AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ‘ಫಿಲ್ಮ್​ ಫೇರ್​’ ಪ್ರಶಸ್ತಿ ವಿರುದ್ಧ ಹಲವು ಆರೋಪ ಮಾಡಿದ ಕಂಗನಾ ರಣಾವತ್​; ಬೇರೆ ನಟಿಯರಿಗೂ ಅವಮಾನ

Kangana Ranaut | Filmfare: ಕಂಗನಾ ರಣಾವತ್​ ಅವರು ‘ಫಿಲ್ಮ್​ ಫೇರ್​’ ಆಯೋಜಕರ ಮೇಲೆ ಹಲವು ಆರೋಪಗಳನ್ನು ಹೊರಿಸಿದ್ದಾರೆ. ಬಾಲಿವುಡ್​ನ ಕೆಲವು ನಟಿಯರನ್ನು ‘ಸಾಧಾರಣ’ ಎಂದು ಅವರು ಜರಿದಿದ್ದಾರೆ.

Kangana Ranaut: ‘ಫಿಲ್ಮ್​ ಫೇರ್​’ ಪ್ರಶಸ್ತಿ ವಿರುದ್ಧ ಹಲವು ಆರೋಪ ಮಾಡಿದ ಕಂಗನಾ ರಣಾವತ್​; ಬೇರೆ ನಟಿಯರಿಗೂ ಅವಮಾನ
ಕಂಗನಾ ರಣಾವತ್
TV9 Web
| Edited By: |

Updated on:Aug 22, 2022 | 7:35 AM

Share

ನಟಿ ಕಂಗನಾ ರಣಾವತ್ (Kangana Ranaut) ಅವರು ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ. ಎಲ್ಲ ವಿಚಾರದಲ್ಲೂ ಅವರು ವಿವಾದ ಮಾಡಿಕೊಳ್ಳುತ್ತಾರೆ. ಈಗ ಅವರು ‘ಫಿಲ್ಮ್​ ಫೇರ್​’ (Filmfare) ಪ್ರಶಸ್ತಿ ವಿರುದ್ಧ ಗರಂ ಆಗಿದ್ದಾರೆ. ಆಯೋಜಕರ ಮೇಲೆ ಅನೇಕ ಆರೋಪಗಳನ್ನು ಅವರು ಹೊರಿಸಿದ್ದಾರೆ. ಅಷ್ಟೇ ಅಲ್ಲದೇ, ಈ ಬಾರಿ ‘ಅತ್ಯುತ್ತಮ ನಟಿ’ ವಿಭಾಗದಲ್ಲಿ ಸ್ಪರ್ಧಿಸಲು ನಾಮಿನೇಟ್​ ಆದ ಇತರೆ ನಟಿಯರನ್ನು ‘ಸಾಧಾರಣ’ ಎಂದು ಜರಿಯುವ ಮೂಲಕ ಅವಮಾನ ಮಾಡಿದ್ದಾರೆ. ಕಂಗನಾ ರಣಾವತ್​ ಅವರ ಈ ಮಾತುಗಳು ಚರ್ಚೆ ಹುಟ್ಟುಹಾಕಿವೆ. ಇತ್ತೀಚಿನ ವರ್ಷಗಳಲ್ಲಿ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಆದರೂ ಕೂಡ ಅವರು ಸದಾ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಆಗಿರುವುದು ಇಂಥ ಕಿರಿಕ್​ಗಳೇ ಹೊರತು ಬೇರೇನೂ ಅಲ್ಲ. ಸದ್ಯ ಅವರು ‘ಫಿಲ್ಮ್​ ಫೇರ್​’ ವಿಚಾರದಲ್ಲಿ ವಿವಾದ (Controversy) ಮಾಡಿಕೊಂಡಿದ್ದಾರೆ.

67ನೇ ಸಾಲಿನ ‘ಫಿಲ್ಮ್​ ಫೇರ್​’ ಪ್ರಶಸ್ತಿಯ ‘ಅತ್ಯುತ್ತಮ ನಟಿ’ ವಿಭಾಗದಲ್ಲಿ ವಿದ್ಯಾ ಬಾಲನ್​ (ಶೇರ್ನಿ ಮತ್ತು ಜಸ್ಲಾ), ತಾಪ್ಸಿ ಪನ್ನು (ರಶ್ಮಿ ರಾಕೆಟ್​), ಕೃತಿ ಸನೋನ್​ (ಮಿಮಿ), ಕಿಯಾರಾ ಅಡ್ವಾಣಿ (ಶೇರ್ಷಾ), ಪರಿಣೀತಿ ಚೋಪ್ರಾ (ಸಂದೀಪ್ ಔರ್​ ಪಿಂಕಿ ಫರಾರ್​), ಕಂಗನಾ ರಣಾವತ್​ (ತಲೈವಿ) ಅವರನ್ನು ನಾಮಿನೇಟ್​ ಮಾಡಲಾಗಿದೆ. ಇದು ಕಂಗನಾಗೆ ಸಮಾಧಾನ ತರಿಸಿಲ್ಲ.

‘ಪ್ರಶಸ್ತಿ ಸಮಾರಂಭಕ್ಕೆ ಹಾಜರಾಗದಿದ್ದರೆ ಮತ್ತು ವೇದಿಕೆಯಲ್ಲಿ ಡ್ಯಾನ್ಸ್ ಮಾಡದಿದ್ದರೆ ಪ್ರಶಸ್ತಿ ಸಿಗುವುದಿಲ್ಲ ಎಂದು ಫಿಲ್ಮ್​ ಫೇರ್​ ಆಯೋಜಕರು 2013ರಲ್ಲೇ ನನಗೆ ಸ್ಪಷ್ಟವಾಗಿ ಹೇಳಿದ್ದರು. ನೈತಿಕವಾಗಿ ಸರಿಯಲ್ಲದ ಯಾವುದೇ ಕಾರ್ಯಕ್ರಮಕ್ಕೂ ನಾನು ಬರುವುದಿಲ್ಲ ಅಂತ ಅವರಿಗೆ ನಾನು ಆಗಲೇ ಹೇಳಿದ್ದೆ’ ಎಂದಿದ್ದಾರೆ ಕಂಗನಾ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

‘ಸಮಾರಂಭಕ್ಕೆ ಬಾರದೇ ಇರುವವರಿಗೆ ಪ್ರಶಸ್ತಿ ಕೊಡುವುದಿಲ್ಲ ಎಂದು ಅವರ ನಿಯಮವೇ ಇರುವಾಗ ನಾಮನಿರ್ದೇಶನ ಮಾಡುವುದು ಯಾಕೆ? ಸಾಧಾರಣ ನಟಿಯರ ವಿರುದ್ಧ ನನ್ನನ್ನು ಕಣಕ್ಕಿಳಿಸಿ, ಅನೇಕ ಬಾರಿ ಹತಾಶೆಯಿಂದ ಬ್ಲಾಕ್​ ಮೇಲ್​ ಕರೆಗಳನ್ನು ಮಾಡುವುದು ಯಾಕೆ’ ಎಂದು ಕಂಗನಾ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಫಿಲ್ಮ್​ ಫೇರ್​ ವಿರುದ್ಧ ಅವರು ಕೇಸ್​ ಹಾಕುವುದಾಗಿಯೂ ತಿಳಿಸಿದ್ದಾರೆ.

‘2014ರಿಂದ ನಾನು ಇಂಥ ಪ್ರಶಸ್ತಿ ಪ್ರದಾನ ಸಮಾರಂಭಗಳನ್ನು ಬ್ಯಾನ್​ ಮಾಡಿದ್ದೇನೆ. ಇಂದಿಗೂ ಅವರು ನನ್ನನ್ನು ನಾಮಿನೇಟ್​ ಮಾಡುತ್ತಿದ್ದಾರೆ ಎಂಬುದು ತಿಳಿದು ಅಚ್ಚರಿ ಆಯಿತು. ಇಂಥ ಭ್ರಷ್ಟ ನಡೆಯ ವಿರುದ್ಧ ನಾನು ಕೇಸ್​ ಹಾಕುತ್ತೇನೆ’ ಎಂದು ಕಂಗನಾ ಹೇಳಿದ್ದಾರೆ, ಇದಕ್ಕೆ ತಿರುಗೇಟು ನೀಡಿರುವ ‘ಫಿಲ್ಮ್​ ಫೇರ್​’ ಆಯೋಜಕರು ಈ ಬಾರಿಯ ನಾಮಿನೇಷನ್​ ಪಟ್ಟಿಯಿಂದ ಕಂಗನಾ ಹೆಸರನ್ನು ತೆಗೆದು ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 22 August 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ