Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ

The Kashmir Files | Vivek Agnihotri: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ‘ಆಸ್ಕರ್​ ಪ್ರಶಸ್ತಿ’ ಸ್ಪರ್ಧೆಗೆ ನಾಮಿನೇಟ್​ ಆಗದೇ ಇರುವುದರಿಂದ ಟ್ವಿಟರ್​ನಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ
ದಿ ಕಾಶ್ಮೀರ್ ಫೈಲ್ಸ್ ಪೋಸ್ಟರ್​, ವಿವೇಕ್ ಅಗ್ನಿಹೋತ್ರಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 25, 2023 | 6:27 AM

ಸಿನಿಪ್ರಿಯರು ಬಹುದಿನಗಳಿಂದ ಕಾದಿದ್ದ ‘ಆಸ್ಕರ್​ ನಾಮಿನೇಷನ್​ ಪಟ್ಟಿ’ (Oscars 2023 Nomination) ಪ್ರಕಟ ಆಗಿದೆ. 300ಕ್ಕೂ ಅಧಿಕ ಸಿನಿಮಾಗಳು ನಾಮನಿರ್ದೇಶನಗೊಳ್ಳಲು ಅರ್ಹತೆ ಪಡೆದಿದ್ದವು. ಆ ಪೈಕಿ ಒಂದಷ್ಟು ಸಿನಿಮಾಗಳಿಗೆ ಮಾತ್ರ ನಾಮಿನೇಟ್​​ ಆಗುವ ಅವಕಾಶ ಸಿಕ್ಕಿದೆ. ಇನ್ನುಳಿದ ಸಿನಿಮಾಗಳಿಗೆ ತೀವ್ರ ನಿರಾಸೆ ಆಗಿದೆ. ಕನ್ನಡದ ‘ಕಾಂತಾರ’, ‘ವಿಕ್ರಾಂತ್​ ರೋಣ’, ಹಿಂದಿಯ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾಗಳು ರೇಸ್​ನಿಂದ ಹೊರಗುಳಿದಿವೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಹಾಗಾಗಿ ಆಸ್ಕರ್​ ಪ್ರಶಸ್ತಿಯನ್ನೇ ಬಹಿಷ್ಕರಿಸಲು ಕೆಲವು ನೆಟ್ಟಿಗರು ಮುಂದಾಗಿದ್ದಾರೆ. #boycottoscars ಎಂದು ಹ್ಯಾಶ್ ಟ್ಯಾಗ್​ ಟ್ರೆಂಡ್​ ಶುರು ಮಾಡಲಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಕಥೆ ಏನಾಯ್ತು ಎಂದು ಅನೇಕರು ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರನ್ನು ಪ್ರಶ್ನಿಸುತ್ತಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ತಯಾರಾಗಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಹಲವು ಆಯಾಮದಿಂದ ಈ ಸಿನಿಮಾ ಚರ್ಚೆಗೆ ಒಳಗಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಘಟನೆಗಳನ್ನು ಆಧರಿಸಿ ಮೂಡಿಬಂದ ಈ ಸಿನಿಮಾಗೆ ಆಸ್ಕರ್​ ಸಿಗಬೇಕು ಎಂಬುದು ಹಲವರ ಆಸೆ ಆಗಿತ್ತು. ಆದರೆ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಅತ್ಯುತ್ತಮ ಭಾಷಾ ಚಿತ್ರ ವಿಭಾಗಕ್ಕೆ ಭಾರತದಿಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಆಯ್ಕೆ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಅಲ್ಲಿ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದರಿಂದ ಸ್ವತಂತ್ರವಾಗಿಯಾದರೂ ‘ದಿ ಕಾಶ್ಮೀರ್​ ಫೈಲ್ಸ್​’ ನಾಮಿನೇಟ್​ ಆಗಬಹುದು ಎಂದು ಊಹಿಸಲಾಗಿತ್ತು. ಆ ಮಾರ್ಗದಲ್ಲಿಯೂ ಆಸ್ಕರ್​ ಸ್ಪರ್ಧೆಗೆ ಎಂಟ್ರಿ ಪಡೆಯುವಲ್ಲಿ ಈ ಸಿನಿಮಾ ವಿಫಲ ಆಗಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ‘ಆಸ್ಕರ್​ ಪ್ರಶಸ್ತಿ’ ಸ್ಪರ್ಧೆಗೆ ನಾಮಿನೇಟ್​ ಆಗದೇ ಇರುವುದರಿಂದ ಟ್ವಿಟರ್​ನಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. #boycottoscars ಹ್ಯಾಶ್​ ಟ್ಯಾಗ್​ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಬಹಿಷ್ಕರಿಸಲು ನೆಟ್ಟಿಗರು ಮುಂದಾಗಿದ್ದಾರೆ. ಈ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ.

ಭಾರತದಿಂದ ಆಸ್ಕರ್​ಗೆ 3 ನಾಮಿನೇಷನ್​:

ಜ.24ರಂದು ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್​ನಲ್ಲಿರುವ ಸ್ಯಾಮ್ಯುವೆಲ್ ಗೋಲ್ಡ್​​ವಿನ್ ಥಿಯೇಟರ್​ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನಾಮಿನೇಷನ್​ ಲಿಸ್ಟ್​ ಅನೌನ್ಸ್​ ಮಾಡಲಾಗಿದೆ. ಭಾರತದ ಒಂದಷ್ಟು ಸಿನಿಮಾಗಳು ಈ ಬಾರಿ ಶಾರ್ಟ್​ಲಿಸ್ಟ್​ ಆಗಿದ್ದರಿಂದ ನಾಮಿನೇಷನ್​ ಪ್ರಕ್ರಿಯೆ ಮೇಲೆ ಸಖತ್​ ನಿರೀಕ್ಷೆ ಮೂಡಿತ್ತು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Tue, 24 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ