AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscar 2023: ಆಸ್ಕರ್​ ಪ್ರಶಸ್ತಿ ಕಣದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ; ಖುಷಿ ಸುದ್ದಿ ಹಂಚಿಕೊಂಡ ವಿವೇಕ್​ ಅಗ್ನಿಹೋತ್ರಿ

The Kashmir Files: ಭಾರತದ ಸಿನಿಮಾಗಳು ಆಸ್ಕರ್​ ಪ್ರಶಸ್ತಿ ಪಡೆಯಲು ಸಖತ್​ ಹಣಾಹಣಿ ನಡೆಸುತ್ತಿವೆ. ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಶಾರ್ಟ್​ಲಿಸ್ಟ್​ ಆಗಿದೆ.

Oscar 2023: ಆಸ್ಕರ್​ ಪ್ರಶಸ್ತಿ ಕಣದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ; ಖುಷಿ ಸುದ್ದಿ ಹಂಚಿಕೊಂಡ ವಿವೇಕ್​ ಅಗ್ನಿಹೋತ್ರಿ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Jan 10, 2023 | 3:00 PM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತಾದ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಚಿತ್ರದ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದ ಈ ಸಿನಿಮಾ ಈಗ ಪ್ರಶಸ್ತಿಗಳನ್ನು ಪಡೆದುಕೊಳ್ಳುವಲ್ಲಿ ಪೈಪೋಟಿ ನೀಡುತ್ತಿದೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿಯ (Oscar 2023) ಕಣದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸ್ಪರ್ಧಿಸುತ್ತಿದೆ. ಈ ಸುದ್ದಿಯನ್ನು ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ಪಲ್ಲವಿ ಜೋಶಿ, ಅನುಪಮ್​ ಖೇರ್​, ದರ್ಶನ್​ ಕುಮಾರ್​, ಮಿಥುನ್​ ಚಕ್ರವರ್ತಿ ಮುಂತಾದವರು ನಟಿಸಿದ್ದಾರೆ. ‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲದೇ ಕನ್ನಡದ ‘ಕಾಂತಾರ’, ‘ವಿಕ್ರಾಂತ್​ ರೋಣ’ ಸಿನಿಮಾಗಳು ಕೂಡ ಈ ಶಾರ್ಟ್​ಲಿಸ್ಟ್​ನಲ್ಲಿ ಸ್ಥಾನ ಪಡೆದುಕೊಂಡಿವೆ.

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರವು ಆಸ್ಕರ್​ನ ‘ವಿದೇಶಿ ಭಾಷಾ ಚಿತ್ರ’ ವಿಭಾಗಕ್ಕೆ ಸ್ಪರ್ಧೆ ನೀಡಲು ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಬಹುದು ಎಂದು ಬಹುತೇಕರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಫಿಲ್ಮ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದರಿಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾಗೆ ಅವಕಾಶ ಮಿಸ್​ ಆಗಿತ್ತು. ಆದರೆ ಈ ಚಿತ್ರ ಈಗ ನೇರವಾಗಿ ಆಸ್ಕರ್​ ಕಣದಲ್ಲಿ ಸ್ಪರ್ಧೆ ಮಾಡುತ್ತಿದೆ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಆಸ್ಕರ್​ ಪ್ರಶಸ್ತಿಯ ಸ್ಪರ್ಧೆಯಲ್ಲಿ ಭಾರತ ಸಿನಿಮಾಗಳು ಶಾರ್ಟ್​ಲಿಸ್ಟ್​ ಆಗಿರುವುದು ವಿವೇಕ್​ ಅಗ್ನಿಹೋತ್ರಿ ಅವರಿಗೆ ಖುಷಿ ನೀಡಿದೆ. ತಮ್ಮ ಸಿನಿಮಾ ಜೊತೆ ಪಟ್ಟಿಯಲ್ಲಿ ಇರುವ ಇತರೆ ಚಿತ್ರಗಳಿಗೂ ಅವರು ಶುಭ ಹಾರೈಸಿದ್ದಾರೆ. ಕನ್ನಡದ ‘ಕಾಂತಾರ’, ‘ವಿಕ್ರಾಂತ್​ ರೋಣ’ ಸಿನಿಮಾ ತಂಡಗಳು ಕೂಡ ಖುಷಿ ಸುದ್ದಿಯನ್ನು ಹಂಚಿಕೊಂಡಿವೆ.

ಇದನ್ನೂ ಓದಿ: Swara Bhasker: ‘ದಿ ಕಾಶ್ಮೀರ್​ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆಗೆ ಸಹಮತ ಸೂಚಿಸಿದ ನಟಿ ಸ್ವರಾ ಭಾಸ್ಕರ್​

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಅನೇಕರು ವಿರೋಧಿಸಿದ ನಿದರ್ಶನ ಕೂಡ ಇದೆ. ನಡಾವ್​ ಲಪಿಡ್​, ಸಯಿದ್​ ಅಖ್ತರ್​ ಮಿರ್ಜಾ ಮುಂತಾದವರು ಈ ಚಿತ್ರವನ್ನು ಕಟುವಾಗಿ ಟೀಕೆ ಮಾಡಿದ್ದುಂಟು. ‘ನನ್ನ ಪ್ರಕಾರ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ಒಂದು ಕಸ. ಹಾಗಂತ ಕಾಶ್ಮೀರಿ ಪಂಡಿತರ ವಿಷಯ ಕಸವೇ? ಖಂಡಿತಾ ಇಲ್ಲ. ಆ ವಿಷಯ ನಿಜ. ಮುಸ್ಲಿಮರು ಕೂಡ ಗುಪ್ತಚರ ಸಂಸ್ಥೆಗಳ ಬಲೆಗೆ ಸಿಲುಕಿದ್ದರು. ಮುಖ್ಯ ವಿಷಯ ಏನೆಂದರೆ, ಪಕ್ಷಪಾತ ಮಾಡಬಾರದು. ಮನುಷ್ಯರಾಗಿ, ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ’ ಎಂದು ಸಯಿದ್​ ಅಖ್ತರ್​ ಮಿರ್ಜಾ ಈ ಹಿಂದೆ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:55 pm, Tue, 10 January 23

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ