AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?

ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಅವರು ಪದೇ ಪದೇ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?
ಅಮಿತಾಭ್​,ಐಶ್ವರ್ಯಾ-ರಾಹುಲ್
ರಾಜೇಶ್ ದುಗ್ಗುಮನೆ
|

Updated on:Apr 25, 2024 | 11:40 AM

Share

ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇತ್ತೀಚೆಗಿನ ಚುನಾವಣಾ ರ‍್ಯಾಲಿಗಳಲ್ಲಿ ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್ ಹೆಸರನ್ನು ಪದೇ ಪದೇ ಎಳೆದು ತರುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಮತ್ತೆ ಹಾಗೆಯೇ ಮಾಡಿದ್ದಾರೆ. ನವದೆಲಿಯಲ್ಲಿ ನಡೆದ ‘ಸಾಮಾಜಿಕ ನ್ಯಾಯ ಸಮ್ಮೇಳನ’ದಲ್ಲಿ ಅವರು ಐಶ್ವರ್ಯಾ, ಅಮಿತಾಭ್ ಜೊತೆ ವಿರಾಟ್ ಕೊಹ್ಲಿ ಹೆಸರನ್ನೂ ಹೇಳಿದ್ದಾರೆ.

‘ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ನಾನು ರಾಜಕೀಯದ ಬಗ್ಗೆ ಗಂಭೀರವಾಗಿಲ್ಲ ಎಂದು ಅವರು ಮಾಧ್ಯಮಗಳಲ್ಲಿ ಹೇಳುತ್ತಲೇ ಬರುತ್ತಿದ್ದಾರೆ. ಅವರಿಗೆ ನರೇಗಾಕ್ಕಾಗಿ, ಭೂ ಸ್ವಾಧೀನ ಕಾಯ್ದೆಗಾಗಿ ಹೋರಾಡುವುದು ಗಂಭೀರ ಅಲ್ಲವೆ? ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿ ಬಗ್ಗೆ ಮಾತನಾಡೋದು ಗಂಭೀರವೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

ಫೆಬ್ರವರಿ ತಿಂಗಳಲ್ಲೂ ರಾಹುಲ್ ಗಾಂಧಿ ಅವರು ಐಶ್ವರ್ಯಾ ಹೆಸರು ಉಲ್ಲೇಖ ಮಾಡಿದ್ದರು. ‘ರಾಮ ಮಂದಿರ ಉದ್ಘಾಟನೆ ವೇಳೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ಅಂಬಾನಿ, ಅದಾನಿ ಮೊದಲಾದ ಉದ್ಯಮಿಗಳನ್ನು ನೋಡಿದೆ. ಆದರೆ, ಒಬ್ಬೇ ಒಬ್ಬ ಬಡವನನ್ನು, ರೈತನನ್ನು, ಕಾರ್ಮಿಕನನ್ನು, ನಿರುದ್ಯೋಗಿಯನ್ನು ನೋಡಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು.

ಪದೇ ಪದೇ ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸೆಲೆಬ್ರಿಟಿಗಳಿದ್ದಾರೆ. ಆದಾಗ್ಯೂ ರಾಹುಲ್ ಗಾಂಧಿ ಅವರು ಬಚ್ಚನ್ ಕುಟುಂಬದವರನ್ನೇ ಉಲ್ಲೇಖಿಸುವುದೇಕೆ ಅನ್ನೋದು ಅನೇಕರ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:38 am, Thu, 25 April 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ