AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು

The Kashmir Files | IFFI Goa: ‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಇದರಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

Anupam Kher: ಗೋವಾ ಚಿತ್ರೋತ್ಸವದಲ್ಲಿ ‘ದಿ ಕಾಶ್ಮೀರ್​ ಫೈಲ್ಸ್​’ ಪ್ರದರ್ಶನ; ಅನುಪಮ್​ ಖೇರ್​ ವಿಶೇಷ ಮಾತು
ಅನುಪಮ್ ಖೇರ್
TV9 Web
| Edited By: |

Updated on: Nov 23, 2022 | 5:51 PM

Share

ನಟ ಅನುಪಮ್ ಖೇರ್ ಅವರ ಪಾಲಿಗೆ ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾ ಹೆಚ್ಚು ವಿಶೇಷವಾಗಿದೆ. 2022ರ ಮಾರ್ಚ್​ 11ರಂದು ಬಿಡುಗಡೆ ಆದ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ 250 ಕೋಟಿ ರೂಪಾಯಿಗಿಂತಲೂ ಹೆಚ್ಚು ಕಲೆಕ್ಷನ್​ ಮಾಡಿತು. ಹಲವು ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡಿತು. ಈಗ ಗೋವಾದಲ್ಲಿ ನಡೆಯುತ್ತಿರುವ ‘ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ’ದಲ್ಲೂ (IFFI Goa) ಈ ಚಿತ್ರಕ್ಕೆ ಗೌರವ ಸಿಕ್ಕಿದೆ. ಚಿತ್ರದ ಪ್ರದರ್ಶನದ ವೇಳೆ ನಟ ಅನುಪಮ್​ ಖೇರ್​, ನಿರ್ಮಾಪಕ ಅಭಿಷೇಕ್​ ಅಗರ್​ವಾಲ್​ ಮುಂತಾದವರು ಹಾಜರಿದ್ದರು. ಎಲ್ಲರ ಎದುರು ಅನುಪಮ್ ಖೇರ್​ (Anupam Kher) ಅವರು ತಮ್ಮ ಮನದ ಮಾತುಗಳನ್ನು ಹಂಚಿಕೊಂಡರು. ಆ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲೂ ಅವರು ಶೇರ್​ ಮಾಡಿಕೊಂಡಿದ್ದಾರೆ.

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ‘ದಿ ಕಾಶ್ಮೀರ್​ ಫೈಲ್ಸ್’ ಸಿನಿಮಾ ಮೂಡಿಬಂದಿದೆ. ಈ ಚಿತ್ರಕ್ಕೆ ವಿವೇಕ್​ ಅಗ್ನಿಹೋತ್ರಿ ನಿರ್ದೇಶನ ಮಾಡಿದ್ದಾರೆ. ಪಲ್ಲವಿ ಜೋಶಿ, ಅನುಪಮ್​ ಖೇರ್​, ದರ್ಶನ್​ ಕುಮಾರ್​, ಮಿಥುನ್​ ಚಕ್ರವರ್ತಿ ಮುಂತಾದವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸಿನಿಮಾದ ಕುರಿತು ತಮ್ಮ ಮನದ ಮಾತುಗಳನ್ನು ಗೋವಾ ಸಿನಿಮೋತ್ಸವದಲ್ಲಿ ಅನುಪಮ್​ ಖೇರ್​ ಅವರು ತೆರೆದಿಟ್ಟಿದ್ದಾರೆ.

ಇದನ್ನೂ ಓದಿ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
ಒಟಿಟಿಗೆ ಬರ್ತಿದೆ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ; ಕನ್ನಡ ಪ್ರೇಕ್ಷಕರಿಗೂ ಇಲ್ಲಿದೆ ಒಂದು ಗುಡ್​ ನ್ಯೂಸ್​
Image
‘ದಿ ಕಾಶ್ಮೀರ್​ ಫೈಲ್ಸ್​’ ನಟನ ಅಚ್ಚರಿಯ ಬದಲಾವಣೆ; ಹೇಗಿದ್ದ ಅನುಪಮ್​ ಖೇರ್​ ಹೇಗಾದ್ರು ನೋಡಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ್ದು ‘ಬಾಹುಬಲಿ’ಗಿಂತಲೂ ದೊಡ್ಡ ಗೆಲುವು: ಇದು ಆಮಿರ್ ಖಾನ್ ಫಾರ್ಮುಲಾ

‘ಈ ಚಿತ್ರ ನನ್ನ ಹೃದಯಕ್ಕೆ ತುಂಬ ಹತ್ತಿರವಾಗಿದೆ. ಈ ಚಿತ್ರದಲ್ಲಿ ನಾವು ತೋರಿಸಿದ ಸತ್ಯವನ್ನು 32 ವರ್ಷಗಳ ಕಾಲ ಮುಚ್ಚಿಡಲಾಗಿತ್ತು. ಕಾಶ್ಮೀರಿ ಪಂಡಿತರ ಹಾಗೂ ಹಿಂದುಗಳ ಹತ್ಯಾಕಾಂಡದ ಕಥೆ ಇದು. ಎಲ್ಲರಿಗೂ ಇದು ಗೊತ್ತಿತ್ತು. ಆದರೆ ಸಿನಿಮಾ ಮಾಡಬೇಕು ಎಂದುಕೊಂಡ ಏಕೈಕ ವ್ಯಕ್ತಿ ವಿವೇಕ್​ ಅಗ್ನಿಹೋತ್ರಿ’ ಎಂದು ಅನುಪಮ್​ ಖೇರ್​ ಹೇಳಿದ್ದಾರೆ.

ವ್ಯಾಕ್ಸಿನ್​ ಕುರಿತು ವಿವೇಕ್​ ಅಗ್ನಿಹೋತ್ರಿ ಸಿನಿಮಾ:

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಯಾವ ಸಿನಿಮಾ ಮಾಡುತ್ತಾರೆ ಎಂಬ ಕೌತುಕಕ್ಕೆ ಇತ್ತೀಚೆಗೆ ತೆರೆ ಬಿದ್ದಿದೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಈ ಚಿತ್ರದ ಟೈಟಲ್ ಅನೌನ್ಸ್​ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಶೀರ್ಷಿಕೆ ಬರೆಯಲಾಗಿದೆ.

2023ರ ಆಗಸ್ಟ್ 15ರಂದು ‘ದಿ ವ್ಯಾಕ್ಸಿನ್​ ವಾರ್​’ ರಿಲೀಸ್ ಆಗಲಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಸೇರಿದಂತೆ 11 ಭಾಷೆಗಳಲ್ಲಿ ತೆರೆಗೆ ಬರಲಿದೆ ಎಂಬುದು ವಿಶೇಷ. ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್