AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ‘ಹೇಳೋಕೆ ಏನೂ ಇಲ್ಲ’; ಆಸ್ಕರ್​ಗೆ ‘ಕಾಶ್ಮೀರ್​ ಫೈಲ್ಸ್​’ ಆಯ್ಕೆ ಆಗದಿದ್ದಕ್ಕೆ ವಿವೇಕ್​ ಅಗ್ನಿಹೋತ್ರಿ ಪ್ರತಿಕ್ರಿಯೆ

The Kashmir Files | Oscar Award: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದಿಂದ ವಿವೇಕ್​ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ಈ ಚಿತ್ರದ ಆಸ್ಕರ್​ ಸ್ಪರ್ಧೆಗೆ ಅರ್ಹತೆ ಪಡೆಯಲು ವಿಫಲ ಆಗಿದೆ.

Vivek Agnihotri: ‘ಹೇಳೋಕೆ ಏನೂ ಇಲ್ಲ’; ಆಸ್ಕರ್​ಗೆ ‘ಕಾಶ್ಮೀರ್​ ಫೈಲ್ಸ್​’ ಆಯ್ಕೆ ಆಗದಿದ್ದಕ್ಕೆ ವಿವೇಕ್​ ಅಗ್ನಿಹೋತ್ರಿ ಪ್ರತಿಕ್ರಿಯೆ
ವಿವೇಕ್ ಅಗ್ನಿಹೋತ್ರಿ, ಅನುಪಮ್ ಖೇರ್
TV9 Web
| Edited By: |

Updated on: Sep 22, 2022 | 11:01 AM

Share

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಮೂಡಿಬಂತು. ಆ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್​ ಮಾಡಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕಾರಣಿಗಳು ಆ ಚಿತ್ರವನ್ನು ಹೊಗಳಿದರು. ಈ ಎಲ್ಲ ಕಾರಣದಿಂದ 95ನೇ ಸಾಲಿನ ಆಸ್ಕರ್​ ಪ್ರಶಸ್ತಿಯ (Oscar Award) ಸ್ಪರ್ಧಾ ಕಣಕ್ಕೆ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಅರ್ಹತೆ ಪಡೆಯಬಹುದು ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಿಮವಾಗಿ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಚಿತ್ರ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಯಿತು. ಈ ಕುರಿತು ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಸಿನಿಮಾ ಆಸ್ಕರ್​ಗೆ ಸೆಲೆಕ್ಟ್​ ಆಗಿಲ್ಲ ಎಂಬ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರಿಗೆ ಹೆಚ್ಚೇನೂ ಬೇಸರ ಇಲ್ಲ. ಅವರು ‘ಚೆಲ್ಲೋ ಶೋ’ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಆಸ್ಕರ್​ ಸ್ಪರ್ಧೆಗೆ ಭಾರತದಿಂದ ಆಯ್ಕೆ ಆದ ಚೆಲ್ಲೋ ಶೋ ಸಿನಿಮಾದ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. 2023ರ ಆಸ್ಕರ್​ನಲ್ಲಿ ಈ ಚಿತ್ರಕ್ಕೆ ಪ್ರಶಸ್ತಿ ಸಿಗಲಿ. ದಿ ಕಾಶ್ಮೀರ್ ಫೈಲ್ಸ್​ ಸಿನಿಮಾಗೆ ಬೆಂಬಲ ನೀಡಿದ ಹಿತೈಷಿಗಳು ಮತ್ತು ಮಾಧ್ಯಮದವರಿಗೆ ನನ್ನ ಧನ್ಯವಾದಗಳು’ ಎಂದು ವಿವೇಕ್​ ಅಗ್ನಿಹೋತ್ರಿ ಟ್ವೀಟ್​ ಮಾಡಿ​ದ್ದಾರೆ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Aamir Khan: ವಿರೋಧದ ನಡುವೆಯೂ ‘ಆಸ್ಕರ್​’ ಗಮನ ಸೆಳೆದ ‘ಲಾಲ್​ ಸಿಂಗ್​ ಚಡ್ಡಾ’; ಆಮಿರ್​ ಖಾನ್​ ಫ್ಯಾನ್ಸ್​ ಖುಷ್​
Image
ಪತ್ನಿಗಾಗಿ ನಟನ ಕೆನ್ನೆಗೆ ಬಾರಿಸಿದ್ದ ವಿಲ್​ ಸ್ಮಿತ್​ಗೆ ಆಸ್ಕರ್​ನಿಂದ 10 ವರ್ಷ ಬ್ಯಾನ್​; ಅಕಾಡೆಮಿ ನಿರ್ಧಾರ
Image
ಆಸ್ಕರ್​ ವೇದಿಕೆಯಲ್ಲಿ ನಟ ಕ್ರಿಸ್​ ರಾಕ್​ ಕೆನ್ನೆಗೆ ಹೊಡೆದ ವಿಲ್​ ಸ್ಮಿತ್​ ಬಗ್ಗೆ ತಾಯಿಯ ಪ್ರತಿಕ್ರಿಯೆ ಏನು?

ಎಲ್ಲ ಬೆಳವಣಿಗೆಗಳ ಬಗ್ಗೆ ‘ಹಿಂದುಸ್ತಾನ್​ ಟೈಮ್ಸ್​’ಗೆ ವಿವೇಕ್​ ಅಗ್ನಿಹೋತ್ರಿ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳಲು ಏನೂ ಇಲ್ಲ. ಚೆಲ್ಲೋ ಶೋ ತಂಡಕ್ಕೆ ಶುಭ ಕೋರುತ್ತೇನೆ. ಸದ್ಯಕ್ಕೆ ನಾನು ಮುಂದಕ್ಕೆ ಬಂದು ಬೇರೆ ಸಿನಿಮಾ ಮಾಡುತ್ತಿದ್ದೇನೆ. ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನು ಸ್ವತಂತ್ರವಾಗಿ ಆಸ್ಕರ್​ಗೆ ಕಳಿಸಬೇಕೋ ಬೇಡವೋ ಎಂಬುದು ನಿರ್ಮಾಪಕರಿಗೆ ಬಿಟ್ಟ ಬಿಚಾರ. ಅದರಿಂದ ನನಗೆ ಯಾವುದೇ ವ್ಯತ್ಯಾಸ ಎನಿಸುವುದಿಲ್ಲ’ ಎಂದು ವಿವೇಕ್​ ಅಗ್ನಿಹೋತ್ರಿ ಹೇಳಿದ್ದಾರೆ.

ಭಾರತದಿಂದ ಆಸ್ಕರ್​ ರೇಸ್​ಗೆ ಆಯ್ಕೆ ಆಗಬೇಕು ಎಂಬ ಪೈಪೋಟಿಯಲ್ಲಿ ಒಟ್ಟು 13 ಸಿನಿಮಾಗಳು ಇದ್ದವು. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರ ಕೂಡ ಇತ್ತು. ಆದರೆ ಆ ಸಿನಿಮಾ ಆಯ್ಕೆ ಆಗಿಲ್ಲ. ಆ ಬಗ್ಗೆ ಕೆಲವರಿಗೆ ಬೇಸರ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ