‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

Pallavi Joshi | Vivek Agnihotri: ವಿವೇಕ್​ ಅಗ್ನಿಹೋತ್ರಿ-ಪಲ್ಲವಿ ಜೋಶಿ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಚಿತ್ರರಂಗದ ವ್ಯಕ್ತಿಯನ್ನೇ ಮದುವೆ ಆಗಿರುವುದಕ್ಕೆ ಪಲ್ಲವಿ ಜೋಶಿ ಅವರಿಗೆ ಖುಷಿ ಇದೆ.

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ
Follow us
| Updated By: ಮದನ್​ ಕುಮಾರ್​

Updated on: Mar 27, 2022 | 9:19 AM

ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಂಡಿರುವ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾದ ಬಗ್ಗೆ ಪರ-ವಿರೋಧದ ಚರ್ಚೆ ಆಗುತ್ತಿದೆ. 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Director Vivek Agnihotri) ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರು ಅನೇಕ ವರ್ಷಗಳಿಂದ ಬಾಲಿವುಡ್​ನಲ್ಲಿ ಇದ್ದರೂ ಕೂಡ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದ್ದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ. ಈಗ ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಬಯಸುತ್ತಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ (Pallavi Joshi) ಬಗ್ಗೆಯೂ ಜನರು ಗೂಗಲ್​ನಲ್ಲಿ ಸರ್ಚ್​ ಮಾಡುತ್ತಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಪಲ್ಲವಿ ಜೋಶಿ ಕೂಡ ನಟಿಸಿದ್ದಾರೆ. ರಾಧಿಕಾ ಮೆನನ್​ ಎಂಬ ಪ್ರೊಫೆಸರ್​ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ಮದುವೆ ಆಗಿದ್ದು ಯಾವಾಗ? ಇಬ್ಬರ ನಡುವೆ ಪ್ರೀತಿ ಚಿಗುರಿದ್ದು ಹೇಗೆ? ಆ ಎಲ್ಲ ಪ್ರಶ್ನೆಗಳಿಗೆ ಈ ಲೇಖನದಲ್ಲಿದೆ ಉತ್ತರ..

ಚಿತ್ರರಂಗದಲ್ಲಿ ಪಲ್ಲವಿ ಜೋಶಿ ಮತ್ತು ವಿವೇಕ್​ ಅಗ್ನಿಹೋತ್ರಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಸಿನಿಮಾರಂಗಕ್ಕೆ ಕಾಲಿಡುವುದಕ್ಕೂ ಮುನ್ನ ಜಾಹೀರಾತು ನಿರ್ಮಾಣ ಕ್ಷೇತ್ರದಲ್ಲಿ ವಿವೇಕ್​ ಅಗ್ನಿಹೋತ್ರಿ ಕೆಲಸ ಮಾಡುತ್ತಿದ್ದರು. ಇನ್ನು, ಪಲ್ಲವಿ ಜೋಶಿ ಅವರು ಬಾಲನಟಿಯಾಗಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟವರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಪ್ಯಾರಲಲ್​ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಕಿರುತೆರೆ ಲೋಕದಲ್ಲೂ ಅವರು ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಹಲವು ವರ್ಷಗಳ ಹಿಂದೆ ಮ್ಯೂಸಿಕ್​ ಕಾರ್ಯಕ್ರಮವೊಂದರಲ್ಲಿ ಪಲ್ಲವಿ ಜೋಶಿ ಮತ್ತು ವಿವೇಕ್​ ಅಗ್ನಿಹೋತ್ರಿ ಅವರ ಮೊದಲ ಭೇಟಿ ಆಯಿತು. ಇಬ್ಬರಿಗೂ ಪರಸ್ಪರ ಪರಿಚಯ ಇರಲಿಲ್ಲ. ಕಾಮನ್​ ಫ್ರೆಂಡ್​ ಮೂಲಕ ಅವರ ನಡುವೆ ಪರಿಚಯ ಬೆಳೆಯಿತು. ಮೊದಲ ಭೇಟಿಯಲ್ಲಿ ವಿವೇಕ್​ ಅವರನ್ನು ಕಂಡಾಗ ಪಲ್ಲವಿ ಜೋಶಿಗೆ ಒಳ್ಳೆಯ ಭಾವನೆ ಮೂಡಲಿಲ್ಲ! ‘ಶಾದಿ ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪಲ್ಲವಿ​ ಮಾತನಾಡಿದ್ದರು. ‘ನನಗೆ ಬಾಯಾರಿಕೆ ಆಗಿತ್ತು. ವಿವೇಕ್​ ಅವರು ಕುಡಿಯಲು ಏನೋ ತಂದುಕೊಟ್ಟರು. ಮೊದಲಿಗೆ ನನಗೆ ಅವರು ಇಷ್ಟ ಆಗಲಿಲ್ಲ. ಅವರು ಸ್ವಲ್ಪ ಒರಟು ಸ್ವಭಾವದವರು ಅಂತ ನನಗೆ ಅನಿಸಿತು’ ಎಂದು ಪಲ್ಲವಿ ಹೇಳಿದ್ದರು.

ಆ ಭೇಟಿಯ ಬಳಿಕ ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ನಡುವೆ ಸ್ನೇಹ ಬೆಳೆಯಿತು. ಅವರಿಬ್ಬರು ಪದೇಪದೇ ಭೇಟಿ ಮಾಡಲು ಆರಂಭಿಸಿದರು. ನಂತರ ಅವರ ಸ್ನೇಹವು ಪ್ರೀತಿಯಾಗಿ ಬದಲಾಯಿತು. ಮೂರು ವರ್ಷಗಳ ಕಾಲ ರಿಲೇಶನ್​ಶಿಪ್​ನಲ್ಲಿ ಇದ್ದ ಈ ಜೋಡಿ ಹಕ್ಕಿಗಳು 1997ರ ಜೂ.28ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ನೆರವೇರಿತು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಚಿತ್ರರಂಗದ ವ್ಯಕ್ತಿಯನ್ನೇ ಮದುವೆ ಆಗಿರುವುದಕ್ಕೆ ಪಲ್ಲವಿ ಜೋಶಿ ಅವರಿಗೆ ಖುಷಿ ಇದೆ. ಯಾಕೆಂದರೆ ಕೆಲಸದ ವಾತಾವರಣದ ಬಗ್ಗೆ ಪರಸ್ಪರ ಇಬ್ಬರಿಗೂ ಅರ್ಥ ಆಗುತ್ತದೆ. ‘ಒಬ್ಬ ಡಾಕ್ಟರ್​ ಅಥವಾ ಇಂಜಿನಿಯರ್​ ಜೊತೆ ನನ್ನ ಮದುವೆ ಆಗಿದಿದ್ದರೆ ಇಂಥ ಹೊಂದಾಣಿಕೆ ಸಾಧ್ಯವಾಗುತ್ತಿರಲಿಲ್ಲ’ ಎಂಬುದು ಪಲ್ಲವಿ ಜೋಶಿ ಅಭಿಪ್ರಾಯ.

‘ದಿ ತಾಷ್ಕೆಂಟ್​ ಫೈಲ್ಸ್​’, ‘ದಿ ಕಾಶ್ಮೀರ್​ ಫೈಲ್ಸ್​’ ಮುಂತಾದ ಸಿನಿಮಾಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ಅವರು ಜೊತೆಯಾಗಿ ಕೆಲಸ ಮಾಡಿದ್ದಾರೆ. ‘ದಿ ತಾಷ್ಕೆಂಟ್​ ಫೈಲ್ಸ್​’ ಚಿತ್ರದ ನಟನೆಗಾಗಿ ಪಲ್ಲವಿ ಜೋಶಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತು.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?

ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ