AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​’ ಕಲೆಕ್ಷನ್​ ನೋಡಿ ಈ ನಟನಿಗೆ ಹೊಟ್ಟೆಕಿಚ್ಚು ಆಯ್ತು; 6 ದಿನಕ್ಕೆ 79 ಕೋಟಿ ರೂ.!

The Kashmir Files Collection: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಮಾಯಿ ಮಾಡುವುದು ಖಚಿತ ಆಗಿದೆ. ತೆರೆಕಂಡು 6 ದಿನ ಆಗಿದ್ದರೂ ಕೂಡ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಕಲೆಕ್ಷನ್​ ನೋಡಿ ಈ ನಟನಿಗೆ ಹೊಟ್ಟೆಕಿಚ್ಚು ಆಯ್ತು; 6 ದಿನಕ್ಕೆ 79 ಕೋಟಿ ರೂ.!
ಆರ್​. ಮಾಧವನ್​, ದಿ ಕಾಶ್ಮೀರ್​ ಫೈಲ್ಸ್​
TV9 Web
| Edited By: |

Updated on: Mar 17, 2022 | 4:44 PM

Share

ಭಾರತೀಯ ಚಿತ್ರರಂಗದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಹೊಸ ಸಂಚಲನ ಮೂಡಿಸಿದೆ. ಮಾ.11ರಂದು ಬಿಡುಗಡೆ ಆಗಿದ್ದ ಈ ಚಿತ್ರ ಒಂದು ವಾರ ಕಳೆಯುವುದರೊಳಗೆ ಹಲವು ದಾಖಲೆಗಳನ್ನು ಮಾಡಿದೆ. ಬಾಲಿವುಡ್​ನ ದೊಡ್ಡ ಸ್ಟಾರ್​ ನಟರ ಸಿನಿಮಾಗಳನ್ನೂ ಬೀಟ್​ ಮಾಡಿ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಸೌಂಡು ಮಾಡುತ್ತಿದೆ. ಮೊದಲ ದಿನ ಈ ಚಿತ್ರ ಕೇವಲ 3.5 ಕೋಟಿ ರೂಪಾಯಿ ಕಲೆಕ್ಷನ್ (The Kashmir Files Box Office Collection)​ ಮಾಡಿತ್ತು. ಆದರೆ ಆರನೇ ದಿನದ ಅಂತ್ಯಕ್ಕೆ ಈ ಸಿನಿಮಾದ ಗಳಿಕೆ ಬರೋಬ್ಬರಿ 79 ಕೋಟಿ ರೂಪಾಯಿ ಆಗಿದೆ. ಈ ಬೆಳವಣಿಗೆ ನಿಜಕ್ಕೂ ಅಚ್ಚರಿ ಮೂಡಿಸುವಂಥದ್ದು. ಹೆಚ್ಚು ಪ್ರಚಾರವಿಲ್ಲದೇ ಬಿಡುಗಡೆಯಾದ ಸಿನಿಮಾಗೆ ನಂತರದ ದಿನಗಳಲ್ಲಿ ಭರ್ಜರಿ ಪ್ರಚಾರ ಸಿಕ್ಕಿತು. ಸಿನಿಮಾ ನೋಡಿದ ಬಳಿಕ ಪ್ರೇಕ್ಷಕರು ಎಮೋಷನಲ್​ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಎಲ್ಲ ಅಂಶಗಳ ಕಾರಣದಿಂದ ಈ ಚಿತ್ರ ಧೂಳೆಬ್ಬಿಸುತ್ತಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಕಲೆಕ್ಷನ್​ ಕಂಡು ನಟ ಆರ್​. ಮಾಧವನ್​ (R Madhavan) ಅವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಅವರು ಮಾಡಿರುವ ಟ್ವೀಟ್​ ವೈರಲ್​ ಆಗುತ್ತಿದೆ.

‘ಇದು ಅದ್ಭುತ ಮತ್ತು ಅಭೂತಪೂರ್ವವಾದದ್ದು. ಹಾಗಾಗಿ ತುಂಬ ಹೊಟ್ಟೆಕಿಚ್ಚು ಆಗುತ್ತಿದೆ. ಅದೇ ರೀತಿ ಹೆಮ್ಮೆ ಕೂಡ ಆಗುತ್ತಿದೆ. ದಿ ಕಾಶ್ಮೀರ್​ ಫೈಲ್ಸ್​ ತಂಡದ ಗೆಲವು ಕಂಡು ಖುಷಿಯಾಗಿದೆ’ ಎಂದು ಆರ್.​ ಮಾಧವನ್​ ಅವರು ಟ್ವೀಟ್​ ಮಾಡಿದ್ದಾರೆ. ಕಳೆದ ವಾರ ಅವರು ಈ ಸಿನಿಮಾದ ಟ್ರೇಲರ್​ ಶೇರ್​ ಮಾಡಿಕೊಂಡಿದ್ದರು. ಆ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದರು. ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಸಿನಿಮಾದ ಬಗ್ಗೆ ತಮಗೆ ಕೌತುಕ ಹೆಚ್ಚಿದೆ ಎಂದು ಮಾಧವನ್​ ಹೇಳಿದ್ದರು.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮೊದಲ ದಿನ, ಅಂದರೆ ಮಾ.11ರಂದು ಗಳಿಸಿದ್ದು ಬರೀ 3.55 ಕೋಟಿ ರೂಪಾಯಿ. ಅಂದು ‘ರಾಧೆ ಶ್ಯಾಮ್​’ ಸಿನಿಮಾದ ಪೈಪೋಟಿ ನಡುವೆ ಈ ಚಿತ್ರ ಕಳೆದೇ ಹೋಯಿತು ಎಂದು ಎಲ್ಲರೂ ಭಾವಿಸಿದ್ದರು. ಆದರೆ ಜನರಿಂದ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದ್ದರಿಂದ ಎರಡನೇ ದಿನವೇ ‘ದಿ ಕಾಶ್ಮೀರ್​ ಫೈಲ್ಸ್​’ ಗಳಿಕೆ ಹೆಚ್ಚಿತು. ಮಾ.12ರಂದು ಈ ಸಿನಿಮಾ 8.50 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಬೀಗಿತು. 3ನೇ ದಿನ 15.10 ಕೋಟಿ ರೂಪಾಯಿ, 4ನೇ ದಿನ 15.05 ಕೋಟಿ ರೂಪಾಯಿ, 5ನೇ ದಿನ 18 ಕೋಟಿ ರೂಪಾಯಿ ಹಾಗೂ 6ನೇ ದಿನ ಬರೋಬ್ಬರಿ 19.05 ಕೋಟಿ ರೂಪಾಯಿ ಗಳಿಸುವ ಮೂಲಕ ಈ ಸಿನಿಮಾ ಒಟ್ಟು 79 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ವಿದೇಶಿ ಗಲ್ಲಾಪೆಟ್ಟಿಗೆಯ ಆದಾಯ ಸೇರಿಸಿದರೆ ಈ ಮೊತ್ತ ಇನ್ನೂ ಹೆಚ್ಚಲಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಅಭಿಷೇಕ್​ ಅಗರ್​ವಾಲ್​ ನಿರ್ಮಾಣ ಮಾಡಿದ್ದಾರೆ. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್​ ಇಸ್ಸಾರ್​, ಪ್ರಕಾಶ್​ ಬೆಳವಾಡಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲರ ನಟನೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಕ್ಷೇತ್ರದ ಅನೇಕ ಗಣ್ಯರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಿ ಶಹಭಾಷ್​ ಎಂದಿದ್ದಾರೆ.

ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಇದು ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಶೀಘ್ರದಲ್ಲೇ 100 ಕೋಟಿ ರೂಪಾಯಿ ಕಮಾಯಿ ಮಾಡುವುದು ಖಚಿತ ಆಗಿದೆ. ತೆರೆಕಂಡು 6 ದಿನ ಆಗಿದ್ದರೂ ಸಹ ಇಂದಿಗೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

‘ಜೇಮ್ಸ್​’ ಬಂದ್ರೂ ‘ದಿ ಕಾಶ್ಮೀರ್​ ಫೈಲ್ಸ್​’ ಹೌಸ್​ಫುಲ್​: ಹೆಚ್ಚುತ್ತಲೇ ಇದೆ ಈ ಸಿನಿಮಾ ಕಲೆಕ್ಷನ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ