AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಗಾಯಕ ದಿಲ್ಜಿತ್ ದೊಸ್ಸಾಂಜ್​ಗೆ ನೊಟೀಸ್ ನೀಡಿದ ತೆಲಂಗಾಣ ಸರ್ಕಾರ

ಜನಪ್ರಿಯ ಪಂಜಾಬಿ ಸಂಗೀತಗಾರ ಮತ್ತು ನಟ ದಿಲ್ಜೀತ್ ದೊಸ್ಸಾಂಜ್​ಗೆ ತೆಲಂಗಾಣ ಸರ್ಕಾರ ನೋಟೀಸ್ ನೀಡಿದೆ. ದಿಲ್ಜೀತ್​ ಲೈವ್ ಕಾನ್ಸರ್ಟ್​ ಇಂದು ಹೈದರಾಬಾದ್​ನಲ್ಲಿದ್ದು, ದಿಲ್ಜೀತ್ ಕೆಲವು ಹಾಡುಗಳನ್ನು ಹಾಡಬಾರದೆಂದು ಸರ್ಕಾರ ಸೂಚನೆ ನೀಡಿದೆ.

ಖ್ಯಾತ ಗಾಯಕ ದಿಲ್ಜಿತ್ ದೊಸ್ಸಾಂಜ್​ಗೆ ನೊಟೀಸ್ ನೀಡಿದ ತೆಲಂಗಾಣ ಸರ್ಕಾರ
ಮಂಜುನಾಥ ಸಿ.
|

Updated on: Nov 15, 2024 | 10:49 AM

Share

ದಿಲ್ಜೀತ್ ದೊಸ್ಸಾಂಜ್, ಭಾರತ ಮಾತ್ರವಲ್ಲ ವಿಶ್ವ ಸಂಗೀತ ಕ್ಷೇತ್ರದಲ್ಲಿ ಗಟ್ಟಿಯಾಗಿ ಕೇಳಿ ಬರುತ್ತಿರುವ ಹೆಸರು ಇದು. ಹಾಲಿವುಡ್ ಪಾಪ್ ತಾರೆಯರ ರೀತಿಯಲ್ಲಿ ದಿಲ್ಜೀತ್ ದೊಸ್ಸಾಂಜ್ ಅವರ ಲೈವ್ ಕಾನ್ಸರ್ಟ್​ಗಳು ನಡೆಯುತ್ತಿವೆ. ಆಸ್ಟ್ರೇಲಿಯಾ, ಲಂಡನ್, ನ್ಯೂಯಾರ್ಕ್​ ಇನ್ನಿತರೆ ಮಹಾನಗರಗಳಲ್ಲಿ ಸಹ ದಿಲ್ಜಿತ್​ರ ಲೈವ್ ಕಾನ್ಸರ್ಟ್ ನೋಡಲು ಲಕ್ಷಾಂತರ ಮಂದಿ ಬರುತ್ತಿದ್ದಾರೆ. ಭಾರತದಲ್ಲಂತೂ ದಿಲ್ಜೀತ್​ರ ಕಾನ್ಸರ್ಟ್​ ಟಿಕೆಟ್​ಗಳು ಲಕ್ಷಾಂತರ ರೂಪಾಯಿಗೆ ಮಾರಾಟವಾಗುತ್ತಿವೆ. ಇದೀಗ ದಿಲ್ಜೀತ್​ ದೊಸ್ಸಾಂಜ್​ಗೆ ತೆಲಂಗಾಣ ಸರ್ಕಾರ ನೊಟೀಸ್ ನೀಡಿದೆ.

ದಿಲ್ಜಿತ್ ದೊಸ್ಸಾಂಜ್, ‘ದಿಲ್ಲುಮಿನಾಟಿ’ ಹೆಸರಿ ಲೈವ್ ಕಾನ್ಸರ್ಟ್ ಟೂರ್ ಮಾಡುತ್ತಿದ್ದಾರೆ. ಭಾರತದ ಹಲವು ನಗರಗಳಲ್ಲಿ ತಮ್ಮ ಶೋ ನಡೆಸಿಕೊಡಲಿದ್ದಾರೆ. ಇದೀಗ ತೆಲಂಗಾಣದ ಹೈದರಾಬಾದ್​ನಲ್ಲಿ ದಿಲ್ಜಿತ್ ದೊಸ್ಸಾಂಗ್ ಶೋ ನಡೆಸಿಕೊಡಲಿದ್ದು, ಶೋಗೆ ಮುನ್ನ, ತೆಲಂಗಾಣ ಸರ್ಕಾರ ದಿಲ್ಜಿತ್​ಗೆ ನೊಟೀಸ್ ನೀಡಿದ್ದು, ಕೆಲವು ಹಾಡುಗಳನ್ನು ಹಾಡದಂತೆ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಹಾಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದೆ.

ನವೆಂಬರ್ 15 ಅಂದರೆ ಇಂದು ರಾತ್ರಿ ದಿಲ್ಜೀತ್​ರ ಶೋ ಹೈದರಾಬಾದ್​ನಲ್ಲಿ ನಡೆಯಲಿದ್ದು, ಶೋಗೆ ಮುನ್ನ ಸರ್ಕಾರ ನೊಟೀಸ್ ನೀಡಿದ್ದು, ಡ್ರಗ್ಸ್, ಮದ್ಯ, ಹಿಂಸೆಯ ಕುರಿತಾದ ಹಾಡುಗಳನ್ನು ವೇದಿಕೆಯಲ್ಲಿ ಹಾಡುವಂತಿಲ್ಲ ಎಂದು ದಿಲ್ಜಿತ್ ದೊಸ್ಸಾಂಗ್​ಗೆ ತೆಲಂಗಾಣ ಸರ್ಕಾರ ಹೇಳಿದೆ. ಅಲ್ಲದೆ, ವೇದಿಕೆ ಮೇಲೆ ಮಕ್ಕಳನ್ನು ಕರೆತರುವಂತಿಲ್ಲ, ಇದು ಡಬ್ಲುಎಚ್​ಓ ನಿಯಮಕ್ಕೆ ವಿರುದ್ಧ ಆಗಿರಲಿದೆ ಎಂದು ಸಹ ಸರ್ಕಾರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:ಪುಟ್ಟ ಬಾಲಕಿಗೆ ಫ್ರೀ ಟಿಕೆಟ್ ನೀಡಿದ ಗಾಯಕ ದಿಲ್ಜಿತ್ ದೊಸಾಂಜ್; ವಿಡಿಯೋ ವೈರಲ್

ಈ ಹಿಂದೆ ದಿಲ್ಜಿತ್ ದೊಸ್ಸಾಂಗ್, ದೆಹಲಿ, ಜೈಪುರ ಹಾಗೂ ಚಂಡೀಘಡಗಳಲ್ಲಿ ಶೋ ಮಾಡಿದ್ದು, ಆ ಶೋಗಳಲ್ಲಿ ಡ್ರಗ್ಸ್, ಮದ್ಯ, ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು ಹಾಡಿದ್ದರು. ಈ ಬಗ್ಗೆ ಟ್ವಿಟ್ಟರ್ ಬಳಕೆದಾರರೊಬ್ಬರು ವಿಡಿಯೋ ಮಾಡಿ ಅಪ್​ಲೋಡ್ ಮಾಡಿದ್ದರು. ಇದು ವೈರಲ್ ಆಗಿದ್ದು, ಟ್ವಿಟ್ಟರ್​ನಲ್ಲಿ ವಿರೋಧಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಮುಂಚಿತವಾಗಿ ಎಚ್ಚೆತ್ತುಕೊಂಡಿರುವ ತೆಲಂಗಾಣ ಸರ್ಕಾರ, ಮಾದಕ ವಸ್ತು, ಮದ್ಯ ಸೇವನೆ ಮತ್ತು ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು ಹಾಡಬಾರದೆಂದು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಹಾಡು ಹಾಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದೆ.

ಅಕ್ಟೋಬರ್ 26 ರಿಂದ ದಿಲ್ಜೀತ್​ರ ಇಂಡಿಯಾ ಟೂರ್ ಪ್ರಾರಂಭ ಆಗಿದೆ. ಹೈದರಾಬಾದ್​ನಲ್ಲಿ ಇಂದು ಶೋ ನಡೆಯುತ್ತಿದ್ದು, ಮುಂದಿನ ಶೋ ಬೆಂಗಳೂರಿನಲ್ಲಿ ನಡೆಯಲಿದೆ. ಹೈದರಾಬಾದ್​ನ ಶೋ ಟಿಕೆಟ್​ಗಳು ಮುಂಚಿತವಾಗಿಯೇ ಪೂರ್ಣವಾಗಿ ಮಾರಾಟಗೊಂಡಿದ್ದವು. ಇಂದು ಸಹ ಸಾವಿರಾರು ಮಂದಿ ಅಭಿಮಾನಿಗಳು ದಿಲ್ಜೀತ್​ರ ಶೋಗೆ ಹಾಜರಾಗುವ ನಿರೀಕ್ಷೆ ಇದೆ. ದಿಲ್ಜಿತ್, ಸ್ಥಳೀಯ ಗಾಯಕರೊಬ್ಬರೊಟ್ಟಿಗೆ ಸೇರಿಕೊಂಡು ಈ ಶೋಗಳನ್ನು ನಡೆಸಿಕೊಡುತ್ತಾರೆ. ಇಂದು ಯಾರು ದಿಲ್ಜೀತ್ ಶೋಗೆ ಜೊತೆ ಆಗುತ್ತಾರೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂದು ಬಾರದ ಜನ
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್
ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್