ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ!

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?
ಕಂಗನಾ ರಣಾವತ್
Follow us
| Updated By: ಮದನ್​ ಕುಮಾರ್​

Updated on: Sep 11, 2021 | 3:30 PM

ಬಾಲಿವುಡ್​ ಸಿನಿಮಾಗಳು ಯಾವಾಗಲೂ ಕೋಟಿ ಲೆಕ್ಕದಲ್ಲೇ ವ್ಯವಹಾರ ಮಾಡುತ್ತವೆ. ಅದರಲ್ಲೂ ಸ್ಟಾರ್​ ಕಲಾವಿದರ ಚಿತ್ರಗಳು ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯುತ್ತವೆ. ಹಾಗಾಗಿ ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ಮೇಲೆ ಹೆಚ್ಚು ಭರವಸೆ ಇಟ್ಟುಕೊಳ್ಳಲಾಗಿತ್ತು. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬಂದಿರುವ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಆದರೆ ಬಾಕ್ಸ್​ ಆಫೀಸ್​ ಗಳಿಕೆಯನ್ನು ನೋಡಿದರೆ ಯಾಕೋ ನಿರಾಸೆ ಆಗುವಂತಿದೆ.

ಗಣೇಶ ಚತುರ್ಥಿ ಪ್ರಯುಕ್ತ ಸೆ.10ರಂದು ‘ತಲೈವಿ’ ಸಿನಿಮಾ ಎಲ್ಲೆಡೆ ಬಿಡುಗಡೆ ಆಗಿದೆ. ಹಿಂದಿ, ತೆಲುಗು ಮತ್ತು ತಮಿಳು ವರ್ಷನ್​ಗಳಲ್ಲಿ ಈ ಸಿನಿಮಾ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ! ತಮಿಳು, ತೆಲುಗು ವರ್ಷನ್​ಗಳ ಕಲೆಕ್ಷನ್​ ಸೇರಿಸಿದರೂ ಮೊದಲ ದಿನ 1 ಕೋಟಿ ರೂ. ದಾಟಿಲ್ಲ ಎನ್ನಲಾಗುತ್ತಿದೆ.

ಗಲ್ಲಾಪೆಟ್ಟಿಗೆಯಲ್ಲಿ ‘ತಲೈವಿ’ ಸಿನಿಮಾ ಮುಗ್ಗರಿಸಲು ಹಲವು ಕಾರಣಗಳಿವೆ. ತಮಿಳುನಾಡಿನ ರಾಜಕೀಯದಲ್ಲಿ ಸಾಧನೆ ಮಾಡಿದ ಜಯಲಲಿತಾ ಜೀವನದ ಬಗ್ಗೆ ತಿಳಿದುಕೊಳ್ಳಲು ಉತ್ತರ ಭಾರತದ ಮಂದಿಗೆ ಅಷ್ಟೇನೂ ಉತ್ಸಾಹ ಇಲ್ಲ. ಇನ್ನು, ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಅಲ್ಲದೆ, ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೊನಾ ಭಯದಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಿಲ್ಲ.

ಶೀಘ್ರದಲ್ಲೇ ಈ ಸಿನಿಮಾ ಓಟಿಟಿ ಮೂಲಕ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಚಿತ್ರತಂಡವೇ ಹೇಳಿಕೊಂಡಿದೆ. ಹೇಗಿದ್ದರೂ ಓಟಿಟಿಯಲ್ಲಿ ಬರಲಿದೆ ಎಂದ ಮೇಲೆ ಈಗಲೇ ಚಿತ್ರಮಂದಿರಕ್ಕೆ ಹೋಗಿ ಯಾಕೆ ನೋಡಬೇಕು ಎಂಬ ಲೆಕ್ಕಾಚಾರದಲ್ಲೂ ಪ್ರೇಕ್ಷಕರು ಹಿಂದೇಟು ಹಾಕಿರುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದಾಗಿ ಮೊದಲ ದಿನವೇ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ‘ತಲೈವಿ’ ಮುಗ್ಗರಿಸಿದೆ. ಹಾಗಿದ್ದರೂ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಂಗನಾ ನಟನೆಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಜಯಲಲಿತಾ ಅವರ ನಿಜಜೀವನದ ಘಟನೆಗಳನ್ನು ಸಿನಿಮೀಯವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರ ಮುಂದಿನ ದಿನಗಳಲ್ಲಾದರೂ ಗಲ್ಲಾಪೆಟ್ಟಿಗೆಯಲ್ಲಿ ಚೇತರಿಸಿಕೊಳ್ಳುತ್ತೋ ಇಲ್ಲವೋ ಎಂಬ ಕೌತುಕ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಕಂಗನಾ ರಣಾವತ್ ಮುಂದಿನ ನಿಲ್ದಾಣ ರಾಜಕೀಯ; ‘ತಲೈವಿ’ ಬೆನ್ನಲ್ಲೇ ಮಹತ್ವದ ನಿರ್ಧಾರ, ಯಾವ ಪಕ್ಷ?

 ಕಂಗನಾ ‘ತಲೈವಿ’ಗೆ ಸಂಕಷ್ಟ; ನಡೆದೇ ಇರದ ದೃಶ್ಯ ತೋರಿಸಿ ಸಂಕಷ್ಟಕ್ಕೆ ಸಿಲುಕಿದ ನಿರ್ದೇಶಕ  

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?