AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್’ ಸಿನಿಮಾ ನೋಡಿ ಸೈಫ್ ಅಲಿ ಖಾನ್ ಮಗನಿಗೂ ಬಂತು ಕೋಪ

‘ಆದಿಪುರುಷ್’ ಸಿನಿಮಾವನ್ನು ಸೈಫ್ ಅಲಿ ಖಾನ್ ಮಗ ತೈಮೂರ್ ಅಲಿ ಖಾನ್​​ಗೆ ತೋರಿಸಲಾಗಿದೆ. ಆತನಿಗೆ ಈ ಸಿನಿಮಾ ಕಿಂಚಿತ್ತೂ ಇಷ್ಟ ಆಗಿಲ್ಲ. ಹಾಗಾಗಿ ಮಗನ ಬಳಿ ಸೈಫ್ ಅಲಿ ಖಾನ್ ಅವರು ಕ್ಷಮೆ ಕೇಳಿದ್ದಾರೆ! ಈ ಬಗ್ಗೆ ಅವರು ಇತ್ತೀಚೆಗಿನ ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ಆದಿಪುರುಷ್’ ಸಿನಿಮಾ ನೋಡಿ ಸೈಫ್ ಅಲಿ ಖಾನ್ ಮಗನಿಗೂ ಬಂತು ಕೋಪ
Saif Ali Khan, Taimur Ali Khan
ಮದನ್​ ಕುಮಾರ್​
|

Updated on: May 02, 2025 | 6:08 PM

Share

ನಟ ಸೈಫ್ ಅಲಿ ಖಾನ್ (Saif Ali Khan) ಅವರ ವೃತ್ತಿ ಜೀವನದಲ್ಲಿ ಅತಿ ಹೆಚ್ಚು ಟ್ರೋಲ್ ಆದ ಸಿನಿಮಾ ಎಂದರೆ ಅದು ‘ಆದಿಪುರುಷ್’. ರಾಮಾಯಣದ ಕಥೆ ಹೊಂದಿದ್ದ ಆ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿದ್ದರು. ಸಿನಿಮಾದ ಸಂಭಾಷಣೆ ಮತ್ತು ಗ್ರಾಫಿಕ್ಸ್ ಕಳಪೆ ಆಗಿದೆ ಎಂದು ಜನರು ಟ್ರೋಲ್ ಮಾಡಿದ್ದರು. ಈಗ ಅದೇ ಸಿನಿಮಾವನ್ನು ಸೈಫ್ ಅಲಿ ಖಾನ್ ಮಗ ತೈಮೂರ್ ಅಲಿ ಖಾನ್ (Taimur Ali Khan) ಕೂಡ ನೋಡಿದ್ದಾನೆ. ಆತನಿಗೂ ಈ ಸಿನಿಮಾ ಇಷ್ಟ ಆಗಿಲ್ಲ. ‘ಆದಿಪುರುಷ್’ (Adipurush) ಸಿನಿಮಾ ನೋಡಿ ತೈಮೂರ್ ಕೋಪ ಮಾಡಿಕೊಂಡ ಎಂದು ಸ್ವತಃ ಸೈಫ್ ಅಲಿ ಖಾನ್ ಹೇಳಿದ್ದಾರೆ.

ನೆಟ್​ಫ್ಲಿಕ್ಸ್​ನ ‘ಜ್ಯೂವೆಲ್ ಥೀಫ್’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಸೈಫ್ ಅಲಿ ಖಾನ್ ಮತ್ತು ಜಯದೀಪ್ ಅಹಲಾವತ್ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಈ ಸಿನಿಮಾದ ಪ್ರಚಾರದ ಸಲುವಾಗಿ ಸೈಫ್ ಅಲಿ ಖಾನ್ ಅವರನ್ನು ಜಯದೀಪ್ ಸಂದರ್ಶನ ಮಾಡಿದ್ದಾರೆ. ಈ ವೇಳೆ ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಸೈಫ್ ಹಂಚಿಕೊಂಡರು.

‘ನೀವು ನಟಿಸಿದ ಯಾವುದಾದರೂ ಸಿನಿಮಾವನ್ನು ನಿಮ್ಮ ಮಕ್ಕಳು ನೋಡಿದ್ದಾರಾ’ ಎಂದು ಜಯದೀಪ್ ಕೇಳಿದರು. ಅದಕ್ಕೆ ಉತ್ತರಿಸಿದ ಸೈಫ್, ‘ಇತ್ತೀಚೆಗೆ ನಾನು ಅವನಿಗೆ ಆದಿಪುರುಷ್ ಸಿನಿಮಾ ತೋರಿಸಿದೆ. ಆತ ನನಗೆ ಲುಕ್ ಕೊಡಲು ಶುರು ಮಾಡಿದ. ನಾನು ಅವನಲ್ಲಿ ಕ್ಷಮೆ ಕೇಳಿದೆ. ಅವನು ಓಕೆ ಅಂತ ಹೇಳಿದ. ಆತ ನನ್ನನ್ನು ಕ್ಷಮಿಸಿದ’ ಎಂದಿದ್ದಾರೆ ಸೈಫ್ ಅಲಿ ಖಾನ್.

ಇದನ್ನೂ ಓದಿ
Image
ಸೈಫ್ ಅಲಿ ಖಾನ್​ಗೆ ಇರಿದವನ ಜಾಮೀನು ಅರ್ಜಿಗೆ ವಿರೋಧ, ಮಹತ್ವದ ಅಂಶ ಬೆಳಕಿಗೆ
Image
ಸರ್ಜರಿಯ ನಂತರ ಸೈಫ್ ಇಷ್ಟು ಬೇಗ ಚೇತರಿಸಿಕೊಂಡಿದ್ದು ಹೇಗೆ? ಇಲ್ಲಿದೆ ಉತ್ತರ
Image
ಸೈಫ್ ಅಲಿ ಖಾನ್ ಪ್ರಕರಣ: ದಾಳಿಕೋರನನ್ನು ಪೊಲೀಸರು ಹಿಡಿದಿದ್ದು ಹೇಗೆ?
Image
ಸೈಫ್ ಆಸ್ಪತ್ರೆ ಸೇರಿಸಿದ ಆಟೋ ಚಾಲಕನಿ​ಗೆ ಸಿಕ್ತು ದೊಡ್ಡ ರಿವಾರ್ಡ್​

‘ಆದಿಪುರುಷ್’ ಸಿನಿಮಾದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಕೃತಿ ಸನನ್ ಅವರು ಸೀತೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೈಫ್ ಅಲಿ ಖಾನ್ ಅವರು ಮಾಡಿದ ರಾವಣನ ಪಾತ್ರದ ಗೆಟಪ್ ಸರಿ ಇರಲಿಲ್ಲ ಎಂದು ಅನೇಕರು ಟ್ರೋಲ್ ಮಾಡಿದ್ದರು. ಇದೇ ಕಾರಣದಿಂದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋಲು ಕಂಡಿತು. ಹೈಬಜೆಟ್​ನ ಚಿತ್ರವಾದರೂ ವಿಎಫ್​ಎಕ್ಸ್ ತುಂಬ ಕಳೆಪೆ ಆಗಿತ್ತು ಎಂಬುದು ಈ ಸೋಲಿಗೆ ಒಂದು ಪ್ರಮುಖ ಕಾರಣ. ನಿರ್ದೇಶಕ ಓಂ ರಾವತ್ ಅವರನ್ನು ಕೂಡ ಜನರು ಟ್ರೋಲ್ ಮಾಡಿದರು.

ಇದನ್ನೂ ಓದಿ: ‘ಕರೀನಾ ಕಪೂರ್ ಸಹವಾಸ ಮಾಡಬೇಡ’: ಸೈಫ್​ಗೆ ಎಚ್ಚರಿಕೆ ನೀಡಿದ್ದ ಅಕ್ಷಯ್ ಕುಮಾರ್

ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ದಂಪತಿಯ ಮಕ್ಕಳಾದ ತೈಮೂರ್ ಅಲಿ ಖಾನ್, ಜೇಹ್ ಅಲಿ ಖಾನ್ ತುಂಬ ಫೇಮಸ್ ಆಗಿದ್ದಾರೆ. ಅದಕ್ಕೆ ಪಾಪರಾಜಿಗಳೇ ಕಾರಣ. ಈ ಮಕ್ಕಳು ಎಲ್ಲೇ ಕಾಣಿಸಿದರೂ ಅವರ ಫೋಟೋ, ವಿಡಿಯೋ ಸಲುವಾಗಿ ಪಾಪರಾಜಿಗಳು ಮುಗಿಬೀಳುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!