AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

The Kerala Story: ‘ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ. ಮೊದಲು ಸೆಟ್​ಗೆ ನಟಿಯನ್ನು ಕರೆಯುತ್ತಾರೆ. ಆಮೇಲೆ..’ ಎಂದು ತಮ್ಮ ಅನುಭವವನ್ನು ಅದಾ ಶರ್ಮಾ ವಿವರಿಸಿದ್ದಾರೆ.

Adah Sharma: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ
ಅದಾ ಶರ್ಮಾ
ಮದನ್​ ಕುಮಾರ್​
|

Updated on: May 28, 2023 | 8:23 AM

Share

ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ನಟಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಪವನ್​ ಒಡೆಯರ್​, ಸುದೀಪ್ತೋ ಸೇನ್​ (Sudipto Sen) ಸೇರಿದಂತೆ ಅನೇಕ ಪ್ರತಿಭಾವಂತ ನಿರ್ದೇಶಕರ ಜೊತೆ ಅವರು ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬರ ಜೊತೆಗೂ ಅವರಿಗೆ ಬೇರೆ ಬೇರೆ ರೀತಿಯ ಅನುಭವ ಆಗಿದೆ. ಆ ಬಗ್ಗೆ ಅವರೀಗ ಬಾಯಿ ಬಿಟ್ಟಿದ್ದಾರೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ ಅದಾ ಶರ್ಮಾ ಅವರ ಖ್ಯಾತಿ ಹೆಚ್ಚಾಗಿದೆ. 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿರುವ ಈ ಸಿನಿಮಾದಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಂತಾಗಿದೆ. ಈಗ ಅವರು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ಲಿಂಗ ತಾರತಮ್ಯ ಇದೆ ಎಂದು ಅದಾ ಶರ್ಮಾ (Adah Sharma) ಹೇಳಿದ್ದಾರೆ. ನಟ ಮತ್ತು ನಟಿಯರ ಮಧ್ಯೆ ಭೇದ-ಭಾವ ಮಾಡುವ ನಿರ್ದೇಶಕರ ಜೊತೆ ಕೆಲಸ ಮಾಡಲು ತಮಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ.

‘ದಕ್ಷಿಣ ಭಾರತ ಮತ್ತು ಉತ್ತರ ಭಾರತದ ನಿರ್ದೇಶಕರ ಜೊತೆ ನಾನು ಕೆಲಸ ಮಾಡಿದ್ದೇನೆ. ಅದರಲ್ಲಿ ಕೆಲವರು ಉತ್ತಮರು. ಇನ್ನೂ ಕೆಲವರು ಉತ್ತಮರಲ್ಲ. ಎಲ್ಲವೂ ಆ ವ್ಯಕ್ತಿಯ ಮೇಲೆ ನಿರ್ಧಾರ ಆಗಿರುತ್ತದೆ ಎಂಬುದು ನನಗೆ ತಿಳಿಯಿತು. ಭಾಷೆ ಯಾವುದೇ ಆಗಿರಲಿ, ನಿರ್ದೇಶಕರು ಒಳ್ಳೆಯವರಾಗಿದ್ದರೆ ಎಲ್ಲವೂ ಸರಿ ಆಗುತ್ತದೆ. ನಿರ್ದೇಶಕ ಕೆಟ್ಟವನಾಗಿದ್ದರೆ ಎಲ್ಲವೂ ಕೆಟ್ಟದಾಗುತ್ತದೆ’ ಎಂದು ಅದಾ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಫೋನ್​ ನಂಬರ್​ ಲೀಕ್​; ಕಿರುಕುಳ ನೀಡಿದ ಸೈಬರ್​ ಕಿಡಿಗೇಡಿ

‘ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ. ಮೊದಲು ಸೆಟ್​ಗೆ ನಟಿಯನ್ನು ಕರೆಯುತ್ತಾರೆ. ಆಮೇಲೆ ಕಾಯಲು ಹೇಳುತ್ತಾರೆ. ನಂತರ ನಟನ ಮ್ಯಾನೇಜರ್​ನನ್ನು ಕರೆಯುತ್ತಾರೆ. ಹುಡುಗಿ ಕಾಯುತ್ತಿದ್ದಾಳೆ ಅಂತ ಹೀರೋಗೆ ಹೇಳಿಕಳಿಸುತ್ತಾರೆ. ಹೀಗೆ ಪುರುಷ-ಮಹಿಳೆ ಎಂಬ ಲಿಂಗ ತಾರತಮ್ಯ ಇರುವ ಕಡೆಗಳಲ್ಲಿ ನನಗೆ ಕೆಲಸ ಮಾಡಲು ಇಷ್ಟ ಇಲ್ಲ’ ಎಂದು ಅದಾ ಶರ್ಮಾ ಹೇಳಿದ್ದಾರೆ. ಸದ್ಯ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ ಕೇವಲ ಸಿನಿಮಾ ಅಲ್ಲ, ಇದೊಂದು ಆಂದೋಲನ’: ನಟಿ ಅದಾ ಶರ್ಮಾ

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಅದಾ ಶರ್ಮಾ ಅವರ ಬರ್ತ್​ಡೇ (ಮೇ 11) ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

2008ರಿಂದಲೂ ಅದಾ ಶರ್ಮಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ‘ರಣವಿಕ್ರಮ’. 2015ರಲ್ಲಿ ತೆರೆಕಂಡಿದ್ದ ಆ ಚಿತ್ರಕ್ಕೆ ಪುನೀತ್​ ರಾಜ್​ಕುಮಾರ್​ ಹೀರೋ ಆಗಿದ್ದರು. ಪುನೀತ್​ಗೆ ಜೋಡಿಯಾಗಿ ಅದಾ ಶರ್ಮಾ ಅಭಿನಯಿಸಿದ್ದರು. ಆ ಬಳಿಕ ಅವರು ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ