AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ

The Kashmir Files | Vivek Agnihotri: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ‘ಆಸ್ಕರ್​ ಪ್ರಶಸ್ತಿ’ ಸ್ಪರ್ಧೆಗೆ ನಾಮಿನೇಟ್​ ಆಗದೇ ಇರುವುದರಿಂದ ಟ್ವಿಟರ್​ನಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Oscars 2023: ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕಿಲ್ಲ ಆಸ್ಕರ್​ ನಾಮಿನೇಷನ್​; ಪ್ರತಿಷ್ಠಿತ ಪ್ರಶಸ್ತಿಗೆ ನೆಟ್ಟಿಗರ ಬಹಿಷ್ಕಾರ
ದಿ ಕಾಶ್ಮೀರ್ ಫೈಲ್ಸ್ ಪೋಸ್ಟರ್​, ವಿವೇಕ್ ಅಗ್ನಿಹೋತ್ರಿ
ಮದನ್​ ಕುಮಾರ್​
| Edited By: |

Updated on:Jan 25, 2023 | 6:27 AM

Share

ಸಿನಿಪ್ರಿಯರು ಬಹುದಿನಗಳಿಂದ ಕಾದಿದ್ದ ‘ಆಸ್ಕರ್​ ನಾಮಿನೇಷನ್​ ಪಟ್ಟಿ’ (Oscars 2023 Nomination) ಪ್ರಕಟ ಆಗಿದೆ. 300ಕ್ಕೂ ಅಧಿಕ ಸಿನಿಮಾಗಳು ನಾಮನಿರ್ದೇಶನಗೊಳ್ಳಲು ಅರ್ಹತೆ ಪಡೆದಿದ್ದವು. ಆ ಪೈಕಿ ಒಂದಷ್ಟು ಸಿನಿಮಾಗಳಿಗೆ ಮಾತ್ರ ನಾಮಿನೇಟ್​​ ಆಗುವ ಅವಕಾಶ ಸಿಕ್ಕಿದೆ. ಇನ್ನುಳಿದ ಸಿನಿಮಾಗಳಿಗೆ ತೀವ್ರ ನಿರಾಸೆ ಆಗಿದೆ. ಕನ್ನಡದ ‘ಕಾಂತಾರ’, ‘ವಿಕ್ರಾಂತ್​ ರೋಣ’, ಹಿಂದಿಯ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾಗಳು ರೇಸ್​ನಿಂದ ಹೊರಗುಳಿದಿವೆ. ಇದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ಹಾಗಾಗಿ ಆಸ್ಕರ್​ ಪ್ರಶಸ್ತಿಯನ್ನೇ ಬಹಿಷ್ಕರಿಸಲು ಕೆಲವು ನೆಟ್ಟಿಗರು ಮುಂದಾಗಿದ್ದಾರೆ. #boycottoscars ಎಂದು ಹ್ಯಾಶ್ ಟ್ಯಾಗ್​ ಟ್ರೆಂಡ್​ ಶುರು ಮಾಡಲಾಗಿದೆ. ‘ದಿ ಕಾಶ್ಮೀರ್​ ಫೈಲ್ಸ್​’ ಕಥೆ ಏನಾಯ್ತು ಎಂದು ಅನೇಕರು ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರನ್ನು ಪ್ರಶ್ನಿಸುತ್ತಿದ್ದಾರೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಕಡಿಮೆ ಬಜೆಟ್​ನಲ್ಲಿ ತಯಾರಾಗಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಹಲವು ಆಯಾಮದಿಂದ ಈ ಸಿನಿಮಾ ಚರ್ಚೆಗೆ ಒಳಗಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯ ಘಟನೆಗಳನ್ನು ಆಧರಿಸಿ ಮೂಡಿಬಂದ ಈ ಸಿನಿಮಾಗೆ ಆಸ್ಕರ್​ ಸಿಗಬೇಕು ಎಂಬುದು ಹಲವರ ಆಸೆ ಆಗಿತ್ತು. ಆದರೆ ಅದು ಸಾಧ್ಯವಾಗಿಲ್ಲ.

ಇದನ್ನೂ ಓದಿ
Image
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Image
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Image
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Image
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಅತ್ಯುತ್ತಮ ಭಾಷಾ ಚಿತ್ರ ವಿಭಾಗಕ್ಕೆ ಭಾರತದಿಂದ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಆಯ್ಕೆ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ ಅಲ್ಲಿ ಗುಜರಾತಿ ಭಾಷೆಯ ‘ಚೆಲ್ಲೋ ಶೋ’ ಸಿನಿಮಾ ಆಯ್ಕೆ ಆಗಿದ್ದರಿಂದ ಸ್ವತಂತ್ರವಾಗಿಯಾದರೂ ‘ದಿ ಕಾಶ್ಮೀರ್​ ಫೈಲ್ಸ್​’ ನಾಮಿನೇಟ್​ ಆಗಬಹುದು ಎಂದು ಊಹಿಸಲಾಗಿತ್ತು. ಆ ಮಾರ್ಗದಲ್ಲಿಯೂ ಆಸ್ಕರ್​ ಸ್ಪರ್ಧೆಗೆ ಎಂಟ್ರಿ ಪಡೆಯುವಲ್ಲಿ ಈ ಸಿನಿಮಾ ವಿಫಲ ಆಗಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ‘ಆಸ್ಕರ್​ ಪ್ರಶಸ್ತಿ’ ಸ್ಪರ್ಧೆಗೆ ನಾಮಿನೇಟ್​ ಆಗದೇ ಇರುವುದರಿಂದ ಟ್ವಿಟರ್​ನಲ್ಲಿ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. #boycottoscars ಹ್ಯಾಶ್​ ಟ್ಯಾಗ್​ ಮೂಲಕ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಬಹಿಷ್ಕರಿಸಲು ನೆಟ್ಟಿಗರು ಮುಂದಾಗಿದ್ದಾರೆ. ಈ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ.

ಭಾರತದಿಂದ ಆಸ್ಕರ್​ಗೆ 3 ನಾಮಿನೇಷನ್​:

ಜ.24ರಂದು ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್​ನಲ್ಲಿರುವ ಸ್ಯಾಮ್ಯುವೆಲ್ ಗೋಲ್ಡ್​​ವಿನ್ ಥಿಯೇಟರ್​ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ನಾಮಿನೇಷನ್​ ಲಿಸ್ಟ್​ ಅನೌನ್ಸ್​ ಮಾಡಲಾಗಿದೆ. ಭಾರತದ ಒಂದಷ್ಟು ಸಿನಿಮಾಗಳು ಈ ಬಾರಿ ಶಾರ್ಟ್​ಲಿಸ್ಟ್​ ಆಗಿದ್ದರಿಂದ ನಾಮಿನೇಷನ್​ ಪ್ರಕ್ರಿಯೆ ಮೇಲೆ ಸಖತ್​ ನಿರೀಕ್ಷೆ ಮೂಡಿತ್ತು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಬೆಸ್ಟ್​ ಒರಿಜಿನಲ್​ ಸಾಂಗ್​ ವಿಭಾಗದಲ್ಲಿ ನಾಮಿನೇಟ್​ ಆಗಿದೆ. ಭಾರತದ ‘ಆಲ್​ ದಟ್​ ಬ್ರೀಥ್ಸ್​’, ‘ದಿ ಎಲಿಫೆಂಟ್​ ವಿಸ್ಪರರ್ಸ್​’ ಕಿರುಚಿತ್ರಗಳು ಕೂಡ ನಾಮಿನೇಟ್​ ಆಗಿದ್ದು, ಭಾರತಕ್ಕೆ ಈ ಬಾರಿ ಆಸ್ಕರ್​ ಗೆಲ್ಲುವ ಚಾನ್ಸ್​ ದಟ್ಟವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Tue, 24 January 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ