ಪುರುಷತ್ವದ ಸಂಕೇತಕ್ಕೆ ಹೇಳಿಮಾಡಿಸಿದ ವ್ಯಕ್ತಿ ಅಮಿತಾಭ್ ಎಂದು ಟ್ವೀಟ್ ಮಾಡಿದ ತಾಲಿಬಾನ್

80ರ ವಯಸ್ಸಿನಲ್ಲೂ ಅಮಿತಾಭ್ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ ಎಂದರೆ ಅದು ಸಣ್ಣ ಮಾತಲ್ಲ. ಹಲವು ಅನಾರೋಗ್ಯ ಸಮಸ್ಯೆಗಳಿದ್ದರೂ ಅದನ್ನು ಮೆಟ್ಟಿ ನಿಂತಿದ್ದಾರೆ. ಅವರ ಬಗ್ಗೆ ತಾಲಿಬಾನ್​ ಅವರು ಪೋಸ್ಟ್ ಒಂದನ್ನು ಮಾಡಿದ್ದಾರೆ.

ಪುರುಷತ್ವದ ಸಂಕೇತಕ್ಕೆ ಹೇಳಿಮಾಡಿಸಿದ ವ್ಯಕ್ತಿ ಅಮಿತಾಭ್ ಎಂದು ಟ್ವೀಟ್ ಮಾಡಿದ ತಾಲಿಬಾನ್
ಅಮಿತಾಭ್
Follow us
|

Updated on: Oct 07, 2023 | 2:46 PM

ಬಾಲಿವುಡ್ ನಟ ಅಮಿತಾಭ್ ಬಚ್ಚನ್ (Amitabh Bachchan) ಖ್ಯಾತಿ ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರನ್ನು ಆರಾಧಿಸುವವರು ವಿದೇಶದಲ್ಲೂ ಇದ್ದಾರೆ. ಹಲವು ದಶಕಗಳಿಂದ ಅವರು ಚಿತ್ರರಂಗಕ್ಕೆ ತಮ್ಮ ಕಲಾ ಸೇವೆ ನೀಡುತ್ತಾ ಬರುತ್ತಿದ್ದಾರೆ. 80ರ ವಯಸ್ಸಿನಲ್ಲೂ ಅಮಿತಾಭ್ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ ಎಂದರೆ ಅದು ಸಣ್ಣ ಮಾತಲ್ಲ. ಹಲವು ಅನಾರೋಗ್ಯ ಸಮಸ್ಯೆಗಳಿದ್ದರೂ ಅದನ್ನು ಮೆಟ್ಟಿ ನಿಂತಿದ್ದಾರೆ. ಅವರ ಬಗ್ಗೆ ತಾಲಿಬಾನ್​ ಅವರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಟ್ವೀಟ್ ವೈರಲ್ ಆಗುತ್ತಿದೆ.

‘ತಾಲಿಬಾನ್ ಪಿಆರ್​ ಡಿಪಾರ್ಟ್​ಮೆಂಟ್’ ಟ್ವಿಟರ್ ಖಾತೆ ಮೂಲಕ ಅಮಿತಾಭ್ ಬಚ್ಚನ್ ಇರುವ ಫೋಟೋ ಒಂದನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್​ನಲ್ಲಿ ಅಮಿತಾಭ್ ಬಗ್ಗೆ ಬರೆಯಲಾಗಿದೆ. ‘ಅಮಿತಾಭ್ ಬಚ್ಚನ್ ಓರ್ವ ಭಾರತೀಯ ನಟ. ಪುರುಷತ್ವದ ಸಂಕೇತಕ್ಕೆ ಹೇಳಿಮಾಡಿಸಿದ ವ್ಯಕ್ತಿಯಾಗಿರುವ ಅವರನ್ನು ಅಫ್ಘಾನಿಸ್ತಾನದವರು ಇಷ್ಟಪಡುತ್ತಾರೆ. ಅವರು 1980ರಲ್ಲಿ ನಮ್ಮ ಭವ್ಯವಾದ ರಾಷ್ಟ್ರಕ್ಕೆ ಭೇಟಿ ನೀಡಿದ್ದರು. ಆ ಸಂದರ್ಭದ ಅಧ್ಯಕ್ಷ ನಜೀಬುಲ್ಲಾ ಅವರು ಅಮಿತಾಭ್ ಅವರನ್ನು ಗೌರವಿಸಿದ್ದರು’ ಎಂದು ಟ್ವಿಟರ್​ನಲ್ಲಿ ಬರೆಯಲಾಗಿದೆ.

ಈ ಪೋಸ್ಟ್​ಗೆ ಚಿತ್ರವಿಚಿತ್ರ ಕಮೆಂಟ್​ಗಳು ಬಂದಿವೆ. ಮಲಯಾಳಂ ಭಾಷೆಯಲ್ಲಿ ವ್ಯಕ್ತಿಯೋರ್ವ ಕಮೆಂಟ್ ಮಾಡಿದ್ದಾನೆ. ಇದಕ್ಕೆ ತಾಲಿಬಾನ್ ಪಿಆರ್ ತಂಡ ಉತ್ತರಿಸಿದೆ. ‘ಏನಿದು ಡ್ರಾಯಿಂಗ್’ ಎಂದು ಅವರು ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರು ವಿಚಿತ್ರ ಭಂಗಿಯಲ್ಲಿರುವ ಫೋಟೋನ ಪೋಸ್ಟ್ ಮಾಡಲಾಗಿದೆ. ‘ನಮ್ಮ ಭಾಯಿಜಾನ್ ತಾಲಿಬಾನ್ ಸೇರಬಹುದೇ’ ಎಂದು ಕೇಳಲಾಗಿದೆ. ಇದಕ್ಕೆ ಉತ್ತರಿಸಿರೋ ಪಿಆರ್ ತಂಡ, ‘ಇಲ್ಲ ಇಲ್ಲ. ಅವರು ಸಲಿಂಗಕಾಮಿ. ಅವರ ಬಾಡಿ ಲಾಂಗ್ವೇಜ್ ನೋಡಿ’ ಎಂದಿದ್ದಾರೆ.

ಇದನ್ನೂ ಓದಿ: ಒಂದೇ ಸಿನಿಮಾದಲ್ಲಿ ರಜನಿಕಾಂತ್​-ಅಮಿತಾಭ್​ ಬಚ್ಚನ್​; 32 ವರ್ಷಗಳ ಬಳಿಕ ದಿಗ್ಗಜರ ಸಂಗಮ

ಅಮಿತಾಭ್ ಬಚ್ಚನ್ ನಟನೆಯ ‘ಖುದಾ ಗವಾ’ ಸಿನಿಮಾ 1992 ರಿಲೀಸ್ ಆಯಿತು. ಈ ಚಿತ್ರದ ಶೂಟಿಂಗ್​ಗಾಗಿ ಅವರು ಅಪಘಾನಿಸ್ತಾನಕ್ಕೆ ತೆರಳಿದ್ದರು. ಅಪಘಾನಿಸ್ತಾನ ಸದ್ಯ ತಾಲಿಬಾನ್ ವಶದಲ್ಲಿದೆ. ‘ಕಾಬುಲ್ ಎಕ್ಸ್​ಪ್ರೆಸ್’ ಸೇರಿ ಬಾಲಿವುಡ್​ನ ಹಲವು ಚಿತ್ರಗಳು ಇಲ್ಲಿ ಶೂಟ್ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ