ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?

ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಅವರು ಪದೇ ಪದೇ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?
ಅಮಿತಾಭ್​,ಐಶ್ವರ್ಯಾ-ರಾಹುಲ್
Follow us
|

Updated on:Apr 25, 2024 | 11:40 AM

ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇತ್ತೀಚೆಗಿನ ಚುನಾವಣಾ ರ‍್ಯಾಲಿಗಳಲ್ಲಿ ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್ ಹೆಸರನ್ನು ಪದೇ ಪದೇ ಎಳೆದು ತರುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಮತ್ತೆ ಹಾಗೆಯೇ ಮಾಡಿದ್ದಾರೆ. ನವದೆಲಿಯಲ್ಲಿ ನಡೆದ ‘ಸಾಮಾಜಿಕ ನ್ಯಾಯ ಸಮ್ಮೇಳನ’ದಲ್ಲಿ ಅವರು ಐಶ್ವರ್ಯಾ, ಅಮಿತಾಭ್ ಜೊತೆ ವಿರಾಟ್ ಕೊಹ್ಲಿ ಹೆಸರನ್ನೂ ಹೇಳಿದ್ದಾರೆ.

‘ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ನಾನು ರಾಜಕೀಯದ ಬಗ್ಗೆ ಗಂಭೀರವಾಗಿಲ್ಲ ಎಂದು ಅವರು ಮಾಧ್ಯಮಗಳಲ್ಲಿ ಹೇಳುತ್ತಲೇ ಬರುತ್ತಿದ್ದಾರೆ. ಅವರಿಗೆ ನರೇಗಾಕ್ಕಾಗಿ, ಭೂ ಸ್ವಾಧೀನ ಕಾಯ್ದೆಗಾಗಿ ಹೋರಾಡುವುದು ಗಂಭೀರ ಅಲ್ಲವೆ? ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿ ಬಗ್ಗೆ ಮಾತನಾಡೋದು ಗಂಭೀರವೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

ಫೆಬ್ರವರಿ ತಿಂಗಳಲ್ಲೂ ರಾಹುಲ್ ಗಾಂಧಿ ಅವರು ಐಶ್ವರ್ಯಾ ಹೆಸರು ಉಲ್ಲೇಖ ಮಾಡಿದ್ದರು. ‘ರಾಮ ಮಂದಿರ ಉದ್ಘಾಟನೆ ವೇಳೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ಅಂಬಾನಿ, ಅದಾನಿ ಮೊದಲಾದ ಉದ್ಯಮಿಗಳನ್ನು ನೋಡಿದೆ. ಆದರೆ, ಒಬ್ಬೇ ಒಬ್ಬ ಬಡವನನ್ನು, ರೈತನನ್ನು, ಕಾರ್ಮಿಕನನ್ನು, ನಿರುದ್ಯೋಗಿಯನ್ನು ನೋಡಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು.

ಪದೇ ಪದೇ ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸೆಲೆಬ್ರಿಟಿಗಳಿದ್ದಾರೆ. ಆದಾಗ್ಯೂ ರಾಹುಲ್ ಗಾಂಧಿ ಅವರು ಬಚ್ಚನ್ ಕುಟುಂಬದವರನ್ನೇ ಉಲ್ಲೇಖಿಸುವುದೇಕೆ ಅನ್ನೋದು ಅನೇಕರ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:38 am, Thu, 25 April 24

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!