AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು

The Kashmir Files | IFFI Goa: ‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಇದರಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು
ಅನುಪಮ್ ಖೇರ್
TV9 Web
| Edited By: |

Updated on: Nov 23, 2022 | 5:51 PM

Share

ನಟ ಅನುಪಮ್ ಖೇರ್ ಅವರ ಪಾಲಿಗೆ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಹೆಚ್ಚು ವಿಶೇಷವಾಗಿದೆ. 2022ರ ಮಾರ್ಚ್​ 11ರಂದು ಬಿಡುಗಡೆ ಆದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 250 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿತು. ಹಲವು ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿತು. ಈಗ ಗೋವಾದಲ್ಲಿ ನಡೆಯುತ್ತಿರುವ ‘ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ’ದಲ್ಲೂ (IFFI Goa) ಈ ಚಿತ್ರಕ್ಕೆ ಗೌರವ ಸಿಕ್ಕಿದೆ. ಚಿತ್ರದ ಪ್ರದರ್ಶನದ ವೇಳೆ ನಟ ಅನುಪಮ್​ ಖೇರ್​, ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಮುಂತಾದವರು ಹಾಜರಿದ್ದರು. ಎಲ್ಲರ ಎದುರು ಅನುಪಮ್ ಖೇರ್​ (Anupam Kher) ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡರು. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲೂ ಅವರು ಶೇರ್​ ಮಾಡಿಕೊಂಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಪಲ್ಲವಿ ಜೋಶಿ, ಅನುಪಮ್​ ಖೇರ್​, ದರ್ಶನ್​ ಕುಮಾರ್​, ಮಿಥುನ್​ ಚಕ್ರವರ್ತಿ ಮುಂತಾದವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸಿನಿಮಾದ ಕುರಿತು ತಮ್ಮ ಮನದ ಮಾತುಗಳನ್ನು ಗೋವಾ ಸಿನಿಮೋತ್ಸವದಲ್ಲಿ ಅನುಪಮ್​ ಖೇರ್​ ಅವರು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಈ ಚಿತ್ರದಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು. ಕಾಶ್ಮೀರಿ ಪಂಡಿತರ ಹಾಗೂ ಹಿಂದುಗಳ ಹತ್ಯಾಕಾಂಡದ ಕಥೆ ಇದು. ಎಲ್ಲರಿಗೂ ಇದು ಗೊತ್ತಿತ್ತು. ಆದರೆ ಸಿನಿಮಾ ಮಾಡಬೇಕು ಎಂದುಕೊಂಡ ಏಕೈಕ ವ್ಯಕ್ತಿ ವಿವೇಕ್​ ಅಗ್ನಿಹೋತ್ರಿ’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

ವ್ಯಾಕ್ಸಿನ್​ ಕುರಿತು ವಿವೇಕ್​ ಅಗ್ನಿಹೋತ್ರಿ ಸಿನಿಮಾ:

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಕೌತುಕಕ್ಕೆ ಇತ್ತೀಚೆಗೆ ತೆರೆ ಬಿದ್ದಿದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಈ ಚಿತ್ರದ ಟೈಟಲ್ ಅನೌನ್ಸ್​ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಶೀರ್ಷಿಕೆ ಬರೆಯಲಾಗಿದೆ.

2023ರ ಆಗಸ್ಟ್ 15ರಂದು ‘ದಿ ವ್ಯಾಕ್ಸಿನ್​ ವಾರ್​’ ರಿಲೀಸ್ ಆಗಲಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಸೇರಿದಂತೆ 11 ಭಾಷೆಗಳಲ್ಲಿ ತೆರೆಗೆ ಬರಲಿದೆ ಎಂಬುದು ವಿಶೇಷ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ