AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?

ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ!

ಹೀನಾಯವಾಗಿ ಮುಗ್ಗರಿಸಿದ ‘ತಲೈವಿ’; ಮೊದಲ ದಿನ ಕಂಗನಾ ರಣಾವತ್​ ಚಿತ್ರ ಗಳಿಸಿದ್ದೆಷ್ಟು?
ಕಂಗನಾ ರಣಾವತ್
TV9 Web
| Edited By: |

Updated on: Sep 11, 2021 | 3:30 PM

Share

ಬಾಲಿವುಡ್​ ಸಿನಿಮಾಗಳು ಯಾವಾಗಲೂ ಕೋಟಿ ಲೆಕ್ಕದಲ್ಲೇ ವ್ಯವಹಾರ ಮಾಡುತ್ತವೆ. ಅದರಲ್ಲೂ ಸ್ಟಾರ್​ ಕಲಾವಿದರ ಚಿತ್ರಗಳು ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯುತ್ತವೆ. ಹಾಗಾಗಿ ಕಂಗನಾ ರಣಾವತ್​ ನಟನೆಯ ‘ತಲೈವಿ’ ಸಿನಿಮಾ ಮೇಲೆ ಹೆಚ್ಚು ಭರವಸೆ ಇಟ್ಟುಕೊಳ್ಳಲಾಗಿತ್ತು. ಜಯಲಲಿತಾ ಬಯೋಪಿಕ್​ ಆಗಿ ಮೂಡಿಬಂದಿರುವ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇತ್ತು. ಆದರೆ ಬಾಕ್ಸ್​ ಆಫೀಸ್​ ಗಳಿಕೆಯನ್ನು ನೋಡಿದರೆ ಯಾಕೋ ನಿರಾಸೆ ಆಗುವಂತಿದೆ.

ಗಣೇಶ ಚತುರ್ಥಿ ಪ್ರಯುಕ್ತ ಸೆ.10ರಂದು ‘ತಲೈವಿ’ ಸಿನಿಮಾ ಎಲ್ಲೆಡೆ ಬಿಡುಗಡೆ ಆಗಿದೆ. ಹಿಂದಿ, ತೆಲುಗು ಮತ್ತು ತಮಿಳು ವರ್ಷನ್​ಗಳಲ್ಲಿ ಈ ಸಿನಿಮಾ ತೆರೆಕಂಡಿದೆ. ಹಿಂದಿ ಪ್ರೇಕ್ಷಕರು ‘ತಲೈವಿ’ ಬಗ್ಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಮೂಲಗಳ ಪ್ರಕಾರ ಹಿಂದಿ ವರ್ಷನ್​ನಿಂದ ಮೊದಲ ದಿನ ಈ ಚಿತ್ರ ಗಳಿಸಿರುವುದು ಕೇವಲ 20 ಲಕ್ಷ ರೂ. ಮಾತ್ರ! ತಮಿಳು, ತೆಲುಗು ವರ್ಷನ್​ಗಳ ಕಲೆಕ್ಷನ್​ ಸೇರಿಸಿದರೂ ಮೊದಲ ದಿನ 1 ಕೋಟಿ ರೂ. ದಾಟಿಲ್ಲ ಎನ್ನಲಾಗುತ್ತಿದೆ.

ಗಲ್ಲಾಪೆಟ್ಟಿಗೆಯಲ್ಲಿ ‘ತಲೈವಿ’ ಸಿನಿಮಾ ಮುಗ್ಗರಿಸಲು ಹಲವು ಕಾರಣಗಳಿವೆ. ತಮಿಳುನಾಡಿನ ರಾಜಕೀಯದಲ್ಲಿ ಸಾಧನೆ ಮಾಡಿದ ಜಯಲಲಿತಾ ಜೀವನದ ಬಗ್ಗೆ ತಿಳಿದುಕೊಳ್ಳಲು ಉತ್ತರ ಭಾರತದ ಮಂದಿಗೆ ಅಷ್ಟೇನೂ ಉತ್ಸಾಹ ಇಲ್ಲ. ಇನ್ನು, ಹಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿಲ್ಲ. ಅಲ್ಲದೆ, ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೊನಾ ಭಯದಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಿಲ್ಲ.

ಶೀಘ್ರದಲ್ಲೇ ಈ ಸಿನಿಮಾ ಓಟಿಟಿ ಮೂಲಕ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಚಿತ್ರತಂಡವೇ ಹೇಳಿಕೊಂಡಿದೆ. ಹೇಗಿದ್ದರೂ ಓಟಿಟಿಯಲ್ಲಿ ಬರಲಿದೆ ಎಂದ ಮೇಲೆ ಈಗಲೇ ಚಿತ್ರಮಂದಿರಕ್ಕೆ ಹೋಗಿ ಯಾಕೆ ನೋಡಬೇಕು ಎಂಬ ಲೆಕ್ಕಾಚಾರದಲ್ಲೂ ಪ್ರೇಕ್ಷಕರು ಹಿಂದೇಟು ಹಾಕಿರುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದಾಗಿ ಮೊದಲ ದಿನವೇ ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ‘ತಲೈವಿ’ ಮುಗ್ಗರಿಸಿದೆ. ಹಾಗಿದ್ದರೂ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಂಗನಾ ನಟನೆಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಜಯಲಲಿತಾ ಅವರ ನಿಜಜೀವನದ ಘಟನೆಗಳನ್ನು ಸಿನಿಮೀಯವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರ ಮುಂದಿನ ದಿನಗಳಲ್ಲಾದರೂ ಗಲ್ಲಾಪೆಟ್ಟಿಗೆಯಲ್ಲಿ ಚೇತರಿಸಿಕೊಳ್ಳುತ್ತೋ ಇಲ್ಲವೋ ಎಂಬ ಕೌತುಕ ನಿರ್ಮಾಣ ಆಗಿದೆ.

ಇದನ್ನೂ ಓದಿ:

ಕಂಗನಾ ರಣಾವತ್ ಮುಂದಿನ ನಿಲ್ದಾಣ ರಾಜಕೀಯ; ‘ತಲೈವಿ’ ಬೆನ್ನಲ್ಲೇ ಮಹತ್ವದ ನಿರ್ಧಾರ, ಯಾವ ಪಕ್ಷ?

 ಕಂಗನಾ ‘ತಲೈವಿ’ಗೆ ಸಂಕಷ್ಟ; ನಡೆದೇ ಇರದ ದೃಶ್ಯ ತೋರಿಸಿ ಸಂಕಷ್ಟಕ್ಕೆ ಸಿಲುಕಿದ ನಿರ್ದೇಶಕ  

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ