AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tanushree Dutta: ‘ಕಾರಿನ​ ಬ್ರೇಕ್​ ಫೇಲ್​ ಮಾಡಿಸಿದ್ರು, ವಿಷ ಹಾಕ್ಸಿದ್ರು’; ಕೊಲೆ ಯತ್ನದ ಬಗ್ಗೆ ಬಾಯಿಬಿಟ್ಟ ನಟಿ ತನುಶ್ರೀ ದತ್ತ

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತನುಶ್ರೀ ದತ್ತ ಅವರು ಈ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮೇಲೆ ಹಲವು ಬಾರಿ ಕೊಲೆ ಪ್ರಯತ್ನ ನಡೆದಿತ್ತು ಎಂದು ಅವರು ಹೇಳಿದ್ದಾರೆ.

Tanushree Dutta: ‘ಕಾರಿನ​ ಬ್ರೇಕ್​ ಫೇಲ್​ ಮಾಡಿಸಿದ್ರು, ವಿಷ ಹಾಕ್ಸಿದ್ರು’; ಕೊಲೆ ಯತ್ನದ ಬಗ್ಗೆ ಬಾಯಿಬಿಟ್ಟ ನಟಿ ತನುಶ್ರೀ ದತ್ತ
ತನುಶ್ರೀ ದತ್ತ
TV9 Web
| Updated By: ಮದನ್​ ಕುಮಾರ್​|

Updated on:Sep 23, 2022 | 7:48 AM

Share

ನಟಿ ತನುಶ್ರೀ ದತ್ತ (Tanushree Dutta) ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಸಿನಿಮಾ ಮಾಡಿ ಎಷ್ಟು ಫೇಮಸ್​ ಆದರೋ ಅದೇ ರೀತಿ ಮೀಟೂ ಪ್ರಕರಣದ ಕಾರಣದಿಂದಲೂ ಅಷ್ಟೇ ಸುದ್ದಿಯಾದರು. ಬಾಲಿವುಡ್​ ನಟ ನಾನಾ ಪಾಟೇಕರ್​ ಮೇಲೆ ಅವರು ನಾಲ್ಕು ವರ್ಷಗಳ ಹಿಂದೆ ಅನೇಕ ಆರೋಪಗಳನ್ನು ಮಾಡಿದ್ದರು. ಭಾರತದಲ್ಲಿ ಮೀಟೂ (MeToo) ಅಭಿಯಾನದ ಬಿರುಗಾಳಿ ಹೆಚ್ಚಾಗಲು ತನುಶ್ರೀ ದತ್ತ ಅವರೇ ಮುಖ್ಯ ಕಾರಣ. ಆದರೆ ತಮಗಾದ ಶೋಷಣೆಯ ಬಗ್ಗೆ ಬಾಯಿ ಬಿಟ್ಟ ನಂತರ ಅವರ ಮೇಲೆ ಕೊಲೆ ಪ್ರಯತ್ನಗಳು (Murder Attempt) ನಡೆದಿದ್ದವು. ಆ ವಿಚಾರವನ್ನು ತನುಶ್ರೀ ದತ್ತ ಈಗ ಬಹಿರಂಗಪಡಿಸಿದ್ದಾರೆ.

ತನುಶ್ರೀ ಅವರನ್ನು ಸಾಯಿಸಬೇಕು ಎಂಬ ಉದ್ದೇಶದಿಂದ ಅವರ ಕಾರಿನ ಬ್ರೇಕ್​ ಫೇಲ್​ ಮಾಡಿಸಲಾಗಿತ್ತು. ಕುಡಿಯುವ ನೀರಿನಲ್ಲಿ ವಿಷ ಹಾಕಿಸಲಾಗಿತ್ತು. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತನುಶ್ರೀ ಅವರು ಈ ಬಗ್ಗೆ ಮಾತನಾಡಿದ್ದಾರೆ. ತಮ್ಮ ಮೇಲೆ ಹಲವು ಬಾರಿ ಕೊಲೆ ಪ್ರಯತ್ನ ನಡೆದಿತ್ತು ಎಂದು ಅವರು ಹೇಳಿದ್ದಾರೆ. ‘ಒಂದು ವೇಳೆ ನನ್ನ ಪ್ರಾಣಕ್ಕೆ ಏನಾದರೂ ಆದರೆ ನಟ ನಾನಾ ಪಾಟೇಕರ್​, ಅವರ ಲೀಗಲ್​ ಟೀಮ್​ ಹಾಗೂ ಬಾಲಿವುಡ್​ ಮಾಫಿಯಾದವರೇ ಕಾರಣ’ ಎಂದು ಈ ಹಿಂದೆ ತನುಶ್ರೀ ಹೇಳಿಕೆ ನೀಡಿದ್ದರು.

‘ಒಂದೆರಡು ಬಾರಿ ನನ್ನ ಕಾರಿನ ಬ್ರೇಕ್​ ಫೇಲ್​ ಮಾಡಿಸಿದರು. ಅದರಿಂದ ನನಗೆ ಒಮ್ಮೆ ಅಪಘಾತವಾಯಿತು. ನನ್ನ ಮೂಳೆ ಮುರಿಯಿತು. ಚೇತರಿಸಿಕೊಳ್ಳಲು ನನಗೆ ಹಲವು ತಿಂಗಳುಗಳೇ ಬೇಕಾದವು. ನಮ್ಮ ಮನೆಯಲ್ಲಿ ಓರ್ವ ಕೆಲಸದವಳು ಇದ್ದಳು. ಆಕೆಯನ್ನು ಯಾರೋ ನಮ್ಮ ಮನೆಗೆ ಬೇಕಂತಲೇ ಕಳಿಸಿದ್ದರು ಎನಿಸುತ್ತದೆ. ಕುಡಿಯುವ ನೀರಿನಲ್ಲಿ ಆಕೆ ಏನೋ ಬೆರೆಸುತ್ತಿದ್ದಳು ಎಂಬುದು ನನ್ನ ಅನುಮಾನ. ಕ್ರಮೇಣ ನನ್ನ ಆರೋಗ್ಯ ಹದಗೆಟ್ಟಿತು’ ಎಂದಿದ್ದಾರೆ ತನುಶ್ರೀ ದತ್ತ.

ಇದನ್ನೂ ಓದಿ
Image
Ashitha First Reaction: ಆಶಿತಾ ಮೀಟೂ ವಿವಾದ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ‘ಬಾ ಬಾರೋ ರಸಿಕ’ ಚಿತ್ರದ ನಟಿ
Image
Ashitha: ಕನ್ನಡ ಚಿತ್ರರಂಗದ ಕಹಿ ಸತ್ಯ ಅನಾವರಣ; ಮತ್ತೆ ಮೀಟೂ ಬಿರುಗಾಳಿ ಎಬ್ಬಿಸಿದ ನಟಿ ಆಶಿತಾ
Image
Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ
Image
ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

ಮೀಟೂ ವಿವಾದ ಭುಗಿಲೆದ್ದ ಬಳಿಕ ತನುಶ್ರೀ ಅವರು ಮತ್ತೆ ಬಾಲಿವುಡ್​ಗೆ ಮರಳಬೇಕು ಎಂದು ತೀರ್ಮಾನಿಸಿದ್ದರು. ಅನೇಕ ಪ್ರಾಜೆಕ್ಟ್​ಗಳಿಗೆ ಮಾತುಕತೆ ಕೂಡ ನಡೆದಿತ್ತು. ಆದರೆ ಮಾಫಿಯಾದ ಕಾರಣದಿಂದ ಆ ಎಲ್ಲ ಪ್ರಾಜೆಕ್ಟ್​ಗಳು ಕೈ ತಪ್ಪಿಹೋಗುವಂತಾಯಿತು ಎಂದು ಅವರು ಹೇಳಿದ್ದಾರೆ. ಒಂದು ಕಾಲದಲ್ಲಿ ತನುಶ್ರೀ ಬಹುಬೇಡಿಕೆಯ ಹೀರೋಯಿನ್​ ಆಗಿದ್ದರು.

ತನುಶ್ರೀ ಮೊದಲ ಬಾರಿ ನಟಿಸಿದ್ದು 2005ರಲ್ಲಿ ತೆರೆಕಂಡ ‘ಆಶಿಕ್​ ಬನಾಯಾ ಆಪ್ನೆ’ ಸಿನಿಮಾದಲ್ಲಿ. ಆ ಚಿತ್ರದಲ್ಲಿ ಅವರು ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದರು. ನಂತರ ಅವರಿಗೆ ತುಂಬ ಜನಪ್ರಿಯತೆ ಸಿಕ್ಕಿತು. 2010ರ ಬಳಿಕ ಅವರು ಯಾವುದೇ ಚಿತ್ರದಲ್ಲಿ ನಟಿಸಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:20 am, Fri, 23 September 22

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,