AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ!

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?
ಕಂಗನಾ ರಣಾವತ್
TV9 Web
| Edited By: |

Updated on: Sep 11, 2021 | 3:30 PM

Share

ಬಾಲಿವುಡ್​ ಸಿನಿಮಾಗಳು ಯಾವಾಗಲೂ ಕೋಟಿ ಲೆಕ್ಕದಲ್ಲೇ ವ್ಯವಹಾರ ಮಾಡುತ್ತವೆ. ಅದರಲ್ಲೂ ಸ್ಟಾರ್​ ಕಲಾವಿದರ ಚಿತ್ರಗಳು ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯುತ್ತವೆ. ಹಾಗಾಗಿ ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ಮೇಲೆ ಹೆಚ್ಚು ಭರವಸೆ ಇಟ್ಟುಕೊಳ್ಳಲಾಗಿತ್ತು. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬಂದಿರುವ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಆದರೆ ಬಾಕ್ಸ್​ ಆಫೀಸ್​ ಗಳಿಕೆಯನ್ನು ನೋಡಿದರೆ ಯಾಕೋ ನಿರಾಸೆ ಆಗುವಂತಿದೆ.

ಗಣೇಶ ಚತುರ್ಥಿ ಪ್ರಯುಕ್ತ ಸೆ.10ರಂದು ‘ತಲೈವಿ’ ಸಿನಿಮಾ ಎಲ್ಲೆಡೆ ಬಿಡುಗಡೆ ಆಗಿದೆ. ಹಿಂದಿ, ತೆಲುಗು ಮತ್ತು ತಮಿಳು ವರ್ಷನ್​ಗಳಲ್ಲಿ ಈ ಸಿನಿಮಾ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ! ತಮಿಳು, ತೆಲುಗು ವರ್ಷನ್​ಗಳ ಕಲೆಕ್ಷನ್​ ಸೇರಿಸಿದರೂ ಮೊದಲ ದಿನ 1 ಕೋಟಿ ರೂ. ದಾಟಿಲ್ಲ ಎನ್ನಲಾಗುತ್ತಿದೆ.

ಗಲ್ಲಾಪೆಟ್ಟಿಗೆಯಲ್ಲಿ ‘ತಲೈವಿ’ ಸಿನಿಮಾ ಮುಗ್ಗರಿಸಲು ಹಲವು ಕಾರಣಗಳಿವೆ. ತಮಿಳುನಾಡಿನ ರಾಜಕೀಯದಲ್ಲಿ ಸಾಧನೆ ಮಾಡಿದ ಜಯಲಲಿತಾ ಜೀವನದ ಬಗ್ಗೆ ತಿಳಿದುಕೊಳ್ಳಲು ಉತ್ತರ ಭಾರತದ ಮಂದಿಗೆ ಅಷ್ಟೇನೂ ಉತ್ಸಾಹ ಇಲ್ಲ. ಇನ್ನು, ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಅಲ್ಲದೆ, ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೊನಾ ಭಯದಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಿಲ್ಲ.

ಶೀಘ್ರದಲ್ಲೇ ಈ ಸಿನಿಮಾ ಓಟಿಟಿ ಮೂಲಕ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಚಿತ್ರತಂಡವೇ ಹೇಳಿಕೊಂಡಿದೆ. ಹೇಗಿದ್ದರೂ ಓಟಿಟಿಯಲ್ಲಿ ಬರಲಿದೆ ಎಂದ ಮೇಲೆ ಈಗಲೇ ಚಿತ್ರಮಂದಿರಕ್ಕೆ ಹೋಗಿ ಯಾಕೆ ನೋಡಬೇಕು ಎಂಬ ಲೆಕ್ಕಾಚಾರದಲ್ಲೂ ಪ್ರೇಕ್ಷಕರು ಹಿಂದೇಟು ಹಾಕಿರುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದಾಗಿ ಮೊದಲ ದಿನವೇ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ‘ತಲೈವಿ’ ಮುಗ್ಗರಿಸಿದೆ. ಹಾಗಿದ್ದರೂ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಂಗನಾ ನಟನೆಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಜಯಲಲಿತಾ ಅವರ ನಿಜಜೀವನದ ಘಟನೆಗಳನ್ನು ಸಿನಿಮೀಯವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರ ಮುಂದಿನ ದಿನಗಳಲ್ಲಾದರೂ ಗಲ್ಲಾಪೆಟ್ಟಿಗೆಯಲ್ಲಿ ಚೇತರಿಸಿಕೊಳ್ಳುತ್ತೋ ಇಲ್ಲವೋ ಎಂಬ ಕೌತುಕ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಕಂಗನಾ ರಣಾವತ್ ಮುಂದಿನ ನಿಲ್ದಾಣ ರಾಜಕೀಯ; ‘ತಲೈವಿ’ ಬೆನ್ನಲ್ಲೇ ಮಹತ್ವದ ನಿರ್ಧಾರ, ಯಾವ ಪಕ್ಷ?

 ಕಂಗನಾ ‘ತಲೈವಿ’ಗೆ ಸಂಕಷ್ಟ; ನಡೆದೇ ಇರದ ದೃಶ್ಯ ತೋರಿಸಿ ಸಂಕಷ್ಟಕ್ಕೆ ಸಿಲುಕಿದ ನಿರ್ದೇಶಕ  

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?