Adah Sharma: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

The Kerala Story: ‘ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ. ಮೊದಲು ಸೆಟ್​ಗೆ ನಟಿಯನ್ನು ಕರೆಯುತ್ತಾರೆ. ಆಮೇಲೆ..’ ಎಂದು ತಮ್ಮ ಅನುಭವವನ್ನು ಅದಾ ಶರ್ಮಾ ವಿವರಿಸಿದ್ದಾರೆ.

Adah Sharma: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ
ಅದಾ ಶರ್ಮಾ

Updated on: May 28, 2023 | 8:23 AM

ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ನಟಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಪವನ್​ ಒಡೆಯರ್​, ಸುದೀಪ್ತೋ ಸೇನ್​ (Sudipto Sen) ಸೇರಿದಂತೆ ಅನೇಕ ಪ್ರತಿಭಾವಂತ ನಿರ್ದೇಶಕರ ಜೊತೆ ಅವರು ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬರ ಜೊತೆಗೂ ಅವರಿಗೆ ಬೇರೆ ಬೇರೆ ರೀತಿಯ ಅನುಭವ ಆಗಿದೆ. ಆ ಬಗ್ಗೆ ಅವರೀಗ ಬಾಯಿ ಬಿಟ್ಟಿದ್ದಾರೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ ಅದಾ ಶರ್ಮಾ ಅವರ ಖ್ಯಾತಿ ಹೆಚ್ಚಾಗಿದೆ. 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿರುವ ಈ ಸಿನಿಮಾದಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ಸಿಕ್ಕಂತಾಗಿದೆ. ಈಗ ಅವರು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಚಿತ್ರರಂಗದಲ್ಲಿ ಲಿಂಗ ತಾರತಮ್ಯ ಇದೆ ಎಂದು ಅದಾ ಶರ್ಮಾ (Adah Sharma) ಹೇಳಿದ್ದಾರೆ. ನಟ ಮತ್ತು ನಟಿಯರ ಮಧ್ಯೆ ಭೇದ-ಭಾವ ಮಾಡುವ ನಿರ್ದೇಶಕರ ಜೊತೆ ಕೆಲಸ ಮಾಡಲು ತಮಗೆ ಇಷ್ಟ ಇಲ್ಲ ಎಂದು ಅವರು ಹೇಳಿದ್ದಾರೆ.

‘ದಕ್ಷಿಣ ಭಾರತ ಮತ್ತು ಉತ್ತರ ಭಾರತದ ನಿರ್ದೇಶಕರ ಜೊತೆ ನಾನು ಕೆಲಸ ಮಾಡಿದ್ದೇನೆ. ಅದರಲ್ಲಿ ಕೆಲವರು ಉತ್ತಮರು. ಇನ್ನೂ ಕೆಲವರು ಉತ್ತಮರಲ್ಲ. ಎಲ್ಲವೂ ಆ ವ್ಯಕ್ತಿಯ ಮೇಲೆ ನಿರ್ಧಾರ ಆಗಿರುತ್ತದೆ ಎಂಬುದು ನನಗೆ ತಿಳಿಯಿತು. ಭಾಷೆ ಯಾವುದೇ ಆಗಿರಲಿ, ನಿರ್ದೇಶಕರು ಒಳ್ಳೆಯವರಾಗಿದ್ದರೆ ಎಲ್ಲವೂ ಸರಿ ಆಗುತ್ತದೆ. ನಿರ್ದೇಶಕ ಕೆಟ್ಟವನಾಗಿದ್ದರೆ ಎಲ್ಲವೂ ಕೆಟ್ಟದಾಗುತ್ತದೆ’ ಎಂದು ಅದಾ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಫೋನ್​ ನಂಬರ್​ ಲೀಕ್​; ಕಿರುಕುಳ ನೀಡಿದ ಸೈಬರ್​ ಕಿಡಿಗೇಡಿ

‘ಎಲ್ಲ ಜಾಗದಲ್ಲೂ ನಾನು ಒಳ್ಳೆಯ, ಕೆಟ್ಟ ಮತ್ತು ಅತೀ ಕೆಟ್ಟ ಜನರನ್ನು ನೋಡಿದ್ದೇನೆ. ಮೊದಲು ಸೆಟ್​ಗೆ ನಟಿಯನ್ನು ಕರೆಯುತ್ತಾರೆ. ಆಮೇಲೆ ಕಾಯಲು ಹೇಳುತ್ತಾರೆ. ನಂತರ ನಟನ ಮ್ಯಾನೇಜರ್​ನನ್ನು ಕರೆಯುತ್ತಾರೆ. ಹುಡುಗಿ ಕಾಯುತ್ತಿದ್ದಾಳೆ ಅಂತ ಹೀರೋಗೆ ಹೇಳಿಕಳಿಸುತ್ತಾರೆ. ಹೀಗೆ ಪುರುಷ-ಮಹಿಳೆ ಎಂಬ ಲಿಂಗ ತಾರತಮ್ಯ ಇರುವ ಕಡೆಗಳಲ್ಲಿ ನನಗೆ ಕೆಲಸ ಮಾಡಲು ಇಷ್ಟ ಇಲ್ಲ’ ಎಂದು ಅದಾ ಶರ್ಮಾ ಹೇಳಿದ್ದಾರೆ. ಸದ್ಯ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ ಕೇವಲ ಸಿನಿಮಾ ಅಲ್ಲ, ಇದೊಂದು ಆಂದೋಲನ’: ನಟಿ ಅದಾ ಶರ್ಮಾ

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಅದಾ ಶರ್ಮಾ ಅವರ ಬರ್ತ್​ಡೇ (ಮೇ 11) ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಇದನ್ನೂ ಓದಿ: Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

2008ರಿಂದಲೂ ಅದಾ ಶರ್ಮಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ‘ರಣವಿಕ್ರಮ’. 2015ರಲ್ಲಿ ತೆರೆಕಂಡಿದ್ದ ಆ ಚಿತ್ರಕ್ಕೆ ಪುನೀತ್​ ರಾಜ್​ಕುಮಾರ್​ ಹೀರೋ ಆಗಿದ್ದರು. ಪುನೀತ್​ಗೆ ಜೋಡಿಯಾಗಿ ಅದಾ ಶರ್ಮಾ ಅಭಿನಯಿಸಿದ್ದರು. ಆ ಬಳಿಕ ಅವರು ಕನ್ನಡದಲ್ಲಿ ಬೇರೆ ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us