Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

| Updated By: ಮದನ್​ ಕುಮಾರ್​

Updated on: Dec 06, 2022 | 4:06 PM

Vivek Agnihotri | Delhi High Court: 2023ರ ಮಾರ್ಚ್​ 16ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಂದು ಖುದ್ದಾಗಿ ವಿವೇಕ್​ ಅಗ್ನಿಹೋತ್ರಿ ಹಾಜರಿರಬೇಕು ಎಂದು ದೆಹಲಿ ಹೈಕೋರ್ಟ್​ ಆದೇಶಿಸಿದೆ.

Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
ವಿವೇಕ್ ಅಗ್ನಿಹೋತ್ರಿ
Follow us on

ಖ್ಯಾತ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಸಮಾಜದ ಅನೇಕ ಆಗುಹೋಗುಗಳಿಗೆ ಪ್ರತಿಕ್ರಿಯಿಸುತ್ತಾರೆ. ಇದರಿಂದಾಗಿ ಅವರು ವಿವಾದ ಮಾಡಿಕೊಂಡ ಉದಾಹರಣೆಗಳು ಸಾಕಷ್ಟಿವೆ. ಈ ಹಿಂದೆ ಅವರು ಮಾಡಿದ್ದ ಒಂದು ಟ್ವೀಟ್​ನಿಂದಾಗಿ ನ್ಯಾಯಾಂಗ ನಿಂದನೆ (Contempt of Court) ಆರೋಪ ಎದುರಾಗಿತ್ತು. ಈ ಪ್ರಕರಣದಲ್ಲಿ ಅವರೀಗ ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ್ದಾರೆ. ತಮ್ಮ ವಕೀಲರ ಪರವಾಗಿ ಅವರು ಅಫಿಡವಿಟ್​ ಸಲ್ಲಿಸಿದ್ದಾರೆ. ಆದರೆ ಈ ಪ್ರಕರಣದ ಅಂತಿಮ ವಿಚಾರಣೆಯ ಸಮಯದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ (Delhi High Court) ಸೂಚಿಸಿದೆ ಎಂದು ವರದಿ ಆಗಿದೆ.

ಏನಿದು ಪ್ರಕರಣ?

2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್​ ನವಲಖ ಅವರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. ಅಂದಿನ ನ್ಯಾಯಮೂರ್ತಿಗಳಾದ ಎಸ್​. ಮುರಳೀಧರ್​ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್​ ದಾಖಲಿಸಿಕೊಂಡಿತ್ತು.

ಇದನ್ನೂ ಓದಿ
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ತಾವು ಮಾಡಿದ್ದ ಟ್ವೀಟ್​ ಅನ್ನು ವಿವೇಕ್​ ಅಗ್ನಿಹೋತ್ರಿ ಡಿಲೀಟ್​ ಮಾಡಿದ್ದಾರೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಆದರೆ ಅದನ್ನು ಡಿಲೀಟ್​ ಮಾಡಿದ್ದು ವಿವೇಕ್​ ಅಗ್ನಿಹೋತ್ರಿ ಅಲ್ಲ, ಬದಲಿಗೆ ಟ್ವಿಟರ್​ ಸ್ವತಃ ಅದನ್ನು ಡಿಲೀಟ್​ ಮಾಡಿತ್ತು ಎಂದು ನ್ಯಾಯಾಲಯದ ಪರ ವಕೀಲರು ವಾದಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರು ಯಾಕೆ ಖುದ್ದಾಗಿ ವಿಚಾರಣೆಗೆ ಹಾಜರಾಗಿಲ್ಲ ಎಂದು ನ್ಯಾಯಾಲಯ ಕಾರಣ ಕೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್​ 16ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಂದು ಖುದ್ದಾಗಿ ವಿವೇಕ್​ ಅಗ್ನಿಹೋತ್ರಿ ಅವರು ಹಾಜರಿರಬೇಕು ಎಂದು ಕೋರ್ಟ್​ ಆದೇಶಿಸಿದೆ. ಅಂದು ತಮ್ಮ ಪರವಾದ ಎಲ್ಲ ಸಾಕ್ಷ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

ಇದನ್ನೂ ಓದಿ: Vivek Agnihotri: ‘ಸತ್ಯ ಅಲ್ಲ ಅಂತ ಸಾಬೀತಾದ್ರೆ ಸಿನಿಮಾ ಮಾಡೋದು ಬಿಟ್ಟು ಬಿಡ್ತೀನಿ’; ವಿವೇಕ್​ ಅಗ್ನಿಹೋತ್ರಿ ಸವಾಲು

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶನ ಮಾಡಿದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಾಗಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಆ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬರೋಬ್ಬರಿ 250 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿತು. ಅಲ್ಲದೇ ದೇಶಾದ್ಯಂತ ಚರ್ಚೆ ಹುಟ್ಟುಹಾಕಿತು.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

ಪ್ರತಿ ಬಾರಿಗೂ ವಿವೇಕ್​ ಅಗ್ನಿಹೋತ್ರಿ ಅವರು ತಮ್ಮ ಸಿನಿಮಾಗೆ ವಿಶೇಷ ವಸ್ತುವಿಷಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದಲ್ಲಿ ಅವರು ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತು ತೋರಿಸಿದ್ದರು. ಅವರ ಮುಂದಿನ ಸಿನಿಮಾ ವ್ಯಾಕ್ಸಿನ್​ ಕುರಿತಾಗಿ ಇರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.