AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

Nadav Lapid | The Kashmir Files: ‘ದಿ ಕಾಶ್ಮೀರ್​ ಫೈಲ್ಸ್​’ ವಿರುದ್ಧ ಮಾತನಾಡಿದ ನಡಾವ್​ ಲಪಿಡ್​ ಮನಸ್ಥಿತಿ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಟೀಕೆ ಮಾಡಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Nov 30, 2022 | 7:43 AM

Share

ಗೋವಾ ಸಿನಿಮೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಬಗ್ಗೆ ಜ್ಯೂರಿ ಕಮಿಟಿ ಅಧ್ಯಕ್ಷ ನಡಾವ್​ ಲಪಿಡ್​ (Nadav Lapid) ಅವರು ನೀಡಿದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದೆ. ಇದೊಂದು ಪ್ರಚಾರದ, ಅಶ್ಲೀಲ ಸಿನಿಮಾ ಎಂದು ಅವರು ಹೇಳಿರುವುದನ್ನು ಅನೇಕರು ವಿರೋಧಿಸಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ನಟ ಅನುಪಮ್​ ಖೇರ್​ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಅದರ ಬೆನ್ನಲ್ಲೇ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ತಾವು ತೋರಿಸಿದ ಯಾವುದೇ ವಿಷಯ ಸುಳ್ಳು ಅಂತ ಸಾಬೀತಾದ್ರೆ ಸಿನಿಮಾ ಮಾಡುವುದನ್ನೇ ಬಿಟ್ಟು ಬಿಡುವುದಾಗಿ ವಿವೇಕ್​ ಅಗ್ನಿಹೋತ್ರಿ (Vivek Agnihotri) ಬಹಿರಂಗ ಸವಾಲು ಹಾಕಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ವಿವೇಕ್ ಅಗ್ನಿಹೋತ್ರಿ ವಿಡಿಯೋ ಹಂಚಿಕೊಂಡಿದ್ದಾರೆ. ಅವರ ಈ ವಿಡಿಯೋ ವೈರಲ್​ ಆಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ವಿರುದ್ಧ ಮಾತನಾಡಿದ ನಡಾವ್​ ಲಪಿಡ್​ ಮನಸ್ಥಿತಿ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಟೀಕೆ ಮಾಡಿದ್ದಾರೆ. ಈ ವಿಡಿಯೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ಗೋವಾದಲ್ಲಿ ಜ್ಯೂರಿ ಕಮಿಟಿಯ ಅಧ್ಯಕ್ಷ ಆ ರೀತಿ ಹೇಳಿಕೆ ನೀಡಿದ್ದು ನನಗೆ ಹೊಸದೇನೂ ಅನಿಸುತ್ತಿಲ್ಲ. ಯಾಕೆಂದರೆ, ಭಯೋತ್ಪಾದಕ ಸಂಘಟನೆಗಳು, ಅರ್ಬನ್​ ನಕ್ಸಲರು, ಟುಕ್ಡೆ ಟುಕ್ಡೆ ಗ್ಯಾಂಗ್​ ಸದಸ್ಯರು ಮೊದಲಿನಿಂದಲೂ ಇದನ್ನೇ ಹೇಳುತ್ತಾ ಬಂದಿದ್ದಾರೆ. ಆದರೆ ಆಶ್ಚರ್ಯ ಎನಿಸಿದ್ದು ಏನೆಂದರೆ, ಭಾರತ ಸರ್ಕಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವ ವಿಚಾರಕ್ಕೆ ಬೆಂಬಲ ನೀಡಲಾಯಿತು. ಭಾರತದ ಕೆಲವು ಜನರೇ ಆ ವಿಚಾರವನ್ನು ದೇಶ ವಿರೋಧಿಯಾಗಿ ಬಳಸಿಕೊಂಡಿದ್ದಾರೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

‘ನಾಲ್ಕು ವರ್ಷದ ಹಿಂದೆ ನಾನು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಾಗಿ ಅಧ್ಯಯನ ಶುರುಮಾಡಿದಾಗ ಅದನ್ನು ಪ್ರಚಾರ ಎಂದು ಹೇಳಿದ್ದು ಇದೇ ಜನರು. 700 ಜನರು ಸಂದರ್ಶನ ನಡೆಸಿ ಈ ಸಿನಿಮಾ ಮಾಡಲಾಯ್ತು. ಆ 700 ಜನರ ಕುಟುಂಬದವರ ಮೇಲೆ ಕೊಲೆ-ಅತ್ಯಾಚಾರ ಆಗಿದ್ದು ಅಶ್ಲೀಲ ಮತ್ತು ಪ್ರಚಾರವೇ? ಇಂದಿಗೂ ಆ ನೆಲದಲ್ಲಿ ಹಿಂದುಗಳನ್ನು ಆರಿಸಿ ಕೊಲ್ಲಲಾಗುತ್ತಿದೆ. ಅದು ಅಶ್ಲೀಲ ಮತ್ತು ಪ್ರಚಾರವೇ’ ಎಂದು ವಿವೇಕ್​ ಅಗ್ನಿಹೋತ್ರಿ ಪ್ರಶ್ನಿಸಿದ್ದಾರೆ.

‘ಕಾಶ್ಮೀರದಲ್ಲಿ ಹತ್ಯಾಕಾಂಡ ಆಗಿರಲೇ ಇಲ್ಲ ಎಂಬ ಮಾತು ಆಗಾಗ ಕೇಳಿಬರುತ್ತದೆ. ಇಸ್ರೇಲ್​ನ ಮಹಾನ್​ ಫಿಲ್ಮ್​ಮೇಕರ್​ಗೆ, ಅರ್ಬನ್​ ನಕ್ಸಲರಿಗೆ, ಬುದ್ಧಿಜೀವಿಗಳಿಗೆ ನಾನು ಸವಾಲು ಹಾಕುತ್ತೇನೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದಲ್ಲಿ ತೋರಿಸಿದ ಯಾವುದೇ ದೃಶ್ಯ ಅಥವಾ ಡೈಲಾಗ್​ ಸತ್ಯ ಅಲ್ಲ ಎಂದು ಸಾಬೀತು ಮಾಡಿದ್ರೆ ನಾನು ಸಿನಿಮಾ ಮಾಡುವುದನ್ನೇ ಬಿಟ್ಟು ಬಿಡುತ್ತೇನೆ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:43 am, Wed, 30 November 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ