Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?

ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಅವರು ಪದೇ ಪದೇ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?
ಅಮಿತಾಭ್​,ಐಶ್ವರ್ಯಾ-ರಾಹುಲ್
Follow us
ರಾಜೇಶ್ ದುಗ್ಗುಮನೆ
|

Updated on:Apr 25, 2024 | 11:40 AM

ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇತ್ತೀಚೆಗಿನ ಚುನಾವಣಾ ರ‍್ಯಾಲಿಗಳಲ್ಲಿ ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್ ಹೆಸರನ್ನು ಪದೇ ಪದೇ ಎಳೆದು ತರುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಮತ್ತೆ ಹಾಗೆಯೇ ಮಾಡಿದ್ದಾರೆ. ನವದೆಲಿಯಲ್ಲಿ ನಡೆದ ‘ಸಾಮಾಜಿಕ ನ್ಯಾಯ ಸಮ್ಮೇಳನ’ದಲ್ಲಿ ಅವರು ಐಶ್ವರ್ಯಾ, ಅಮಿತಾಭ್ ಜೊತೆ ವಿರಾಟ್ ಕೊಹ್ಲಿ ಹೆಸರನ್ನೂ ಹೇಳಿದ್ದಾರೆ.

‘ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ನಾನು ರಾಜಕೀಯದ ಬಗ್ಗೆ ಗಂಭೀರವಾಗಿಲ್ಲ ಎಂದು ಅವರು ಮಾಧ್ಯಮಗಳಲ್ಲಿ ಹೇಳುತ್ತಲೇ ಬರುತ್ತಿದ್ದಾರೆ. ಅವರಿಗೆ ನರೇಗಾಕ್ಕಾಗಿ, ಭೂ ಸ್ವಾಧೀನ ಕಾಯ್ದೆಗಾಗಿ ಹೋರಾಡುವುದು ಗಂಭೀರ ಅಲ್ಲವೆ? ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿ ಬಗ್ಗೆ ಮಾತನಾಡೋದು ಗಂಭೀರವೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

ಫೆಬ್ರವರಿ ತಿಂಗಳಲ್ಲೂ ರಾಹುಲ್ ಗಾಂಧಿ ಅವರು ಐಶ್ವರ್ಯಾ ಹೆಸರು ಉಲ್ಲೇಖ ಮಾಡಿದ್ದರು. ‘ರಾಮ ಮಂದಿರ ಉದ್ಘಾಟನೆ ವೇಳೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ಅಂಬಾನಿ, ಅದಾನಿ ಮೊದಲಾದ ಉದ್ಯಮಿಗಳನ್ನು ನೋಡಿದೆ. ಆದರೆ, ಒಬ್ಬೇ ಒಬ್ಬ ಬಡವನನ್ನು, ರೈತನನ್ನು, ಕಾರ್ಮಿಕನನ್ನು, ನಿರುದ್ಯೋಗಿಯನ್ನು ನೋಡಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು.

ಪದೇ ಪದೇ ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸೆಲೆಬ್ರಿಟಿಗಳಿದ್ದಾರೆ. ಆದಾಗ್ಯೂ ರಾಹುಲ್ ಗಾಂಧಿ ಅವರು ಬಚ್ಚನ್ ಕುಟುಂಬದವರನ್ನೇ ಉಲ್ಲೇಖಿಸುವುದೇಕೆ ಅನ್ನೋದು ಅನೇಕರ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:38 am, Thu, 25 April 24

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​