AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕೆಗೆ ನಾನು ಬೇಕು, ಆದ್ರೆ ಅದು ಸಾಧ್ಯವಿಲ್ಲ: ತಬು ಮದುವೆ ಆಗದೇ ಇರಲು ಕಾರಣ ತಿಳಿದ ಅಜಯ್ ದೇವಗನ್

52 ವರ್ಷದ ಬಾಲಿವುಡ್ ನಟಿ ತಬು ಅವರು ಇನ್ನೂ ಮದುವೆಯಾಗಿಲ್ಲ. ಅವರ ಸ್ನೇಹಿತ ಅಜಯ್ ದೇವಗನ್ ಅವರು ಒಂದು ಹಳೆಯ ಸಂದರ್ಶನದಲ್ಲಿ ತಬು ಮದುವೆಯಾಗದಿರುವ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಶನದ ವಿಡಿಯೋ ತುಣುಕು ಈಗ ವೈರಲ್ ಆಗಿದೆ. ‘ತಬುಗೆ ನಾನೇ ಬೇಕು’ ಎಂದು ಹೇಳಿ ಅಜಯ್ ನಗುತ್ತಾರೆ. ಆದರೆ ಇಡೀ ಪ್ರಪಂಚದಲ್ಲಿ ತನ್ನಂತೆ ಬೇರೆ ಯಾರೂ ಇಲ್ಲ ಎಂದು ಕೂಡ ಅವರು ಹೇಳುತ್ತಾರೆ.

ಆಕೆಗೆ ನಾನು ಬೇಕು, ಆದ್ರೆ ಅದು ಸಾಧ್ಯವಿಲ್ಲ: ತಬು ಮದುವೆ ಆಗದೇ ಇರಲು ಕಾರಣ ತಿಳಿದ ಅಜಯ್ ದೇವಗನ್
ಅಜಯ್ ದೇವಗನ್, ತಬು
ಮದನ್​ ಕುಮಾರ್​
|

Updated on: Oct 25, 2024 | 3:21 PM

Share

ಬಾಲಿವುಡ್ ನಟಿ ತಬು ಅವರಿಗೆ ಈಗ 52 ವರ್ಷ. ಹಾಗಿದ್ದರೂ ಕೂಡ ಅವರು ಮದುವೆ ಆಗಿಲ್ಲ. ಬಣ್ಣದ ಲೋಕದಲ್ಲಿ ಅವರಿಗೆ ತುಂಬ ಬೇಡಿಕೆ ಇದೆ. ಹಲವಾರ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಜೊತೆ ತಬು ಅವರಿಗೆ ಆಪ್ತತೆ ಇದೆ. ಅನೇಕ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದ್ದಾರೆ. ಅಷ್ಟಕ್ಕೂ ತಬು ಅವರು ಇಷ್ಟ ವರ್ಷಗಳು ಕಳೆದರೂ ಮದುವೆ ಆಗದೇ ಇರಲು ಕಾರಣ ಏನು? ಆ ಬಗ್ಗೆ ಹಳೆಯ ಸಂದರ್ಶನವೊಂದರಲ್ಲಿ ಅಜಯ್ ದೇವಗನ್ ಅವರು ಮಾತನಾಡಿದ್ದರು. ಆ ಸಂದರ್ಶನದ ವಿಡಿಯೋ ತುಣುಕು ಈಗ ಮತ್ತೆ ವೈರಲ್ ಆಗುತ್ತಿದೆ.

‘ದೇ ದೇ ಪ್ಯಾರ್ ದೇ’ ಸಿನಿಮಾ 2019ರಲ್ಲಿ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ತಬು ಮತ್ತು ಅಜಯ್ ದೇವಗನ್ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದರು. ಆ ಚಿತ್ರದ ಪ್ರಚಾರದ ವೇಳೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಟಬು ಮದುವೆ ಬಗ್ಗೆ ಪ್ರಸ್ತಾಪ ಆಯಿತು. ತಬು ಯಾಕೆ ಇಂದಿಗೂ ಸಿಂಗಲ್ ಆಗಿದ್ದಾರೆ ಎಂಬ ವಿಷಯಕ್ಕೆ ಅಜಯ್ ದೇವಗನ್ ಅವರು ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಅಜಯ್ ದೇವಗನ್​ಗೆ ನಮಸ್ಕಾರ ಮಾಡಿಲ್ಲ ಅಂತ ಹಿರಿಯ ನಟನನ್ನೇ ಸಿನಿಮಾದಿಂದ ತೆಗೆದ ನಿರ್ಮಾಪಕ

‘ತಬು ಮದುವೆ ಆಗಬೇಕು ಅಂದರೆ ನೀವು ಹುಡುಗನನ್ನು ಹೇಗೆ ಹುಡುಕುತ್ತೀರಿ? ತಬುಗೆ ಯಾವ ರೀತಿಯ ಹುಡುಗ ಬೇಕು ಅಂತ ನನಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ನಾನು ಉತ್ತರಿಸಿದ್ದೆ. ತಬುಗೆ ನಾನು ಬೇಕು. ಆದರೆ ಆಕೆಗೆ ನಾನು ಸಿಗುವುದಿಲ್ಲ’ ಎಂದು ಹೇಳಿ ಅಜಯ್ ದೇವಗನ್ ಅವರು ನಕ್ಕಿದ್ದರು. ಅವರ ಮಾತು ಕೇಳಿ ತಬು ಕೂಡ ನಗುನಗುತ್ತಲೇ ಹುಸಿ ಕೋಪ ಮಾಡಿಕೊಂಡರು.

View this post on Instagram

A post shared by ehsas (@eh_sas12)

ಅಜಯ್​ ದೇವಗನ್ ಅವರು ತಮ್ಮ ಮಾತಿಗೆ ಕೂಡಲೇ ಸ್ಪಷ್ಟನೆ ನೀಡಿದರು. ‘ನಾನು ಬೇಕು ಅಂದರೆ, ನನ್ನ ರೀತಿಯ ಹುಡುಗ ಬೇಕು ಅಂತ. ಆದರೆ ಇಡೀ ಪ್ರಪಂಚದಲ್ಲಿ ನನ್ನ ರೀತಿ ಬೇರೆ ಯಾರೂ ಇಲ್ಲ’ ಎಂದು ಅಜಯ್​ ದೇವಗನ್ ಹೇಳಿದರು. ‘ನೀವು ಹೇಳಿದ್ದು ನನಗೆ ಅರ್ಥ ಆಯ್ತು’ ಎನ್ನುತ್ತಾ ಅಜಯ್ ದೇವಗನ್ ಕೈಗೆ ತಬು ಕಿಸ್ ಮಾಡಿದರು. ತಬು ಮತ್ತು ಅಜಯ್ ದೇವಗನ್ ಅವರು ಫ್ಯಾಮಿಲಿ ಫ್ರೆಂಡ್ಸ್​ ಕೂಡ ಹೌದು. ಅವರಿಬ್ಬರ ಒಡನಾಟ ಹಲವು ವರ್ಷಗಳದ್ದು. ಸಂದರ್ಶನದಲ್ಲಿ ಅವರಿಬ್ಬರ ನಡುವೆ ನಡೆದ ಮಾತುಕಥೆ ಕೇವಲ ತಮಾಷೆಯಾಗಿತ್ತು. ಆದರೆ ತಬು ಸಿಂಗಲ್ ಆಗಿ ಉಳಿದುಕೊಳ್ಳಲು ಕಾರಣ ಏನು ಎಂಬುದು ಕಡೆಗೂ ಬಹಿರಂಗ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ