Kareena Kapoor: ಗಣರಾಜ್ಯೋತ್ಸವಕ್ಕೆ ತೈಮೂರ್ ಶುಭಕೋರಿದ್ದು ಹೇಗೆ? ಕರೀನಾ ಹಂಚಿಕೊಂಡ ಫೋಟೋ ಇಲ್ಲಿದೆ

Taimur Ali Khan: ಬಾಲಿವುಡ್ ನಟಿ ಕರೀನಾ ಕಪೂರ್ ಸದ್ಯ ತಮ್ಮ ಪುತ್ರರ ಪೋಷಣೆಯಲ್ಲಿ ನಿರತರಾಗಿದ್ದಾರೆ. ಮೊದಲ ಪುತ್ರ ತೈಮೂರ್ ಇಂದು ವಿಶೇಷ ರೀತಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಿದ್ದು, ಕರೀನಾ ಚಿತ್ರ ಹಂಚಿಕೊಂಡಿದ್ದಾರೆ.

Kareena Kapoor: ಗಣರಾಜ್ಯೋತ್ಸವಕ್ಕೆ ತೈಮೂರ್ ಶುಭಕೋರಿದ್ದು ಹೇಗೆ? ಕರೀನಾ ಹಂಚಿಕೊಂಡ ಫೋಟೋ ಇಲ್ಲಿದೆ
ತೈಮೂರ್ ಸಿದ್ಧಪಡಿಸಿದ್ದರ ಫೋಟೋ ಹಂಚಿಕೊಂಡ ಕರೀನಾ (ಎಡ ಚಿತ್ರ), ಪುತ್ರನೊಂದಿಗೆ ಕರೀನಾ (ಬಲ ಚಿತ್ರ)
Follow us
| Updated By: shivaprasad.hs

Updated on:Jan 26, 2022 | 3:00 PM

ಇಂದು ದೇಶದೆಲ್ಲೆಡೆ ಗಣರಾಜ್ಯೋತ್ಸವವನ್ನು (Republic Day 2022) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಖ್ಯಾತ ಸೆಲೆಬ್ರಿಟಿಗಳು ವಿಶೇಷ ದಿನಕ್ಕೆ ಶುಭಕೋರುತ್ತಿದ್ದಾರೆ. ಬಾಲಿವುಡ್ ತಾರೆಯರೂ ಇದಕ್ಕೆ ಹೊರತಾಗಿಲ್ಲ. ನಟಿ ಕರೀನಾ ಕಪೂರ್ (Kareena Kapoor) ಕೂಡ ವಿಶೇಷ ಚಿತ್ರದ ಮೂಲಕ ಶುಭ ಕೋರಿದ್ದಾರೆ. ಅದರಲ್ಲಿ ಅವರು ಪುತ್ರ ತೈಮೂರ್​ನ ಸೃಜನಶೀಲತೆಯನ್ನು ಬಿಂಬಿಸುವ ಚಿತ್ರವೊಂದನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಮೊದಲ ಪುತ್ರ ತೈಮೂರ್ (Taimur Ali Khan) ತನ್ನದೇ ವಿಧಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದಾನೆ. ಹೌದು. ಕಿತ್ತಳೆ, ಸೇಬು ಹಾಗೂ ಕಿವಿ ಹಣ್ಣುಗಳಿಂದ ಭಾರತದ ಧ್ವಜದ ತ್ರಿವರ್ಣವನ್ನು ರಚಿಸಲು ಪ್ರಯತ್ನಿಸುವ ಮೂಲಕ ತೈಮೂರ್ ನಮನ ಸಲ್ಲಿಸಲು ಮುಂದಾಗಿದ್ದಾನೆ. ಪುತ್ರ ಮಾಡಿದ ಈ ಕೆಲಸವನ್ನು ಚಿತ್ರ ಸಮೇತ ಹಂಚಿಕೊಂಡಿರುವ ಕರೀನಾ ‘ಟಿಮ್ (ತೈಮೂರ್) ರಚಿಸಿದ ತ್ರಿವರ್ಣದ ಬ್ರೇಕ್​ಫಾಸ್ಟ್’ ಎಂದು ಬರೆದುಕೊಂಡಿದ್ದಾರೆ. ಕರೀನಾ ಹಂಚಿಕೊಂಡಿರುವ ಈ ಚಿತ್ರ ಇದೀಗ ವೈರಲ್ ಆಗಿದ್ದು, ಅಭಿಮಾನಿಗಳ ಖಾತೆಗಳಲ್ಲಿ ಮರುಹಂಚಿಕೆಯಾಗುತ್ತಿದೆ.

ಗಣರಾಜ್ಯೋತ್ಸವಕ್ಕೆ ಸೆಲೆಬ್ರಿಟಿಗಳು ಶುಭಕೋರಿದ್ದು ಹೇಗೆ? 73ನೇ ಗಣರಾಜ್ಯೋತ್ಸವಕ್ಕೆ ಬಾಲಿವುಡ್​ನ ಸೆಲೆಬ್ರಿಟಿಗಳು ಶುಭಕೋರಿದ್ದಾರೆ. ನಟ ವಿಕ್ಕಿ ಕೌಶಲ್ ‘ಸರ್ದಾರ್ ಉಧಾಮ್’ ಚಿತ್ರದ ಫೋಟೋ ಒಂದನ್ನು ಹಂಚಿಕೊಂದು ಶುಭ ಕೋರಿದ್ದಾರೆ. ನಟಿ ಕಂಗನಾ ರಣಾವತ್ ಹಾಗೂ ಕರೀನಾ ಕಪೂರ್ ಕೂಡ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಚಿತ್ರ ಹಂಚಿಕೊಂಡು ಅಭಿಮಾನಿಗಳಿಗೆ ಶುಭಕೋರಿದ್ದಾರೆ.

ಸೆಲೆಬ್ರಿಟಿಗಳು ಹಂಚಿಕೊಂಡ ಚಿತ್ರಗಳು ಇಲ್ಲಿವೆ:

Kareena Kangana and Vicky Kaushal wishes to Republic Day

ಗಣರಾಜ್ಯೋತ್ಸವಕ್ಕೆ ಕರೀನಾ, ಕಂಗನಾ ಹಾಗೂ ವಿಕ್ಕಿ ಕೌಶಲ್ ಶುಭಕೋರಿದ್ದು ಹೀಗೆ..

ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಶುಭ ಕೋರಿ, ‘ಮೌಲ್ಯಗಳನ್ನು ಎತ್ತಿಹಿಡಿದು ಎಲ್ಲರನ್ನೂ ಒಗ್ಗಟ್ಟಾಗಿಸುವ ದೇಶದ ಸಂವಿಧಾನವನ್ನು ಎತ್ತಿಹಿಡಿಯೋಣ’ ಎಂದು ಬರೆದುಕೊಂಡಿದ್ದಾರೆ. ಮತ್ತೋರ್ವ ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ಸಂವಿಧಾನದ ಚಿತ್ರವನ್ನು ಹಂಚಿಕೊಂಡು ಗಣರಾಜ್ಯೋತ್ಸವದ ಶುಭಕೋರಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

ಸೈಫ್​-ಕರೀನಾ ಮಾಡಿದ ತಪ್ಪೇನು? ಫೋಟೋ ನೋಡಿ ನಿಮಗೆ ಪತ್ತೆ ಹಚ್ಚೋಕೆ ಆಗುತ್ತಾ ನೋಡಿ

Published On - 2:57 pm, Wed, 26 January 22

Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ