AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?

ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಅವರು ಪದೇ ಪದೇ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಮತ್ತೆ ಐಶ್ವರ್ಯಾ, ಅಮಿತಾಭ್ ಹೆಸರು ಎಳೆದುತಂದ ರಾಹುಲ್ ಗಾಂಧಿ; ಹೇಳಿದ್ದೇನು?
ಅಮಿತಾಭ್​,ಐಶ್ವರ್ಯಾ-ರಾಹುಲ್
ರಾಜೇಶ್ ದುಗ್ಗುಮನೆ
|

Updated on:Apr 25, 2024 | 11:40 AM

Share

ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇತ್ತೀಚೆಗಿನ ಚುನಾವಣಾ ರ‍್ಯಾಲಿಗಳಲ್ಲಿ ಐಶ್ವರ್ಯಾ ರೈ ಹಾಗೂ ಅಮಿತಾಭ್ ಬಚ್ಚನ್ ಹೆಸರನ್ನು ಪದೇ ಪದೇ ಎಳೆದು ತರುತ್ತಿದ್ದಾರೆ. ಈಗ ರಾಹುಲ್ ಗಾಂಧಿ ಅವರು ಮತ್ತೆ ಹಾಗೆಯೇ ಮಾಡಿದ್ದಾರೆ. ನವದೆಲಿಯಲ್ಲಿ ನಡೆದ ‘ಸಾಮಾಜಿಕ ನ್ಯಾಯ ಸಮ್ಮೇಳನ’ದಲ್ಲಿ ಅವರು ಐಶ್ವರ್ಯಾ, ಅಮಿತಾಭ್ ಜೊತೆ ವಿರಾಟ್ ಕೊಹ್ಲಿ ಹೆಸರನ್ನೂ ಹೇಳಿದ್ದಾರೆ.

‘ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ನಾನು ರಾಜಕೀಯದ ಬಗ್ಗೆ ಗಂಭೀರವಾಗಿಲ್ಲ ಎಂದು ಅವರು ಮಾಧ್ಯಮಗಳಲ್ಲಿ ಹೇಳುತ್ತಲೇ ಬರುತ್ತಿದ್ದಾರೆ. ಅವರಿಗೆ ನರೇಗಾಕ್ಕಾಗಿ, ಭೂ ಸ್ವಾಧೀನ ಕಾಯ್ದೆಗಾಗಿ ಹೋರಾಡುವುದು ಗಂಭೀರ ಅಲ್ಲವೆ? ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿ ಬಗ್ಗೆ ಮಾತನಾಡೋದು ಗಂಭೀರವೇ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಸಂಪತ್ತು ಮರುಹಂಚಿಕೆ ಮಾಡಲು ರಾಹುಲ್ ಗಾಂಧಿಯೇನು ಮಾವೋವಾದಿಯಾ? ದೇವೇಗೌಡರು ಆಕ್ರೋಶ

ಫೆಬ್ರವರಿ ತಿಂಗಳಲ್ಲೂ ರಾಹುಲ್ ಗಾಂಧಿ ಅವರು ಐಶ್ವರ್ಯಾ ಹೆಸರು ಉಲ್ಲೇಖ ಮಾಡಿದ್ದರು. ‘ರಾಮ ಮಂದಿರ ಉದ್ಘಾಟನೆ ವೇಳೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ಅಂಬಾನಿ, ಅದಾನಿ ಮೊದಲಾದ ಉದ್ಯಮಿಗಳನ್ನು ನೋಡಿದೆ. ಆದರೆ, ಒಬ್ಬೇ ಒಬ್ಬ ಬಡವನನ್ನು, ರೈತನನ್ನು, ಕಾರ್ಮಿಕನನ್ನು, ನಿರುದ್ಯೋಗಿಯನ್ನು ನೋಡಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಚರ್ಚೆ ಹುಟ್ಟುಹಾಕಿತ್ತು.

ಪದೇ ಪದೇ ಬಚ್ಚನ್ ಕುಟುಂಬದ ಹೆಸರನ್ನು ರಾಹುಲ್ ಗಾಂಧಿ ಉಲ್ಲೇಖ ಮಾಡುತ್ತಿರುವುದು ಅಮಿತಾಭ್ ಅಭಿಮಾನಿಗಳಿಗೆ ಇಷ್ಟ ಆಗುತ್ತಿಲ್ಲ. ಅವರು ರಾಹುಲ್ ಗಾಂಧಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸದ್ಯ ಈ ವಿಚಾರದಲ್ಲಿ ಅಮಿತಾಭ್ ಆಗಲಿ, ಐಶ್ವರ್ಯಾ ರೈ ಆಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಬಾಲಿವುಡ್​ನಲ್ಲಿ ಸಾಕಷ್ಟು ಸೆಲೆಬ್ರಿಟಿಗಳಿದ್ದಾರೆ. ಆದಾಗ್ಯೂ ರಾಹುಲ್ ಗಾಂಧಿ ಅವರು ಬಚ್ಚನ್ ಕುಟುಂಬದವರನ್ನೇ ಉಲ್ಲೇಖಿಸುವುದೇಕೆ ಅನ್ನೋದು ಅನೇಕರ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:38 am, Thu, 25 April 24

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ