AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ವಿರುದ್ಧ ನಡೆದ ಹುನ್ನಾರ ಒಂದೆರಡಲ್ಲ; ಎಲ್ಲವನ್ನೂ ವಿವರಿಸಿದ ನಿರ್ದೇಶಕ

The Kashmir Files | Oscar Awards: ಆರಂಭದಿಂದಲೂ ಚರ್ಚೆಯ ಕೇಂದ್ರಬಿಂದು ಆಗಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಮತ್ತೆ ವಿವಾದ ಶುರು ಆಗಿದೆ. ಕೆಲವು ವಿಚಾರಗಳನ್ನು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಹೊರಹಾಕಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ವಿರುದ್ಧ ನಡೆದ ಹುನ್ನಾರ ಒಂದೆರಡಲ್ಲ; ಎಲ್ಲವನ್ನೂ ವಿವರಿಸಿದ ನಿರ್ದೇಶಕ
ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Aug 19, 2022 | 8:18 AM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಘಟನೆಯನ್ನು ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಮಾರ್ಚ್​ 11ರಂದು ರಿಲೀಸ್​ ಆಗಿ ದೊಡ್ಡ ಮಟ್ಟದ ಯಶಸ್ಸು ಪಡೆಯಿತು. ಅದಾಗಿ 5 ತಿಂಗಳು ಕಳೆದಿದ್ದರೂ ಈ ಸಿನಿಮಾ ಬಗೆಗಿನ ಚರ್ಚೆ ಇನ್ನೂ ನಿಂತಿಲ್ಲ. ಈಗ ಇನ್ನೊಂದು ಕಾರಣಕ್ಕಾಗಿ ಈ ಸಿನಿಮಾ ಮತ್ತೆ ಸುದ್ದಿ ಮಾಡುತ್ತಿದೆ. ಬಾಲಿವುಡ್​ನಲ್ಲಿ ಅನೇಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ತುಳಿಯಲು ಪ್ರಯತ್ನಿಸಿದ್ದರು ಎಂಬ ವಿಷಯವನ್ನು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಹೇಳಿದ್ದಾರೆ. ಈ ಕುರಿತು ಅವರು ನೇರವಾಗಿ ಮಾತನಾಡಿದ್ದಾರೆ. ಭಾರತದಿಂದ ಈ ಚಿತ್ರವನ್ನು ಆಸ್ಕರ್​ ಸ್ಪರ್ಧೆಗೆ ಆಯ್ಕೆ ಮಾಡಬೇಕೋ ಅಥವಾ ಬೇಡವೋ ಎನ್ನುವ ಕುರಿತು ಪರ-ವಿರೋಧದ ಅಭಿಪ್ರಾಯ ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ನಿರ್ದೇಶಕ ಅನುರಾಗ್​ ಕಶ್ಯಪ್​ (Anurag Kashyap) ಅವರ ಒಂದು ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ.

ಆಸ್ಕರ್​ ಸ್ಪರ್ಧೆಗೆ ಭಾರತದಿಂದ ‘ಆರ್​ಆರ್​ಆರ್​’ ಸಿನಿಮಾ ಆಯ್ಕೆ ಆಗಬಹುದು ಎಂದು ಅನುರಾಗ್​ ಕಶ್ಯಪ್​ ಹೇಳಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಆಯ್ಕೆ ಆಗದಿರಲಿ ಎಂದು ಕೂಡ ಅವರು ಹೇಳಿದ್ದಾರೆ. ಈ ಮಾತಿಗೆ ವಿವೇಕ್​ ಅಗ್ನಿಹೋತ್ರಿ ಪ್ರತ್ಯುತ್ತರ ನೀಡಿದ್ದಾರೆ. ಮೊದಲಿನಿಂದಲೂ ಅನೇಕರು ಈ ಸಿನಿಮಾ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಬಾಲಿವುಡ್​ನಲ್ಲಿ ಯಾವಾಗಲೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇದ್ದವು. ಅಮಿತಾಭ್​ ಬಚ್ಚನ್​ ಕಾಂಗ್ರೆಸ್​ನಲ್ಲಿದ್ದರು. ಧರ್ಮೇಂದ್ರ ಬಿಜೆಪಿಯಲ್ಲಿ ಹಾಗೂ ಜಯಾ ಬಚ್ಚನ್​ ಸಮಾಜವಾದಿ ಪಾರ್ಟಿಯಲ್ಲಿ ಇದ್ದರು. ಆದರೂ ಅವರೆಲ್ಲ ಜೊತೆಯಾಗಿ ಸಿನಿಮಾ ಮಾಡಿದರು. ಆದರೆ ಬಾಲಿವುಡ್​ ಹಾಗೂ ಮಾಧ್ಯಮದ ಒಂದು ಗುಂಪು ಮಾತ್ರ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಬಾರದು ಅಂತ ಬಯಸಿದ್ದರು’ ಎಂಬುದು ವಿವೇಕ್​ ಅಗ್ನಿಹೋತ್ರಿ ಆರೋಪ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ಸಿನಿಮಾ ತಯಾರಾದ ಬಳಿಕ ರಿಲೀಸ್​ ಆಗದಂತೆ ತಡೆಯಲು ಯತ್ನಿಸಿದರು. ರಿಲೀಸ್​ ಆದ ನಂತರ ಯಶಸ್ವಿ ಆಗಬಾರದು ಅಂತ ಬಯಸಿದರು. ಈಗ ಆಸ್ಕರ್​ಗೆ ಆಯ್ಕೆ ಆಗಬಾರದು ಎನ್ನುತ್ತಿದ್ದಾರೆ. ಇದು ನೈತಿಕವಾಗಿ ಸರಿಯಲ್ಲ’ ಎಂದು ಅನುರಾಗ್​ ಕಶ್ಯಪ್​ ಮತ್ತು ಇನ್ನಿತರರ ವಿರುದ್ಧ ವಿವೇಕ್​ ಅಗ್ನಿಹೋತ್ರಿ ಆರೋಪ ಮಾಡಿದ್ದಾರೆ. ‘ಆಸ್ಕರ್​ಗೆ ತೆಲುಗಿನ ಆರ್​ಆರ್​ಆರ್​ ಸಿನಿಮಾ ಆಯ್ಕೆಯಾಗಲಿ ಎಂದು ಹೇಳುವುದು ಓಕೆ. ಆದರೆ ಇನ್ನೊಂದು ಸಿನಿಮಾ ಆಯ್ಕೆ ಆಗಬಾರದು ಅಂತ ಅಪಪ್ರಚಾರ ಮಾಡುವುದು ಸರಿಯಲ್ಲ’ ಎಂಬುದು ವಿವೇಕ್​ ಅಗ್ನಿಹೋತ್ರಿ ಮಾತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Fri, 19 August 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?