AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಫೋನ್​ ನಂಬರ್​ ಲೀಕ್​; ಕಿರುಕುಳ ನೀಡಿದ ಸೈಬರ್​ ಕಿಡಿಗೇಡಿ

Adah Sharma Phone Number Leak: ಅದಾ ಶರ್ಮಾ ಅವರಿಗೆ ಸೋಶಿಯಲ್​ ಮೀಡಿಯಾದಲ್ಲಿ ತೊಂದರೆ ನೀಡಲಾಗುತ್ತಿದೆ. ಕಿಡಿಗೇಡಿಯ ವಿರುದ್ಧ ಮುಂಬೈ ಸೈಬರ್​ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಫೋನ್​ ನಂಬರ್​ ಲೀಕ್​; ಕಿರುಕುಳ ನೀಡಿದ ಸೈಬರ್​ ಕಿಡಿಗೇಡಿ
ಅದಾ ಶರ್ಮಾ
ಮದನ್​ ಕುಮಾರ್​
|

Updated on: May 24, 2023 | 8:40 PM

Share

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ನಡುವೆ ಅವರಿಗೆ ಕೆಲವು ತೊಂದರೆಗಳು ಕೂಡ ಎದುರಾಗುತ್ತಿವೆ. ಇದು ವಿವಾದಿತ ಸಿನಿಮಾ ಎಂಬುದು ಗೊತ್ತಿರುವ ವಿಚಾರ. ಇಂಥ ಚಿತ್ರದಲ್ಲಿ ನಟಿಸಿದ್ದಕ್ಕಾಗಿ ಅದಾ ಶರ್ಮಾ (Adah Sharma) ಅವರಿಗೆ ಕೆಲವರು ಕಿರುಕುಳ ನೀಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಕಿಡಿಗೇಡಿಯೊಬ್ಬನು ನಟಿಯ ಫೋನ್​ ನಂಬರ್​ (Adah Sharma Phone Number) ಲೀಕ್​ ಮಾಡಿದ್ದಾನೆ ಎಂದು ವರದಿ ಆಗಿದೆ. ಅಲ್ಲದೇ ಅದಾ ಶರ್ಮಾಗೆ ಸಂಬಂಧಿಸಿದ ಖಾಸಗಿ ಮಾಹಿತಿಯನ್ನು ಕೂಡ ಸೋರಿಕೆ ಮಾಡುವುದಾಗಿ ಆತ ಬೆದರಿಕೆ ಹಾಕಿದ್ದಾನೆ. ಸದ್ಯಕ್ಕೆ ಆ ಕಿಡಿಗೇಡಿಯ ಇನ್​ಸ್ಟಾಗ್ರಾಮ್​ ಖಾತೆ ಡಿಆ್ಯಕ್ಟಿವೇಟ್​ ಆಗಿದೆ. ಒಟ್ಟಿನಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾದ ನಟಿಗೆ ಇದರಿಂದ ತೊಂದರೆ ಆಗಿರುವುದಂತೂ ನಿಜ.

ಫೋನ್​ ನಂಬರ್​ ಲೀಕ್​ ಆದ ಬಳಿಕ ಆ ನಂಬರ್​ ಬದಲಿಸುವುದು ಸೆಲೆಬ್ರಿಟಿಗಳಿಗೆ ಅನಿವಾರ್ಯ ಆಗುತ್ತದೆ. ಅದಾ ಶರ್ಮಾ ಕೂಡ ಹಾಗೆಯೇ ಮಾಡಿದ್ದಾರೆ. ಆದರೆ ಹೊಸ ನಂಬರ್​ ಅನ್ನು ಕೂಡ ಲೀಕ್​ ಮಾಡುವುದಾಗಿ ಕಿಡಿಗೇಡಿಯಿಂದ ಬೆದರಿಕೆ ಬಂದಿದೆ. ಈತನ ವಿರುದ್ಧ ಮುಂಬೈ ಸೈಬರ್​ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ಅದಾ ಶರ್ಮಾ:

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಅದಾ ಶರ್ಮಾ ಅವರ ಬರ್ತ್​ಡೇ (ಮೇ 11) ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಇದನ್ನೂ ಓದಿ: The Kerala Story: ಕುಸಿಯಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 250 ಕೋಟಿ ರೂ. ಗಡಿ ಮುಟ್ಟುವುದು ಅನುಮಾನ

‘ದಿ ಗೇಮ್​ ಆಫ್​ ಗಿರ್ಗಿಟ್​’ ಚಿತ್ರಕ್ಕೆ ವಿಶಾಲ್​ ಪಾಂಡ್ಯ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾ ಬಗ್ಗೆ ಈಗಲೇ ಕುತೂಹಲ ಸೃಷ್ಟಿ ಆಗಿದೆ. ಒಂದು ಕಾಲದಲ್ಲಿ ಬ್ಲೂ ವೇಲ್​ ಗೇಮ್​ ಬಗ್ಗೆ ಸಾಕಷ್ಟು ಕ್ರೇಜ್​ ಇತ್ತು. ಯುವಕರು ಈ ಗೇಮ್​ಗೆ ಅಡಿಕ್ಟ್​ ಆಗಿದ್ದರು. ಅದರಿಂದ ಸಾಕಷ್ಟು ಅನಾಹುತಗಳು ಆದ ಬಗ್ಗೆ ಮಾತುಗಳು ಕೇಳಿಬಂದಿದ್ದವು. ಅಂಥ ಖತರ್ನಾಕ್​ ಗೇಮ್​ ಕುರಿತು ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾ ಸಿದ್ಧವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ