AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಹಾಟ್ ದೃಶ್ಯಗಳಿಗೆ ಸಿಬಿಎಫ್​​ಸಿ ಕತ್ತರಿ, ‘ಥಮಾ’ಕ್ಕೆ ಯು/ಎ

Rashmika Mandanna: ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ‘ಥಮ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ರಶ್ಮಿಕಾ ಮಂದಣ್ಣ ಬಲು ಹಾಟ್ ಆಗಿ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೀಗ ಸಿಬಿಎಫ್​​ಸಿಯು ರಶ್ಮಿಕಾರ ಕೆಲ ಹಾಟ್ ದೃಶ್ಯಗಳಿಗೆ ಕತ್ತರಿ ಹಾಕಿದೆ. ರಶ್ಮಿಕಾ ದೃಶ್ಯಗಳಿಗೆ ಮಾತ್ರವಲ್ಲದೆ ಇನ್ನೂ ಕೆಲ ದೃಶ್ಯಗಳಿಗೆ ಕತ್ತರಿ ಹಾಕಿಸಿದೆ.

ರಶ್ಮಿಕಾ ಹಾಟ್ ದೃಶ್ಯಗಳಿಗೆ ಸಿಬಿಎಫ್​​ಸಿ ಕತ್ತರಿ, ‘ಥಮಾ’ಕ್ಕೆ ಯು/ಎ
Rashmika Mandanna
ಮಂಜುನಾಥ ಸಿ.
|

Updated on: Oct 19, 2025 | 2:53 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಾಲಿವುಡ್​​ನ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ರಣ್​​ಬೀರ್ ಕಪೂರ್, ಸಲ್ಮಾನ್ ಖಾನ್, ಕಾರ್ತಿಕ್ ಆರ್ಯನ್ ಅಂಥಹಾ ಸ್ಟಾರ್​​ಗಳ ಜೊತೆಗೆ ನಟಿಸಿದ್ದಾರೆ. ದಕ್ಷಿಣದಲ್ಲಿ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಿಂದ ಗಮನ ಸೆಳೆದಿದ್ದ ರಶ್ಮಿಕಾ ಇದೀಗ ಬಾಲಿವುಡ್​​ಗೆ ಹೋಗಿ ಹಾಟ್ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇಷ್ಟು ವರ್ಷ ಗ್ಲಾಮರಸ್ ಪಾತ್ರಗಳಿಂದ ದೂರವಿದ್ದ ರಶ್ಮಿಕಾ ಇದೀಗ ಬಾಲಿವುಡ್​​ನ ಬೇಡಿಕೆಗೆ ತಕ್ಕಂತೆ ಮೈ ಚಳಿ ಬಿಟ್ಟಿದ್ದಾರೆ. ರಶ್ಮಿಕಾ ‘ಗ್ಲಾಮರಸ್’ ಆಗಿ ಕಾಣಿಸಿಕೊಂಡಿರುವ ‘ಥಮ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇತ್ತೀಚೆಗೆ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದುಕೊಂಡಿದೆ. ಸಿಬಿಎಫ್​​ಸಿಯು ರಶ್ಮಿಕಾರ ಹಾಟ್ ಅವತಾರಕ್ಕೆ ಕತ್ತರಿ ಹಾಕಿದ್ದಾರೆ.

‘ಥಮ’ ಸಿನಿಮಾನಲ್ಲಿ ದೆವ್ವದ ಪಾತ್ರದಲ್ಲಿ ರಶ್ಮಿಕಾ ನಟಿಸಿದ್ದು, ಬಲು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾನಲ್ಲಿ ಐಟಂ ಹಾಡೊಂದಕ್ಕೆ ಬಲು ಮಾದಕವಾಗಿ ಹೆಜ್ಜೆ ಸಹ ಹಾಕಿದ್ದಾರೆ. ಅಲ್ಲದೆ ನಾಯಕ ಆಯುಷ್ಮಾನ್ ಖುರಾನಾ ಜೊತೆಗೆ ಶೃಂಗಾರ ದೃಶ್ಯಗಳಲ್ಲಿ ನಟಿಸಿದ್ದಾರೆ. ಕೆಲವು ಕಿಸ್ಸಿಂಗ್ ದೃಶ್ಯಗಳಲ್ಲಿಯೂ ಸಹ ಭಾಗಿ ಆಗಿದ್ದಾರೆ. ಆದರೆ ರಶ್ಮಿಕಾರ ಹಾಟ್​​ನೆಸ್​​ಗೆ ಸಿಬಿಎಫ್​​ಸಿ ಬ್ರೇಕ್ ಹಾಕಿದ್ದು, ಕಿಸ್ಸಿಂಗ್ ದೃಶ್ಯಕ್ಕೆ ಕತ್ತರಿ ಹಾಕಿದೆ.

ಸಿಬಿಎಫ್​​ಸಿ ಅವರು ರಶ್ಮಿಕಾ ಹಾಗೂ ಆಯುಷ್ಮಾನ್ ಅವರ ಕಿಸ್ಸಿಂಗ್ ದೃಶ್ಯದ ಅವಧಿಯನ್ನು ಕಡಿಮೆ ಮಾಡಿದ್ದಾರೆ. ಕಿಸ್ಸಿಂಗ್ ದೃಶ್ಯದ ಐದು ಸೆಕೆಂಡ್​​ಗೆ ಕತ್ತರಿ ಹಾಕಿದ್ದಾರೆ ಅಲ್ಲದೆ, ಕೆಲ ತೀರಾ ಗ್ಲಾಮರಸ್ ಆದ ದೃಶ್ಯಗಳಿಗೂ ಸಹ ಕತ್ತರಿ ಹಾಕುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಸಿಹಿ ತಿನಿಸು ಕಂಡು ಮುಖ ಹಿಂಡಿದ ರಶ್ಮಿಕಾ ಮಂದಣ್ಣ

ಇವು ಮಾತ್ರವೇ ಅಲ್ಲದೆ ಸಿನಿಮಾನಲ್ಲಿ ‘ಆಜಾದಿ’ ಎಂಬ ಪದಕ್ಕೂ ಸಹ ಸಿಬಿಎಫ್​​ಸಿ ಕತ್ತರಿ ಹಾಕಿದೆ. ‘ಆಜಾದಿ ದೂಂಗಾ’ (ಸ್ವಾತಂತ್ರ್ಯ ಕೊಡಿಸುತ್ತೇನೆ) ಎಂಬ ಡೈಲಾಗ್ ಅನ್ನು ತೆಗೆಯುವಂತೆ ಸೂಚಿಸಿದ್ದು ಅದರ ಬದಲಿಗೆ ಚಿತ್ರತಂಡವು ‘ಅಯ್ಯಾಷಿ ಕರಾತಾ ಹೂ’ (ಮಜಾ ಮಾಡಿಸುತ್ತೇನೆ) ಎಂಬ ಸಂಭಾಷಣೆ ಸೇರಿಸಿದೆ. ಇದು ಮಾತ್ರವೇ ಅಲ್ಲದೆ ‘ಅಲೆಕ್ಸಾಂಡರ್’ ಪದವನ್ನು ತೆಗೆದು ಹಾಕಿದೆ. ಅದರ ಬದಲಿಗೆ ಚಿತ್ರತಂಡ ‘ಸಿಖಂಧರ್’ ಪದವನ್ನು ಸೇರಿಸಿದೆ. ಸಿನಿಮಾದಲ್ಲಿದ್ದ ‘ಅಶ್ವತ್ಥಾಮ’ ಸಂಭಾಷಣೆಯನ್ನು ಸಹ ಮ್ಯೂಟ್ ಮಾಡಲಾಗಿದೆ. ಇದೊಂದು ಹಾರರ್ ಸಿನಿಮಾ ಆಗಿದ್ದು ಸಿನಿಮಾನಲ್ಲಿದ್ದ ರಕ್ತ ಕುಡಿಯುವ ಶಬ್ದವನ್ನು ಸಹ ಮ್ಯೂಟ್ ಮಾಡಲಾಗಿದೆ. ಸಿನಿಮಾಕ್ಕೆ ಅಂತಿಮವಾಗಿ ಯು/ಎ ಪ್ರಮಾಣ ಪತ್ರ ನೀಡಲಾಗಿದೆ.

‘ಥಮ’ ರಶ್ಮಿಕಾರ ಮೊದಲ ಹಾರರ್ ಸಿನಿಮಾ ಆಗಿದ್ದು, ಸಿನಿಮಾನಲ್ಲಿ ಆಯುಷ್ಮಾನ್ ಖುರಾನಾ ನಾಯಕ. ನವಾಜುದ್ಧೀನ್ ಸಿದ್ಧಿಖಿ ವಿಲನ್. ಸಿನಿಮಾ ಅನ್ನು ಮ್ಯಾಡ್​​ಲಾಕ್ ಸ್ಟುಡಿಯೋಸ್ ನಿರ್ಮಾಣ ಮಾಡಿದೆ. ನಿರ್ದೇಶನ ಮಾಡಿರುವುದು ಆದಿತ್ಯ ಸರ್ಪೋಟ್ಧಾರ್. ಸಿನಿಮಾ ಅಕ್ಟೋಬರ್ 21 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ