68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ

|

Updated on: Apr 27, 2023 | 4:08 PM

Vivek Agnihotri: ಪ್ರಶಸ್ತಿ ಪ್ರದಾನ ಸಮಾರಂಭಗಳ ಹಿಂದಿರುವ ರಾಜಕೀಯದ ಬಗ್ಗೆ ಈಗಾಗಲೇ ಅನೇಕ ನಟ-ನಟಿಯರು ಮಾತನಾಡಿದ್ದುಂಟು. ಈಗಿನದ್ದು ವಿವೇಕ್​ ಅಗ್ನಿಹೋತ್ರಿ ಸರದಿ.

68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ
ವಿವೇಕ್ ಅಗ್ನಿಹೋತ್ರಿ
Follow us on

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ತಮ್ಮ ನೇರ ನಡೆ-ನುಡಿಯ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ಈ ಸ್ವಭಾವದಿಂದ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಈಗ ಪ್ರತಿಷ್ಠಿತ ‘ಫಿಲ್ಮ್​ಫೇರ್​’ ಪ್ರಶಸ್ತಿ (Filmfare Awards) ವಿರುದ್ಧ ಅವರು ಗುಡುಗಿದ್ದಾರೆ. ಚಿತ್ರರಂಗದಲ್ಲಿ ಇರುವ ಬಹುತೇಕರಿಗೆ ಪ್ರಶಸ್ತಿ ಬಗ್ಗೆ ಆಸೆ ಇರುತ್ತದೆ. ಅದರಲ್ಲೂ ‘ಫಿಲ್ಮ್​ಫೇರ್​’ ರೀತಿಯ ಅವಾರ್ಡ್​ ಸಿಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಈ ಸಾಲಿಗೆ ಸೇರುವವರಲ್ಲ. ಅವರು ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಬರೋಬ್ಬರಿ 7 ವಿಭಾಗಗಳಲ್ಲಿ ನಾಮಿನೇಟ್​ ಆಗಿದೆ. ಹಾಗಿದ್ದರೂ ಕೂಡ ಈ ಪ್ರಶಸ್ತಿ ಪಡೆಯಬಾರದು ಎಂದು ವಿವೇಕ್​ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭಗಳ ಹಿಂದಿರುವ ರಾಜಕೀಯದ ಬಗ್ಗೆ ಈಗಾಗಲೇ ಅನೇಕ ನಟ-ನಟಿಯರು ಮಾತನಾಡಿದ್ದುಂಟು. ಈಗಿನದ್ದು ವಿವೇಕ್​ ಅಗ್ನಿಹೋತ್ರಿ ಸರದಿ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘68ನೇ ಫಿಲ್ಮ್​ಫೇರ್​ ಅವಾರ್ಡ್ಸ್​​ನಲ್ಲಿ ನನ್ನ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್​ ಆಗಿದೆ ಎಂಬುದು ಮಾಧ್ಯಮಗಳಿಂದ ತಿಳಿಯಿತು. ಆದರೆ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಬರಹ ಆರಂಭಿಸಿದ್ದಾರೆ.

ಇದನ್ನೂ ಓದಿ
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

‘ಫಿಲ್ಮ್​ಫೇರ್​ ಆಯೋಜಕರ ಪ್ರಕಾರ ಸ್ಟಾರ್​ ಕಲಾವಿದರನ್ನು ಹೊರತುಪಡಿಸಿ ಇನ್ನುಳಿದವರ ಮುಖಕ್ಕೆ ಬೆಲೆ ಇಲ್ಲ. ಬೇರೆ ಯಾರೂ ಮುಖ್ಯರಲ್ಲ. ಫಿಲ್ಮ್​ಫೇರ್​ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಬದಲಿಗೆ, ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ. ಬರಹಗಾರರು, ನಿರ್ದೇಶಕರು ಮತ್ತು ಇತರೆ ವಿಭಾಗಗಳ ಮುಖ್ಯಸ್ಥರನ್ನು ಕೀಳಾಗಿ ಕಾಣುವ ವ್ಯವಸ್ಥೆಯ ಭಾಗವಾಗಲು ನಾನು ನಿರಾಕರಿಸುತ್ತೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಮಾದಕ ಸಿನಿಮಾ ಮಾಡಿದ ನಿರ್ದೇಶಕ ಅಂತ ಟೀಕಿಸಿದ್ದಕ್ಕೆ ರಾಹುಲ್​ ಗಾಂಧಿ ರೀತಿ ಉತ್ತರಿಸಿದ ವಿವೇಕ್​ ಅಗ್ನಿಹೋತ್ರಿ

2022ರಲ್ಲಿ ತೆರೆಕಂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಖ್ಯಾತಿ ಸಿಕ್ಕಿದೆ. 68ನೇ ‘ಫಿಲ್ಮ್​ಫೇರ್​’ ಅವಾರ್ಡ್ಸ್​ನ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ನಟ, ಅತ್ಯುತ್ತಮ ಚಿತ್ರಕಥೆ ಮುಂತಾದ ವಿಭಾಗಗಳಲ್ಲಿ ಈ ಸಿನಿಮಾ ನಾಮಿನೇಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:08 pm, Thu, 27 April 23