68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ

Vivek Agnihotri: ಪ್ರಶಸ್ತಿ ಪ್ರದಾನ ಸಮಾರಂಭಗಳ ಹಿಂದಿರುವ ರಾಜಕೀಯದ ಬಗ್ಗೆ ಈಗಾಗಲೇ ಅನೇಕ ನಟ-ನಟಿಯರು ಮಾತನಾಡಿದ್ದುಂಟು. ಈಗಿನದ್ದು ವಿವೇಕ್​ ಅಗ್ನಿಹೋತ್ರಿ ಸರದಿ.

68th Filmfare Awards: ‘ಫಿಲ್ಮ್​ಫೇರ್’​ ಪ್ರಶಸ್ತಿ ತಿರಸ್ಕರಿಸಿದ ವಿವೇಕ್​ ಅಗ್ನಿಹೋತ್ರಿ; ಈ ನಿರ್ಧಾರದ ಹಿಂದಿದೆ ಪ್ರಮುಖ ಕಾರಣ
ವಿವೇಕ್ ಅಗ್ನಿಹೋತ್ರಿ

Updated on: Apr 27, 2023 | 4:08 PM

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ತಮ್ಮ ನೇರ ನಡೆ-ನುಡಿಯ ಕಾರಣದಿಂದ ಆಗಾಗ ಸುದ್ದಿ ಆಗುತ್ತಾರೆ. ಈ ಸ್ವಭಾವದಿಂದ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಈಗ ಪ್ರತಿಷ್ಠಿತ ‘ಫಿಲ್ಮ್​ಫೇರ್​’ ಪ್ರಶಸ್ತಿ (Filmfare Awards) ವಿರುದ್ಧ ಅವರು ಗುಡುಗಿದ್ದಾರೆ. ಚಿತ್ರರಂಗದಲ್ಲಿ ಇರುವ ಬಹುತೇಕರಿಗೆ ಪ್ರಶಸ್ತಿ ಬಗ್ಗೆ ಆಸೆ ಇರುತ್ತದೆ. ಅದರಲ್ಲೂ ‘ಫಿಲ್ಮ್​ಫೇರ್​’ ರೀತಿಯ ಅವಾರ್ಡ್​ ಸಿಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಈ ಸಾಲಿಗೆ ಸೇರುವವರಲ್ಲ. ಅವರು ನಿರ್ದೇಶನ ಮಾಡಿರುವ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಬರೋಬ್ಬರಿ 7 ವಿಭಾಗಗಳಲ್ಲಿ ನಾಮಿನೇಟ್​ ಆಗಿದೆ. ಹಾಗಿದ್ದರೂ ಕೂಡ ಈ ಪ್ರಶಸ್ತಿ ಪಡೆಯಬಾರದು ಎಂದು ವಿವೇಕ್​ ಅಗ್ನಿಹೋತ್ರಿ ನಿರ್ಧರಿಸಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭಗಳ ಹಿಂದಿರುವ ರಾಜಕೀಯದ ಬಗ್ಗೆ ಈಗಾಗಲೇ ಅನೇಕ ನಟ-ನಟಿಯರು ಮಾತನಾಡಿದ್ದುಂಟು. ಈಗಿನದ್ದು ವಿವೇಕ್​ ಅಗ್ನಿಹೋತ್ರಿ ಸರದಿ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘68ನೇ ಫಿಲ್ಮ್​ಫೇರ್​ ಅವಾರ್ಡ್ಸ್​​ನಲ್ಲಿ ನನ್ನ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ 7 ವಿಭಾಗಗಳಲ್ಲಿ ನಾಮಿನೇಟ್​ ಆಗಿದೆ ಎಂಬುದು ಮಾಧ್ಯಮಗಳಿಂದ ತಿಳಿಯಿತು. ಆದರೆ ನೈತಿಕತೆ ಇಲ್ಲದ, ಸಿನಿಮಾವಿರೋಧಿಯಾದ ಈ ಪ್ರಶಸ್ತಿತನ್ನು ನಯವಾಗಿ ತಿರಸ್ಕರಿಸುತ್ತೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಅವರು ಬರಹ ಆರಂಭಿಸಿದ್ದಾರೆ.

ಇದನ್ನೂ ಓದಿ
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

‘ಫಿಲ್ಮ್​ಫೇರ್​ ಆಯೋಜಕರ ಪ್ರಕಾರ ಸ್ಟಾರ್​ ಕಲಾವಿದರನ್ನು ಹೊರತುಪಡಿಸಿ ಇನ್ನುಳಿದವರ ಮುಖಕ್ಕೆ ಬೆಲೆ ಇಲ್ಲ. ಬೇರೆ ಯಾರೂ ಮುಖ್ಯರಲ್ಲ. ಫಿಲ್ಮ್​ಫೇರ್​ನಿಂದ ನಿರ್ದೇಶಕರಿಗೆ ಘನತೆ ಬರೋದಿಲ್ಲ. ಬದಲಿಗೆ, ಅವಮಾನಿಸುವ ಈ ವ್ಯವಸ್ಥೆ ಅಂತ್ಯವಾಗಬೇಕು. ಹಾಗಾಗಿ ನಾನು ಇದನ್ನು ವಿರೋಧಿಸುತ್ತಿದ್ದೇನೆ. ಬರಹಗಾರರು, ನಿರ್ದೇಶಕರು ಮತ್ತು ಇತರೆ ವಿಭಾಗಗಳ ಮುಖ್ಯಸ್ಥರನ್ನು ಕೀಳಾಗಿ ಕಾಣುವ ವ್ಯವಸ್ಥೆಯ ಭಾಗವಾಗಲು ನಾನು ನಿರಾಕರಿಸುತ್ತೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಮಾದಕ ಸಿನಿಮಾ ಮಾಡಿದ ನಿರ್ದೇಶಕ ಅಂತ ಟೀಕಿಸಿದ್ದಕ್ಕೆ ರಾಹುಲ್​ ಗಾಂಧಿ ರೀತಿ ಉತ್ತರಿಸಿದ ವಿವೇಕ್​ ಅಗ್ನಿಹೋತ್ರಿ

2022ರಲ್ಲಿ ತೆರೆಕಂಡ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಅನುಪಮ್​ ಖೇರ್​, ದರ್ಶನ್​ ಕುಮಾರ್​, ಪಲ್ಲವಿ ಜೋಶಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದಿಂದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಖ್ಯಾತಿ ಸಿಕ್ಕಿದೆ. 68ನೇ ‘ಫಿಲ್ಮ್​ಫೇರ್​’ ಅವಾರ್ಡ್ಸ್​ನ ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಪೋಷಕ ನಟ, ಅತ್ಯುತ್ತಮ ನಟ, ಅತ್ಯುತ್ತಮ ಚಿತ್ರಕಥೆ ಮುಂತಾದ ವಿಭಾಗಗಳಲ್ಲಿ ಈ ಸಿನಿಮಾ ನಾಮಿನೇಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:08 pm, Thu, 27 April 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us