AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಭೇಟಿಯಾದ ನಟ ಜಾನ್ ಅಬ್ರಹಾಂ

‘ದಿ ಡಿಪ್ಲೊಮ್ಯಾಟ್’ ಚಿತ್ರ ಮಾರ್ಚ್​ 14ಕ್ಕೆ ತೆರೆಕಾಣುತ್ತಿದೆ. ಜಾನ್ ಅಬ್ರಹಾಂ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಜಾನ್ ಅಬ್ರಹಾಂ ಭೇಟಿಯಾಗಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ.

ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಭೇಟಿಯಾದ ನಟ ಜಾನ್ ಅಬ್ರಹಾಂ
John Abraham, S Jaishankar
ಮದನ್​ ಕುಮಾರ್​
|

Updated on:Mar 13, 2025 | 10:44 PM

Share

ನವದೆಹಲಿ, 13 ಮಾರ್ಚ್ 2025: ನಟ ಜಾನ್ ಅಬ್ರಹಾಂ (John Abraham) ಅವರು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು. ಜಾನ್ ಅಬ್ರಹಾಂ ನಟಿಸಿದ ‘ದಿ ಡಿಪ್ಲೊಮ್ಯಾಟ್’ (The Diplomat) ಸಿನಿಮಾ ಮಾರ್ಚ್​ 14ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಜಾನ್ ಅಬ್ರಾಹಂ ಅವರು ಭಾರತೀಯ ರಾಯಭಾರಿ ಪಾತ್ರ ಮಾಡಿದ್ದಾರೆ. ಆ ಕಾರಣದಿಂದ ಅವರು ಸಿನಿಮಾ ಬಿಡುಗಡೆಗೂ ಮುನ್ನ ವಿದೇಶಾಂಗ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆದಿದ್ದಾರೆ. ಬಳಿಕ ಸೋಶಿಯಲ್ ಮೀಡಿಯಾದಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಈ ಭೇಟಿಯ ವೇಳೆ ಎಸ್. ಜೈಶಂಕರ್​ ಮತ್ತು ಜಾನ್ ಅಬ್ರಹಾಂ ಅವರು ಸಿನಿಮಾದ ವಿಷಯ ಮಾತ್ರವಲ್ಲದೇ ಫುಟ್​ಬಾಲ್ ಕುರಿತಾಗಿಯೂ ಮಾತನಾಡಿದರು. ಜೈಶಂಕರ್​ ಅವರಿಗೆ ಜಾನ್​ ಅಬ್ರಹಾಂ ಅವರು ಫುಟ್​ಬಾಲ್ ಜರ್ಸಿಯನ್ನು ಉಡುಗೊರೆಯಾಗಿ ನೀಡಿದರು. ‘ಜಾನ್ ಅಬ್ರಹಾಂ ಅವರ ಹೊಸ ಸಿನಿಮಾ ಡಿಪ್ಲೊಮ್ಯಾಟ್ ಬಗ್ಗೆ ಆಸಕ್ತಿಕರ ಚರ್ಚೆ ನಡೆಸಿದೆವು. ಸಿನಿಮಾ ಕುರಿತು ಮಾತ್ರವಲ್ಲದೇ ಫುಟ್​ಬಾಲ್ ಹಾಗೂ ಈಶಾನ್ಯದ ವಿಷಯಗಳ ಬಗ್ಗೆಯೂ ಮಾತನಾಡಿದೆವು’ ಎಂದು ಜೈಶಂಕರ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಗೋವಿಂದ ಜಾತಕದಲ್ಲಿ ಬರೆದಿದೆ ಎರಡನೇ ಮದುವೆ; ಆ ದಿನ ಹತ್ತಿರ ಬಂದೇ ಬಿಡ್ತಾ?
Image
37 ವರ್ಷ ಸಂಸಾರ ಮಾಡಿ ಈಗ ವಿಚ್ಛೇದನ ಪಡೆಯಲು ಮುಂದಾದ ನಟ ಗೋವಿಂದ?
Image
ಮೂಢನಂಬಿಕೆಯಿಂದ ಬಾಲಿವುಡ್​ನಲ್ಲಿ ಬೇಡಿಕೆ ಕಳೆದುಕೊಂಡ ನಟ ಗೋವಿಂದ?
Image
10 ಹೊಲಿಗೆ ಹಾಕಲಾಗಿದೆ: ಗೋವಿಂದ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ವೈದ್ಯರು

ಜಾನ್ ಅಬ್ರಹಾಂ ಅವರು ಕೂಡ ಈ ಭೇಟಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಅತ್ಯಂತ ಗೌರವದಿಂದ ಕಾಣುವ ಜೈಶಂಕರ್​ ಸರ್ ಅವರನ್ನು ಭೇಟಿ ಮಾಡಿ ಖುಷಿ ಆಯಿತು. ನಾವು ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಿದೆವು’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

‘ದಿ ಡಿಪ್ಲೊಮ್ಯಾಟ್’ ಸಿನಿಮಾದಲ್ಲಿ ವಿದೇಶಾಂಗ ವ್ಯವಹಾರಗಳ ಸಂಕೀರ್ಣ ಜಗತ್ತನ್ನು ತೋರಿಸಲಾಗುತ್ತಿದೆ. ರಿಯಲ್ ಲೈಫ್ ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. ಈ ಚಿತ್ರವು ರಾಜತಾಂತ್ರಿಕತೆಯ ಸವಾಲುಗಳು ಮತ್ತು ಸೂಕ್ಷ್ಮ ವ್ಯತ್ಯಾಸಗಳ ಮೇಲೆ ಬೆಳಕು ಚೆಲ್ಲುವ ಗುರಿಯನ್ನು ಹೊಂದಿದೆ. ಮಾರ್ಚ್​ 14ರಂದು ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ಕಳೆದ 25 ವರ್ಷಗಳಿಂದ ಸಿಹಿಯನ್ನು ತಿಂದೇ ಇಲ್ಲ ಜಾನ್ ಅಬ್ರಹಾಂ

ಈ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರ ವೃತ್ತಿ ಜೀವನದ ಭಿನ್ನವಾದ ಪಾತ್ರ ಇದೆ. ಶಿವಂ ನಾಯರ್ ಅವರು ನಿರ್ದೇಶನ ಮಾಡಿದ್ದಾರೆ. ಭೂಷಣ್ ಕುಮಾರ್, ಕೃಷನ್ ಕುಮಾರ್, ಜಾನ್ ಅಬ್ರಹಾಂ, ವಿಪುಲ್ ಡಿ. ಶಾ, ಅಶ್ವಿನ್ ವಾರ್ದೆ, ರಾಜೇಶ್ ಬಹ್ಲ್, ಸಮೀರ್ ದೀಕ್ಷಿತ್, ಜತೀಶ್ ವರ್ಮಾ, ರಾಕೇಶ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:26 pm, Thu, 13 March 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ