ ಈ ಗುಣ ಇರಲೇಬೇಕು

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು