AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

Pallavi Joshi | Vivek Agnihotri: ವಿವೇಕ್​ ಅಗ್ನಿಹೋತ್ರಿ-ಪಲ್ಲವಿ ಜೋಶಿ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಚಿತ್ರರಂಗದ ವ್ಯಕ್ತಿಯನ್ನೇ ಮದುವೆ ಆಗಿರುವುದಕ್ಕೆ ಪಲ್ಲವಿ ಜೋಶಿ ಅವರಿಗೆ ಖುಷಿ ಇದೆ.

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ
TV9 Web
| Edited By: |

Updated on: Mar 27, 2022 | 9:19 AM

Share

ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಂಡಿರುವ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾದ ಬಗ್ಗೆ ಪರ-ವಿರೋಧದ ಚರ್ಚೆ ಆಗುತ್ತಿದೆ. 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Director Vivek Agnihotri) ಅವರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರು ಅನೇಕ ವರ್ಷಗಳಿಂದ ಬಾಲಿವುಡ್​ನಲ್ಲಿ ಇದ್ದರೂ ಕೂಡ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಕ್ಕಿದ್ದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಿಂದ. ಈಗ ಅವರ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಬಯಸುತ್ತಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ (Pallavi Joshi) ಬಗ್ಗೆಯೂ ಜನರು ಗೂಗಲ್​ನಲ್ಲಿ ಸರ್ಚ್​ ಮಾಡುತ್ತಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಪಲ್ಲವಿ ಜೋಶಿ ಕೂಡ ನಟಿಸಿದ್ದಾರೆ. ರಾಧಿಕಾ ಮೆನನ್​ ಎಂಬ ಪ್ರೊಫೆಸರ್​ ಪಾತ್ರವನ್ನು ಅವರು ನಿಭಾಯಿಸಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ಮದುವೆ ಆಗಿದ್ದು ಯಾವಾಗ? ಇಬ್ಬರ ನಡುವೆ ಪ್ರೀತಿ ಚಿಗುರಿದ್ದು ಹೇಗೆ? ಆ ಎಲ್ಲ ಪ್ರಶ್ನೆಗಳಿಗೆ ಈ ಲೇಖನದಲ್ಲಿದೆ ಉತ್ತರ..

ಚಿತ್ರರಂಗದಲ್ಲಿ ಪಲ್ಲವಿ ಜೋಶಿ ಮತ್ತು ವಿವೇಕ್​ ಅಗ್ನಿಹೋತ್ರಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಸಿನಿಮಾರಂಗಕ್ಕೆ ಕಾಲಿಡುವುದಕ್ಕೂ ಮುನ್ನ ಜಾಹೀರಾತು ನಿರ್ಮಾಣ ಕ್ಷೇತ್ರದಲ್ಲಿ ವಿವೇಕ್​ ಅಗ್ನಿಹೋತ್ರಿ ಕೆಲಸ ಮಾಡುತ್ತಿದ್ದರು. ಇನ್ನು, ಪಲ್ಲವಿ ಜೋಶಿ ಅವರು ಬಾಲನಟಿಯಾಗಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟವರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಪ್ಯಾರಲಲ್​ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಕಿರುತೆರೆ ಲೋಕದಲ್ಲೂ ಅವರು ಸಖತ್​ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಹಲವು ವರ್ಷಗಳ ಹಿಂದೆ ಮ್ಯೂಸಿಕ್​ ಕಾರ್ಯಕ್ರಮವೊಂದರಲ್ಲಿ ಪಲ್ಲವಿ ಜೋಶಿ ಮತ್ತು ವಿವೇಕ್​ ಅಗ್ನಿಹೋತ್ರಿ ಅವರ ಮೊದಲ ಭೇಟಿ ಆಯಿತು. ಇಬ್ಬರಿಗೂ ಪರಸ್ಪರ ಪರಿಚಯ ಇರಲಿಲ್ಲ. ಕಾಮನ್​ ಫ್ರೆಂಡ್​ ಮೂಲಕ ಅವರ ನಡುವೆ ಪರಿಚಯ ಬೆಳೆಯಿತು. ಮೊದಲ ಭೇಟಿಯಲ್ಲಿ ವಿವೇಕ್​ ಅವರನ್ನು ಕಂಡಾಗ ಪಲ್ಲವಿ ಜೋಶಿಗೆ ಒಳ್ಳೆಯ ಭಾವನೆ ಮೂಡಲಿಲ್ಲ! ‘ಶಾದಿ ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪಲ್ಲವಿ​ ಮಾತನಾಡಿದ್ದರು. ‘ನನಗೆ ಬಾಯಾರಿಕೆ ಆಗಿತ್ತು. ವಿವೇಕ್​ ಅವರು ಕುಡಿಯಲು ಏನೋ ತಂದುಕೊಟ್ಟರು. ಮೊದಲಿಗೆ ನನಗೆ ಅವರು ಇಷ್ಟ ಆಗಲಿಲ್ಲ. ಅವರು ಸ್ವಲ್ಪ ಒರಟು ಸ್ವಭಾವದವರು ಅಂತ ನನಗೆ ಅನಿಸಿತು’ ಎಂದು ಪಲ್ಲವಿ ಹೇಳಿದ್ದರು.

ಆ ಭೇಟಿಯ ಬಳಿಕ ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ನಡುವೆ ಸ್ನೇಹ ಬೆಳೆಯಿತು. ಅವರಿಬ್ಬರು ಪದೇಪದೇ ಭೇಟಿ ಮಾಡಲು ಆರಂಭಿಸಿದರು. ನಂತರ ಅವರ ಸ್ನೇಹವು ಪ್ರೀತಿಯಾಗಿ ಬದಲಾಯಿತು. ಮೂರು ವರ್ಷಗಳ ಕಾಲ ರಿಲೇಶನ್​ಶಿಪ್​ನಲ್ಲಿ ಇದ್ದ ಈ ಜೋಡಿ ಹಕ್ಕಿಗಳು 1997ರ ಜೂ.28ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೇವಲ ಆಪ್ತರ ಸಮ್ಮುಖದಲ್ಲಿ ಅವರ ಮದುವೆ ನೆರವೇರಿತು. ಈ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಚಿತ್ರರಂಗದ ವ್ಯಕ್ತಿಯನ್ನೇ ಮದುವೆ ಆಗಿರುವುದಕ್ಕೆ ಪಲ್ಲವಿ ಜೋಶಿ ಅವರಿಗೆ ಖುಷಿ ಇದೆ. ಯಾಕೆಂದರೆ ಕೆಲಸದ ವಾತಾವರಣದ ಬಗ್ಗೆ ಪರಸ್ಪರ ಇಬ್ಬರಿಗೂ ಅರ್ಥ ಆಗುತ್ತದೆ. ‘ಒಬ್ಬ ಡಾಕ್ಟರ್​ ಅಥವಾ ಇಂಜಿನಿಯರ್​ ಜೊತೆ ನನ್ನ ಮದುವೆ ಆಗಿದಿದ್ದರೆ ಇಂಥ ಹೊಂದಾಣಿಕೆ ಸಾಧ್ಯವಾಗುತ್ತಿರಲಿಲ್ಲ’ ಎಂಬುದು ಪಲ್ಲವಿ ಜೋಶಿ ಅಭಿಪ್ರಾಯ.

‘ದಿ ತಾಷ್ಕೆಂಟ್​ ಫೈಲ್ಸ್​’, ‘ದಿ ಕಾಶ್ಮೀರ್​ ಫೈಲ್ಸ್​’ ಮುಂತಾದ ಸಿನಿಮಾಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಮತ್ತು ಪಲ್ಲವಿ ಜೋಶಿ ಅವರು ಜೊತೆಯಾಗಿ ಕೆಲಸ ಮಾಡಿದ್ದಾರೆ. ‘ದಿ ತಾಷ್ಕೆಂಟ್​ ಫೈಲ್ಸ್​’ ಚಿತ್ರದ ನಟನೆಗಾಗಿ ಪಲ್ಲವಿ ಜೋಶಿ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತು.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?

ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ