AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಜೊತೆ ಕುಳಿತ ಈ ಸ್ಟಾರ್ ನಟಿಯರು ಯಾರೆಂದು ಗುರುತಿಸಿ

ಸ್ಟಾರ್ ನಟಿಯರಿಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ. ಇವರು ಯಾರು ಎಂದು ಗುರುತಿಸಿ ಎಂಬ ಸವಾಲನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗುತ್ತಿದೆ.

ಅಮ್ಮನ ಜೊತೆ ಕುಳಿತ ಈ ಸ್ಟಾರ್ ನಟಿಯರು ಯಾರೆಂದು ಗುರುತಿಸಿ
ರಾಜೇಶ್ ದುಗ್ಗುಮನೆ
|

Updated on: Feb 02, 2023 | 12:31 PM

Share

ಸೋಶಿಯಲ್ ಮೀಡಿಯಾದಲ್ಲಿ (Social Media) ಸೆಲೆಬ್ರಿಟಿಗಳು ಸದಾ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ ಬಾಲ್ಯದ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳನ್ನು ಅವರು ಖುಷಿಪಡಿಸುತ್ತಿರುತ್ತಾರೆ. ಈಗ ಸ್ಟಾರ್ ನಟಿಯರಿಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ. ಇವರು ಯಾರು ಎಂದು ಗುರುತಿಸಿ ಎಂಬ ಸವಾಲನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗುತ್ತಿದೆ. ಇದಕ್ಕೆ ಅಭಿಮಾನಿಗಳು ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋದಲ್ಲಿರುವವರು ಬೇರಾರು ಅಲ್ಲ ಬಾಲಿವುಡ್​ನ ಟಬು ಹಾಗೂ ಅವರ ಅಕ್ಕ ಫರಾ ಹಶ್ಮಿ. ತಾಯಿಯ ಜತೆ ಅವರು ಕುಳಿತಿರುವ ಫೋಟೋ ಇದಾಗಿದೆ. ಇದು 70ರ ದಶಕದಲ್ಲಿ ತೆಗೆದ ಫೋಟೋ. ಫರಾ ಅವರು ಅಮ್ಮನ ಪಕ್ಕದಲ್ಲಿ ಕುಳಿತಿದ್ದರೆ, ಟಬು ಅಮ್ಮನ ಕಾಲಿನ ಮೇಲೆ ಕುಳಿತಿದ್ದಾರೆ. ಈ ಕಪ್ಪು ಬಿಳುಪಿನ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಫರಾ ಅವರು 80-90ರ ದಶಕದಲ್ಲಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದರು. ಆದರೆ, ವರ್ಷ ಕಳೆದಂತೆ ಅವರಿಗೆ ಬೇಡಿಕೆ ಕಡಿಮೆ ಆಯಿತು. 2005ರ ಬಳಿಕ ಅವರು ಚಿತ್ರರಂಗ ತೊರೆದರು. ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಲೇ ಇಲ್ಲ. ಅಭಿಮಾನಿಗಳು ಅವರ ಬಳಿ ಕಂಬ್ಯಾಕ್ ಮಾಡುವಂತೆ ಅನೇಕ ಬಾರಿ ಕೋರಿದ್ದರು.

ಇದನ್ನೂ ಓದಿ: ‘ಬಾಲಿವುಡ್​ಗೆ ಅಪರಿಚಿತನಾಗಿದ್ದ ಯಶ್ 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್​ ಯಶಸ್ಸು ಯಾವ ಲೆಕ್ಕ?’ ಆರ್​ಜಿವಿ

ಟಬು ಚಿತ್ರರಂಗದಲ್ಲಿ ಇನ್ನೂ ಬೇಡಿಕೆ ಇಟ್ಟುಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ಹಿಟ್ ಆಗುತ್ತಿವೆ. 2022ರಲ್ಲಿ ರಿಲೀಸ್ ಆದ ‘ಭೂಲ್​ ಭುಲಯ್ಯ 2’ ಹಾಗೂ ‘ದೃಶ್ಯಂ 2’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿದವು. ಎರಡೂ ಚಿತ್ರಗಳು ಸೂಪರ್ ಹಿಟ್​ ಎನಿಸಿಕೊಂಡವು. ಈ ಯಶಸ್ಸಿನಿಂದ ಟಬು ಬೇಡಿಕೆ ಹೆಚ್ಚಿದೆ. ಸದ್ಯ ಅಜಯ್ ದೇವಗನ್ ನಟನೆಯ ‘ಭೋಲಾ’ ಚಿತ್ರದಲ್ಲಿ ಟಬು ನಟಿಸುತ್ತಿದ್ದಾರೆ. ತಮಿಳಿನ ಸೂಪರ್ ಹಿಟ್ ಸಿನಿಮಾ ‘ಕೈದಿ’ಯ ಹಿಂದಿ ರಿಮೇಕ್ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?