AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ಸಿನಿಮಾ ವೀಕ್ಷಿಸಿದ ಟೀಮ್ ಇಂಡಿಯಾ; ಪೂರ್ತಿ ಆಡಿ ಬುಕ್

ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಧುರಂಧರ್’ ಸಿನಿಮಾ ನೋಡಿ ಎಂಜಾಯ್ ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಇತ್ತೀಚೆಗೆ ಬಿಡುವು ಮಾಡಿಕೊಂಡ ಲಖನೌನಲ್ಲಿ ಈ ಸಿನಿಮಾವನ್ನು ವೀಕ್ಷಿಸಿದ್ದಾರೆ. ಇದರಿಂದಾಗಿ ಸಿನಿಮಾದ ಹವಾ ಇನ್ನಷ್ಟು ಜಾಸ್ತಿ ಆಗಿದೆ. ಈಗಾಗಲೇ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗಿದೆ.

‘ಧುರಂಧರ್’ ಸಿನಿಮಾ ವೀಕ್ಷಿಸಿದ ಟೀಮ್ ಇಂಡಿಯಾ; ಪೂರ್ತಿ ಆಡಿ ಬುಕ್
Team India, Dhurandhar
ಮದನ್​ ಕುಮಾರ್​
|

Updated on: Dec 16, 2025 | 6:23 PM

Share

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ (Dhurandhar) ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಸಿನಿಮಾವನ್ನು ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಕಲೆಕ್ಷನ್ 400 ಕೋಟಿ ರೂಪಾಯಿ ಸಮೀಪಿಸುತ್ತಿದೆ. ನೈಜ ಘಟನೆಗಳನ್ನು ಆಧರಿಸಿದ ಈ ಚಿತ್ರದಲ್ಲಿ ರಣವೀರ್ ಸಿಂಗ್ (Ranveer Singh) ಜೊತೆ ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್, ಆರ್. ಮಾಧವನ್ ಮುಂತಾದವರು ಅಭಿನಯಿಸಿದ್ದಾರೆ. ಈ ಸಿನಿಮಾದ ಕ್ರೇಜ್ ಎಷ್ಟರಮಟ್ಟಿಗೆ ಇದೆ ಎಂದರೆ ಟೀಮ್ ಇಂಡಿಯಾ (Team India) ಆಟಗಾರರರು ಕೂಡ ‘ಧುರಂಧರ್’ ವೀಕ್ಷಿಸಿದ್ದಾರೆ. ಅವರಿಗಾಗಿ ಇಡೀ ಆಡಿ ಬುಕ್ ಮಾಡಲಾಗಿತ್ತು.

ಡಿಸೆಂಬರ್ 17ರಂದು ಇಂಡಿಯಾ ವರ್ಸಸ್ ಸೌತ್ ಆಫ್ರಿಕಾ ಟಿ20 ಪಂದ್ಯ ನಡೆಯಲಿದೆ. ಅದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಲಖನೌ ತಲುಪಿದ್ದಾರೆ. ಸೋಮವಾರ (ಡಿಸೆಂಬರ್ 15) ರಿಲ್ಯಾಕ್ಸ್ ಮೂಡ್​​ನಲ್ಲಿ ಇದ್ದ ಆಟಗಾರರು ಸಮಯ ಮಾಡಿಕೊಂಡು ಸಿನಿಮಾ ನೋಡಲು ತೆರಳಿದ್ದಾರೆ. ಲಖನೌನ ಮಲ್ಟಿಪ್ಲೆಕ್ಸ್​​ನಲ್ಲಿ ಈ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಟೀಮ್ ಇಂಡಿಯಾ ಆಟಗಾರರಿಗಾಗಿ ಸೋಮವಾರ ರಾತ್ರಿ 8.10ರ ಶೋ ಬುಕ್ ಆಗಿತ್ತು. ಸಿನಿಮಾ ಮುಗಿದಾಗ ಮಧ್ಯರಾತ್ರಿ 12.10 ಆಗಿತ್ತು. ಕ್ಯಾಪ್ಟನ್ ಸೂರ್ಯಕುಮಾರ್ ಯಾಧವ್, ಕೋಚ್ ಗೌತಮ್ ಗಂಭೀರ್, ಉಪ ನಾಯಕ ಶುಭಮನ್ ಗಿಲ್ ಜೊತೆ ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಅರ್ಷದೀಪ್ ಸಿಂಗ್ ಮುಂತಾದ ಆಟಗಾರರು ಸಿನಿಮಾ ನೋಡಿ ಎಂಜಾಯ್ ಮಾಡಿದರು.

ಟೀಮ್ ಇಂಡಿಯಾ ಆಟಗಾರರು ಹಾಗೂ ಅವರ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಈ ಪ್ರದರ್ಶನದಲ್ಲಿ ಅವಕಾಶ ಇರಲಿಲ್ಲ. ಆಟಗಾರರ ಭದ್ರತೆ ಮತ್ತು ಅನುಕೂಲದ ದೃಷ್ಟಿಯಿಂದ ಪೂರ್ತಿ ಆಡಿಯನ್ನು ಬುಕ್ ಮಾಡಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ಟೀಮ್ ಇಂಡಿಯಾ ಆಟಗಾರರು ‘ಧುರಂಧರ್’ ನೋಡಿದ ಬಳಿಕ ಚಿತ್ರಕ್ಕೆ ಇನ್ನಷ್ಟು ಪ್ರಚಾರ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ‘ಧುರಂಧರ್’ ಯಶಸ್ಸಿನ ಬೆನ್ನಲ್ಲೇ ರಿಲೀಸ್ ಆಯ್ತು ‘ಬಾರ್ಡರ್ 2’ ಸಿನಿಮಾ ಟೀಸರ್

ಆದಿತ್ಯ ಧಾರ್ ಅವರು ‘ಧುರಂಧರ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಭಾರತದ ಗೂಢಾಚಾರಿಗಳು ನಡೆಸಿದ ಕಾರ್ಯಾಚರಣೆಯನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ನೈಜ ಘಟನೆಗಳಿಗೆ ಕೆಲವು ಕಾಲ್ಪನಿಕ ಅಂಶಗಳನ್ನು ಸೇರಿಸಿ ಸಿನಿಮಾ ಸಿದ್ಧಪಡಿಸಲಾಗಿದೆ. ಸಿನಿಮಾದ ಅವಧಿ 3 ಗಂಟೆ 32 ನಿಮಿಷ ಇದ್ದರೂ ಕೂಡ ಜನರು ತಾಳ್ಮೆಯಿಂದ ವೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ