AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ

The Kashmir Files: ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಎಂಬ ಖ್ಯಾತಿಯನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಪಡೆದುಕೊಂಡಿದೆ. 231 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿದೆ.

ಲಾಭ ಮಾಡುವಲ್ಲಿ ‘ಉರಿ’ ಸಿನಿಮಾವನ್ನೂ ಮೀರಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಇಲ್ಲಿದೆ ಲೆಕ್ಕಾಚಾರ
ವಿಕ್ಕಿ ಕೌಶಲ್​, ಅನುಪಮ್​ ಖೇರ್​
TV9 Web
| Updated By: ಮದನ್​ ಕುಮಾರ್​|

Updated on:Mar 30, 2022 | 8:18 AM

Share

ಯಾರೂ ನಿರೀಕ್ಷೆ ಮಾಡಿರದ ರೀತಿಯಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಸಾಧನೆ ಮಾಡಿದೆ. ಯಾವುದೇ ಕಮರ್ಷಿಯಲ್​ ಅಂಶಗಳನ್ನು ನೆಚ್ಚಿಕೊಳ್ಳದ ಈ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಕಮರ್ಷಿಯಲ್​ ಹಿಟ್​ ಎನಿಸಿಕೊಂಡಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರಿಗೆ ಈ ಸಿನಿಮಾದಿಂದ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅನೇಕ ಸ್ಟಾರ್​ ನಟರ ಸಿನಿಮಾಗಳಿಗೂ ಪೈಪೋಟಿ ನೀಡಿ, ಗಲ್ಲಾಪೆಟ್ಟಿಗೆಯಲ್ಲಿ ಅತ್ಯುತ್ತಮ ಕಮಾಯಿ ಮಾಡಿದ್ದು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾದ ಹೆಚ್ಚುಗಾರಿಕೆ. ಹಣ ಗಳಿಕೆ ವಿಚಾರದಲ್ಲಿ ಈ ಸಿನಿಮಾ ಅನೇಕ ದಾಖಲೆಗಳನ್ನು ಬರೆದಿದೆ. ಸ್ಟಾರ್​ ಹೀರೋಗಳು ಚಿತ್ರಗಳೂ ಮಾಡದಂತಹ ಅನೇಕ ದಾಖಲೆಯನ್ನು ಈ ಚಿತ್ರ ಮಾಡಿದೆ. ಈ ಹಿಂದೆ ವಿಕ್ಕಿ ಕೌಶಲ್​ ನಟನೆಯ ‘ಉರಿ: ದಿ ಸರ್ಜಿಕಲ್​ ಸ್ಟ್ರೈಕ್​’ (Uri The Surgical Strike) ಸಿನಿಮಾ ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಖ್ಯಾತಿ ಪಡೆದಿತ್ತು. ಈಗ ಆ ಸ್ಥಾನವನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಪಡೆದುಕೊಂಡಿದೆ. ಇದು ಚಿತ್ರತಂಡಕ್ಕೆ ಇನ್ನಷ್ಟು ಹೆಮ್ಮೆ ತಂದಿದೆ. ಇಂಥ ಹಲವು ಕಾರಣಗಳಿಂದಾಗಿ ಈ ಸಿನಿಮಾ ದೇಶಾದ್ಯಂತ ಸಂಚನಲ ಮೂಡಿಸಿದೆ.

ನೂರಾರು ಕೋಟಿ ರೂಪಾಯಿ ಬಂಡವಾಳ ಹೂಡಿ 50 ಅಥವಾ 60 ಕೋಟಿ ರೂಪಾಯಿ ಲಾಭ ಪಡೆಯುವ ಟ್ರೆಂಡ್​ ಒಂದು ಕಡೆಯಾದರೆ, ತುಂಬ ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಿ ಅತಿ ಹೆಚ್ಚು ಲಾಭ ಪಡೆಯುವುದು ಇನ್ನೊಂದು ಬಗೆಯ ಟ್ರೆಂಡ್​. ಎರಡನೇ ಪ್ರಕಾರದ ಯಶಸ್ಸಿಗೆ ಹೆಚ್ಚು ತೂಕ. ಅಂಥ ಸಾಧನೆಯನ್ನು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಮಾಡಿದೆ.

ಒಂದು ಮೂಲದ ಮಾಹಿತಿಯ ಪ್ರಕಾರ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ತಯಾರಾಗಿರುವುದು 20 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ ಈ ಸಿನಿಮಾ ಈವರೆಗೂ (18 ದಿಗಳಲ್ಲಿ) ಗಳಿಸಿರುವುದು ಬರೋಬ್ಬರಿ 231 ಕೋಟಿ ರೂಪಾಯಿ. ಆ ಮೂಲಕ ಬಾಲಿವುಡ್​ನಲ್ಲಿ ಅತಿ ಹೆಚ್ಚು ಲಾಭ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಒಳಗಾಗಿದೆ.

ಕಲಾವಿದರಿಗೆ ನೀಡಿದ ಸಂಭಾವನೆ ಎಷ್ಟು?

ಹಿರಿಯ ನಟರಾದ ಅನುಪಮ್​ ಖೇರ್​, ಮಿಥುನ್ ಚಕ್ರವರ್ತಿ, ಪುನೀತ್​ ಇಸ್ಸಾರ್​ ಅವರು ಈ ಸಿನಿಮಾದಲ್ಲಿ ಗಮನಾರ್ಹ ಅಭಿನಯ ನೀಡಿದ್ದಾರೆ. ಮಿಥುನ್​ ಚಕ್ರವರ್ತಿ ಅವರಿಗೆ 1.5 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ಅನುಪಮ್​ ಖೇರ್​ ಅವರು 1 ಕೋಟಿ ರೂಪಾಯಿ ಪಡೆದಿದ್ದಾರೆ. ನಟಿ ಪಲ್ಲವಿ ಜೋಶಿ ಅವರು 50ರಿಂದ 70 ಲಕ್ಷ ರೂಪಾಯಿ ಸಂಭಾವನೆ ಪಡೆದಿರಬಹುದು ಎನ್ನಲಾಗಿದೆ. ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ತಮ್ಮ ಕೆಲಸಕ್ಕೆ 1 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎಂದು ವರದಿ ಆಗಿದೆ.

ಯುವ ನಟ ದರ್ಶನ್​ ಕುಮಾರ್​ ಅವರಿಗೆ 45 ಲಕ್ಷ ರೂಪಾಯಿ ನೀಡಲಾಗಿದೆ. ಪುನೀತ್​ ಇಸ್ಸಾರ್​ ಮತ್ತು ಮೃಣಾಲ್​ ಕುಲಕರ್ಣಿ ಅವರು ತಲಾ 50 ಲಕ್ಷ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಸಂಖ್ಯೆಗಳ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಈ ಚಿತ್ರಕ್ಕೆ ಅಭಿಷೇಕ್​ ಅಗರ್​ವಾಲ್​ ಬಂಡವಾಳ ಹೂಡಿದ್ದಾರೆ. 1990ರ ಸಮಯದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ

ತನ್ನದೇ ರಕ್ತ ಸುರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ ಪೋಸ್ಟರ್​ ರಚಿಸಿದ ಮಹಿಳೆ; ‘ಇಂಥದ್ದೆಲ್ಲ ಮಾಡ್ಬೇಡಿ’ ಎಂದ ನಿರ್ದೇಶಕ

Published On - 8:15 am, Wed, 30 March 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು