Sign In

By signing in or creating an account, you agree with Associated Broadcasting Company's Terms & Conditions and Privacy Policy.

Kareena Kapoor: ಗಣರಾಜ್ಯೋತ್ಸವಕ್ಕೆ ತೈಮೂರ್ ಶುಭಕೋರಿದ್ದು ಹೇಗೆ? ಕರೀನಾ ಹಂಚಿಕೊಂಡ ಫೋಟೋ ಇಲ್ಲಿದೆ

Taimur Ali Khan: ಬಾಲಿವುಡ್ ನಟಿ ಕರೀನಾ ಕಪೂರ್ ಸದ್ಯ ತಮ್ಮ ಪುತ್ರರ ಪೋಷಣೆಯಲ್ಲಿ ನಿರತರಾಗಿದ್ದಾರೆ. ಮೊದಲ ಪುತ್ರ ತೈಮೂರ್ ಇಂದು ವಿಶೇಷ ರೀತಿಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಿದ್ದು, ಕರೀನಾ ಚಿತ್ರ ಹಂಚಿಕೊಂಡಿದ್ದಾರೆ.

Kareena Kapoor: ಗಣರಾಜ್ಯೋತ್ಸವಕ್ಕೆ ತೈಮೂರ್ ಶುಭಕೋರಿದ್ದು ಹೇಗೆ? ಕರೀನಾ ಹಂಚಿಕೊಂಡ ಫೋಟೋ ಇಲ್ಲಿದೆ
ತೈಮೂರ್ ಸಿದ್ಧಪಡಿಸಿದ್ದರ ಫೋಟೋ ಹಂಚಿಕೊಂಡ ಕರೀನಾ (ಎಡ ಚಿತ್ರ), ಪುತ್ರನೊಂದಿಗೆ ಕರೀನಾ (ಬಲ ಚಿತ್ರ)
Follow us
TV9 Web
| Updated By: shivaprasad.hs

Updated on:Jan 26, 2022 | 3:00 PM

ಇಂದು ದೇಶದೆಲ್ಲೆಡೆ ಗಣರಾಜ್ಯೋತ್ಸವವನ್ನು (Republic Day 2022) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಖ್ಯಾತ ಸೆಲೆಬ್ರಿಟಿಗಳು ವಿಶೇಷ ದಿನಕ್ಕೆ ಶುಭಕೋರುತ್ತಿದ್ದಾರೆ. ಬಾಲಿವುಡ್ ತಾರೆಯರೂ ಇದಕ್ಕೆ ಹೊರತಾಗಿಲ್ಲ. ನಟಿ ಕರೀನಾ ಕಪೂರ್ (Kareena Kapoor) ಕೂಡ ವಿಶೇಷ ಚಿತ್ರದ ಮೂಲಕ ಶುಭ ಕೋರಿದ್ದಾರೆ. ಅದರಲ್ಲಿ ಅವರು ಪುತ್ರ ತೈಮೂರ್​ನ ಸೃಜನಶೀಲತೆಯನ್ನು ಬಿಂಬಿಸುವ ಚಿತ್ರವೊಂದನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಮೊದಲ ಪುತ್ರ ತೈಮೂರ್ (Taimur Ali Khan) ತನ್ನದೇ ವಿಧಾನದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದಾನೆ. ಹೌದು. ಕಿತ್ತಳೆ, ಸೇಬು ಹಾಗೂ ಕಿವಿ ಹಣ್ಣುಗಳಿಂದ ಭಾರತದ ಧ್ವಜದ ತ್ರಿವರ್ಣವನ್ನು ರಚಿಸಲು ಪ್ರಯತ್ನಿಸುವ ಮೂಲಕ ತೈಮೂರ್ ನಮನ ಸಲ್ಲಿಸಲು ಮುಂದಾಗಿದ್ದಾನೆ. ಪುತ್ರ ಮಾಡಿದ ಈ ಕೆಲಸವನ್ನು ಚಿತ್ರ ಸಮೇತ ಹಂಚಿಕೊಂಡಿರುವ ಕರೀನಾ ‘ಟಿಮ್ (ತೈಮೂರ್) ರಚಿಸಿದ ತ್ರಿವರ್ಣದ ಬ್ರೇಕ್​ಫಾಸ್ಟ್’ ಎಂದು ಬರೆದುಕೊಂಡಿದ್ದಾರೆ. ಕರೀನಾ ಹಂಚಿಕೊಂಡಿರುವ ಈ ಚಿತ್ರ ಇದೀಗ ವೈರಲ್ ಆಗಿದ್ದು, ಅಭಿಮಾನಿಗಳ ಖಾತೆಗಳಲ್ಲಿ ಮರುಹಂಚಿಕೆಯಾಗುತ್ತಿದೆ.

ಗಣರಾಜ್ಯೋತ್ಸವಕ್ಕೆ ಸೆಲೆಬ್ರಿಟಿಗಳು ಶುಭಕೋರಿದ್ದು ಹೇಗೆ? 73ನೇ ಗಣರಾಜ್ಯೋತ್ಸವಕ್ಕೆ ಬಾಲಿವುಡ್​ನ ಸೆಲೆಬ್ರಿಟಿಗಳು ಶುಭಕೋರಿದ್ದಾರೆ. ನಟ ವಿಕ್ಕಿ ಕೌಶಲ್ ‘ಸರ್ದಾರ್ ಉಧಾಮ್’ ಚಿತ್ರದ ಫೋಟೋ ಒಂದನ್ನು ಹಂಚಿಕೊಂದು ಶುಭ ಕೋರಿದ್ದಾರೆ. ನಟಿ ಕಂಗನಾ ರಣಾವತ್ ಹಾಗೂ ಕರೀನಾ ಕಪೂರ್ ಕೂಡ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಚಿತ್ರ ಹಂಚಿಕೊಂಡು ಅಭಿಮಾನಿಗಳಿಗೆ ಶುಭಕೋರಿದ್ದಾರೆ.

ಸೆಲೆಬ್ರಿಟಿಗಳು ಹಂಚಿಕೊಂಡ ಚಿತ್ರಗಳು ಇಲ್ಲಿವೆ:

Kareena Kangana and Vicky Kaushal wishes to Republic Day

ಗಣರಾಜ್ಯೋತ್ಸವಕ್ಕೆ ಕರೀನಾ, ಕಂಗನಾ ಹಾಗೂ ವಿಕ್ಕಿ ಕೌಶಲ್ ಶುಭಕೋರಿದ್ದು ಹೀಗೆ..

ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಶುಭ ಕೋರಿ, ‘ಮೌಲ್ಯಗಳನ್ನು ಎತ್ತಿಹಿಡಿದು ಎಲ್ಲರನ್ನೂ ಒಗ್ಗಟ್ಟಾಗಿಸುವ ದೇಶದ ಸಂವಿಧಾನವನ್ನು ಎತ್ತಿಹಿಡಿಯೋಣ’ ಎಂದು ಬರೆದುಕೊಂಡಿದ್ದಾರೆ. ಮತ್ತೋರ್ವ ಖ್ಯಾತ ನಿರ್ದೇಶಕಿ ಜೋಯಾ ಅಖ್ತರ್ ಸಂವಿಧಾನದ ಚಿತ್ರವನ್ನು ಹಂಚಿಕೊಂಡು ಗಣರಾಜ್ಯೋತ್ಸವದ ಶುಭಕೋರಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು ಹೇಗೆ? ‘ಪುಷ್ಪ’ ಚಿತ್ರದ ಟ್ರೇಡ್​ ಸೀಕ್ರೆಟ್​ ಇಲ್ಲಿದೆ..

ಸೈಫ್​-ಕರೀನಾ ಮಾಡಿದ ತಪ್ಪೇನು? ಫೋಟೋ ನೋಡಿ ನಿಮಗೆ ಪತ್ತೆ ಹಚ್ಚೋಕೆ ಆಗುತ್ತಾ ನೋಡಿ

Published On - 2:57 pm, Wed, 26 January 22

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ