AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamannaah Bhatia: ಅಕ್ರಮವಾಗಿ ಐಪಿಎಲ್ ಪ್ರಸಾರ ಮಾಡಿದ ಆ್ಯಪ್​ಗೆ ತಮನ್ನಾ ಪ್ರಮೋಷನ್​; ಸಿಕ್ತು ನೋಟಿಸ್

2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಬಳಿ ಇತ್ತು. ಯಾವುದೇ ಬ್ರಾಡಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್​​ನ ಫೇರ್​ಪ್ಲೇ ಆ್ಯಫ್​ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಈ ಆ್ಯಪ್ ಪ್ರಚಾರದಲ್ಲಿ ತಮನ್ನಾ ಭಾಗಿ ಆಗಿದ್ದರು.

Tamannaah Bhatia: ಅಕ್ರಮವಾಗಿ ಐಪಿಎಲ್ ಪ್ರಸಾರ ಮಾಡಿದ ಆ್ಯಪ್​ಗೆ ತಮನ್ನಾ ಪ್ರಮೋಷನ್​; ಸಿಕ್ತು ನೋಟಿಸ್
ತಮನ್ನಾ
ರಾಜೇಶ್ ದುಗ್ಗುಮನೆ
|

Updated on: Apr 25, 2024 | 10:59 AM

Share

ನಟಿ ತಮನ್ನಾ ಭಾಟಿಯಾ (Tamannaah Bhatia) ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆಯವರು ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಅಕ್ರಮವಾಗಿ ಐಪಿಎಲ್​ನ ಪ್ರಸಾರ ಮಾಡಿದ ಆರೋಪ ಹೊಂದಿರುವ ‘ಫೇರ್​​ಪ್ಲೇ’ ಆ್ಯಪ್​ನ ಪ್ರಚಾರದಲ್ಲಿ ನಟಿ ತಮನ್ನಾ ಭಾಟಿಯಾ ಕೂಡ ಭಾಗಿ ಆಗಿದ್ದರು ಎನ್ನಲಾಗಿದೆ. ಈ ಆ್ಯಪ್​ ಮಹದೇವ್ ಆನ್​ಲೈನ್ ಗೇಮಿಂಗ್​ ಆ್ಯಪ್​ನ ಅಂಗಸಂಸ್ಥೆ ಆಗಿದೆ. ಇದರಿಂದ ತಮನ್ನಾ ಅವರಿಗೆ ತೊಂದರೆ ಆಗೋ ಸಾಧ್ಯತೆ ಇದೆ.

ಸೆಲೆಬ್ರಿಟಿಗಳು ಹಲವು ಪ್ರಾಡಕ್ಟ್​ಗಳ ಪ್ರಚಾರ ಮಾಡುತ್ತಾರೆ. ಅನೇಕ ಬಾರಿ ತಾವು ಪ್ರಮೋಷನ್ ಮಾಡುತ್ತಿರುವ ಸಂಸ್ಥೆ ಎಂಥದ್ದು, ಅದರ ಹಿನ್ನೆಲೆ ಏನು ಎಂಬುದನ್ನು ತಿಳಿಯದೇ ದುಡ್ಡಿದಾಗಿ ಜಾಹೀರಾತು ಮಾಡಿಕೊಡುತ್ತಾರೆ. ಸಂಸ್ಥೆಗಳು ಈ ರೀತಿ ತೊಂದರೆಗೆ ಸಿಲುಕಿದಾಗ ಅದರ ಪ್ರಚಾರ ಮಾಡಿದವರೂ ವಿಚಾರಣೆ ಎದುರಿಸಬೇಕಾಗುತ್ತದೆ. ನಟಿ ತಮನ್ನಾ ವಿಚಾರದಲ್ಲಿ ಈಗ ಆಗಿರುವುದು ಹಾಗೇಯೇ.

2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಬಳಿ ಇತ್ತು. ಯಾವುದೇ ಬ್ರಾಡಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್​​ನ ಫೇರ್​ಪ್ಲೇ ಆ್ಯಫ್​ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ, ಫೇರ್​ಪ್ಲೇ ಆ್ಯಪ್ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

ಕೇವಲ ತಮನ್ನಾ ಮಾತ್ರವಲ್ಲದೆ ಗಾಯಕ ಬಾದ್​ಶಾ, ನಟ ಸಂಜಯ್ ದತ್​ಗೂ ಸಮನ್ಸ್ ನೀಡಲಾಗಿದೆ. ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವುದರಿಂದ ವಿಚಾರಣೆಗೆ ಹಾಜರಾಗಲು ಮತ್ತಷ್ಟು ಸಮಯ ಕೇಳಿದ್ದಾರೆ. ನಟಿ ತಮನ್ನಾ ಕೂಡ ಸದ್ಯ ಬ್ಯುಸಿ ಇದ್ದಾರೆ. ಹೀಗಾಗಿ, ಅವರು ವಿಚಾರಣೆಗೆ ಹೆಚ್ಚಿನ ಸಮಯ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ‘ಅವರ ಜತೆ ಹಸಿಬಿಸಿ ದೃಶ್ಯ ನೋಡುತ್ತಿರಲಿಲ್ಲ, ನನಗೆ ಇರಿಸುಮುರುಸು ಆಗುತ್ತಿತ್ತು’: ತಮನ್ನಾ

2023 ನಟಿ ತಮನ್ನಾಗೆ ಆಶಾದಾಯಕವಾಗಿತ್ತು. ‘ಲಸ್ಟ್ ಸ್ಟೋರಿಸ್ 2’ ಹಾಗೂ ‘ಜೈಲರ್’ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದರು. ಈ ವರ್ಷ ಅವರು ‘ಅರಣ್​ಮಣೈ 4’, ‘ವೇದಾ’, ‘ಸ್ತ್ರೀ 2’, ‘ಒಡೇಲಾ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಗಳ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ