ಹೊಸ ಹಾಡಿನಲ್ಲಿ ತಮನ್ನಾ ಭರ್ಜರಿ ಡ್ಯಾನ್ಸ್; ‘ಸ್ತ್ರೀ 2’ ಚಿತ್ರದಲ್ಲಿ ಐಟಂ ಸಾಂಗ್

ಆಗಸ್ಟ್​ 15ರಂದು ಬಿಡುಗಡೆ ಆಗಲಿರುವ ‘ಸ್ತ್ರೀ 2’ ಸಿನಿಮಾದಲ್ಲಿ ತಮನ್ನಾ ಭಾಟಿಯಾ ಅವರು ಗ್ಲಾಮರಸ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಈ ಹಾಡಿನಿಂದಾಗಿ ಸಿನಿಮಾ ಮೇಲಿನ ನಿರೀಕ್ಷೆ ಡಬಲ್​ ಆಗಿದೆ. ಮಿಲಿಯನ್​ಗಟ್ಟಲೆ ವೀವ್ಸ್​ ಪಡೆದುಕೊಳ್ಳುತ್ತಿರುವ ಈ ಹಾಡಿಗೆ ಅಭಿಮಾನಿಗಳಿಂದ ಪಾಸಿಟಿವ್​ ಕಮೆಂಟ್​ ಬರುತ್ತಿವೆ. ಈ ಸಾಂಗ್​ನಿಂದ ‘ಸ್ತ್ರೀ 2’ ಸಿನಿಮಾಗೆ ಸಖತ್​ ಅನುಕೂಲ ಆಗಲಿದೆ.

ಹೊಸ ಹಾಡಿನಲ್ಲಿ ತಮನ್ನಾ ಭರ್ಜರಿ ಡ್ಯಾನ್ಸ್; ‘ಸ್ತ್ರೀ 2’ ಚಿತ್ರದಲ್ಲಿ ಐಟಂ ಸಾಂಗ್
ತಮನ್ನಾ ಭಾಟಿಯಾ
Follow us
|

Updated on: Jul 24, 2024 | 9:34 PM

ನಟಿ ತಮನ್ನಾ ಭಾಟಿಯಾ ಅವರು ಐಟಂ ಸಾಂಗ್​ಗಳ ಮೂಲಕವೂ ಹೆಚ್ಚು ಫೇಮಸ್​ ಆಗಿದ್ದಾರೆ. ಈ ಮೊದಲು ‘ಕೆಜಿಎಫ್​’, ‘ಜೈಲರ್​’ ಮುಂತಾದ ಸಿನಿಮಾಗಳ ಸ್ಪೆಷಲ್​ ಸಾಂಗ್​ಗಳಲ್ಲಿ ಕುಣಿದ ಅವರು ಈಗ ‘ಸ್ತ್ರೀ 2’ ಸಿನಿಮಾದ ಐಟಂ ಸಾಂಗ್​ನಲ್ಲಿ ಕಣ್ಮನ ಸೆಳೆಯುವಂತೆ ಡ್ಯಾನ್ಸ್​ ಮಾಡಿದ್ದಾರೆ. ಈ ಸಿನಿಮಾದ ಮೇಲೆ ಪ್ರೇಕ್ಷಕರಿಗೆ ನಿರೀಕ್ಷೆ ಹೆಚ್ಚಾಗಲು ಈ ಸಾಂಗ್ ಕಾರಣ ಆಗಿದೆ. ಐಟಂ ಸಾಂಗ್​ಗೆ ತಮನ್ನಾ ಭಾಟಿಯಾ ಅವರು ಹೊಸ ಮೆರುಗು ತುಂಬಿದ್ದಾರೆ. ಬಾಲಿವುಡ್​ ಮಂದಿ ತಮನ್ನಾ ಅವರ ಡ್ಯಾನ್ಸ್​ ನೋಡಿ ಬೆರಗಾಗಿದ್ದಾರೆ.

ಆಗಸ್ಟ್​ 15ರಂದು ‘ಸ್ತ್ರೀ 2’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಶ್ರದ್ಧಾ ಕಪೂರ್​, ರಾಜ್​ಕುಮಾರ್​ ರಾವ್​, ಅಪಾರಶಕ್ತಿ ಖುರಾನಾ, ಅಭಿಷೇಕ್​ ಬ್ಯಾನರ್ಜಿ, ಪಂಕಜ್​ ತ್ರಿಪಾಠಿ ಮುಂತಾದವರು ನಟಿಸಿದ್ದಾರೆ. 2018ರಲ್ಲಿ ‘ಸ್ತ್ರೀ’ ಸಿನಿಮಾ ಬಂದಿತ್ತು. ಆ ಚಿತ್ರದಲ್ಲಿ ನೋರಾ ಫತೇಹಿ ಅವರು ಐಟಂ ಡ್ಯಾನ್ಸ್​ ಮಾಡಿದ್ದರು. ಈಗ ಸೀಕ್ವೆಲ್​ನಲ್ಲಿ ಆ ಅವಕಾಶ ತಮನ್ನಾ ಭಾಟಿಯಾಗೆ ಸಿಕ್ಕಿದೆ. ಸಿಕ್ಕ ಅವಕಾಶವನ್ನು ತಮನ್ನಾ ಅವರು ಚೆನ್ನಾಗಿ ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: ಅನಂತ್ ಅಂಬಾನಿ ಆರತಕ್ಷತೆಗೆ ಪಳಪಳನೆ ಹೊಳೆಯುತ್ತಾ ಬಂದ ತಮನ್ನಾ ಭಾಟಿಯಾ

ಅಮರ್​ ಕೌಶಿಕ್​ ಅವರು ‘ಸ್ತ್ರೀ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ದಿನೇಶ್​ ವಿಜನ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ‘ಸ್ತ್ರೀ’ ಹಿಟ್​ ಆಗಿದ್ದರಿಂದ ‘ಸ್ತ್ರೀ 2’ ಕೂಡ ಜನರನ್ನು ಸೆಳೆಯಲಿದೆ ಎಂಬ ನಂಬಿಕೆ ಇದೆ. ಅದಕ್ಕೆ ತಕ್ಕಂತೆ ತಮನ್ನಾ ಭಾಟಿಯಾ ಅವರ ಸಾಂಗ್​ ಸದ್ದು ಮಾಡುತ್ತಿದೆ. ಯೂಟ್ಯೂಬ್​ನಲ್ಲಿ ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆಯುತ್ತಿದೆ.

‘ಜೈಲರ್​’ ಸಿನಿಮಾದಲ್ಲಿ ತಮನ್ನಾ ಭಾಟಿಯಾ ಕುಣಿದ ‘ಕಾವಾಲಯ್ಯ..’ ಹಾಡು ಜನಮೆಚ್ಚುಗೆ ಪಡೆದಿತ್ತು. ಆ ಸಿನಿಮಾದ ಗೆಲುವಿನಲ್ಲಿ ಈ ಹಾಡಿನ ಕೊಡುಗೆ ಕೂಡ ದೊಡ್ಡದು. ಅದರ ಕ್ರೆಡಿಟ್​ ತಮನ್ನಾಗೂ ಸಲ್ಲಲೇಬೇಕು. ಅಂತಹ ಮ್ಯಾಜಿಕ್​ ಈಗ ‘ಸ್ತ್ರೀ 2’ ಸಿನಿಮಾದಲ್ಲೂ ಮರುಕಳಿಸುವ ಸಾಧ್ಯತೆ ಗೋಚರಿಸಿದೆ. ಈ ಸಿನಿಮಾದ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ತಮನ್ನಾ ಅವರು ಹೆಜ್ಜೆ ಹಾಕಿದ್ದಾರೆ. ಅಭಿಮಾನಿಗಳಿಗೆ ಈ ಹಾಡು ತುಂಬ ಇಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ