AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

The Kerala Story Movie: ಭಾನುವಾರ (ಮೇ 14) ಅದಾ ಶರ್ಮಾ ಹಾಗೂ ಸುದಿಪ್ತೋ ಸೇನ್ ಕರೀಮ್​ ನಗರದಲ್ಲಿ ನಡೆಯಬೇಕಿದ್ದ ‘ಹಿಂದೂ ಏಕತಾ ಯಾತ್ರಾ’ದಲ್ಲಿ ಭಾಗಿ ಆಗಬೇಕಿತ್ತು. ಆದರೆ, ಇದಕ್ಕೆ ತೆರಳುವುದಕ್ಕೂ ಮೊದಲೇ ರಸ್ತೆ ಅಪಘಾತ ಉಂಟಾಗಿದೆ.

Adah Sharma: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ
ಅದಾ ಶರ್ಮಾ-ಸುದಿಪ್ತೋ ಸೇನ್
ರಾಜೇಶ್ ದುಗ್ಗುಮನೆ
| Edited By: |

Updated on:May 15, 2023 | 11:26 AM

Share

ಇತ್ತೀಚೆಗೆ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story Movie) ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಸಿನಿಮಾ ತಂಡಕ್ಕೆ ಈಗ ಅಪಘಾತ ಆಗಿದೆ. ನಟಿ ಅದಾ ಶರ್ಮಾ (Adah Sharma) ಹಾಗೂ ಸಿನಿಮಾ ನಿರ್ದೇಶಕ ಸುದಿಪ್ತೋ ಸೇನ್​ಗೆ ಅಪಘಾತದಲ್ಲಿ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾವು ಆರೋಗ್ಯವಾಗಿರುವುದಾಗಿ ಹೆಲ್ತ್​ ಅಪ್​ಡೇಟ್ ನೀಡಿದ್ದಾರೆ.

ಭಾನುವಾರ (ಮೇ 14) ಅದಾ ಶರ್ಮಾ ಹಾಗೂ ಸುದಿಪ್ತೋ ಸೇನ್ ಕರೀಮ್​ ನಗರದಲ್ಲಿ ನಡೆಯಬೇಕಿದ್ದ ‘ಹಿಂದೂ ಏಕತಾ ಯಾತ್ರಾ’ದಲ್ಲಿ ಭಾಗಿ ಆಗಬೇಕಿತ್ತು. ಆದರೆ, ಇದಕ್ಕೆ ತೆರಳುವುದಕ್ಕೂ ಮೊದಲೇ ರಸ್ತೆ ಅಪಘಾತ ಉಂಟಾಗಿದೆ. ಈ ಕಾರಣಕ್ಕೆ ಕಾರ್ಯಕ್ರಮ ರದ್ದಾಗಿದೆ. ಅವರಿಗೆ ಅಪಘಾತ ಉಂಟಾಗಿದೆ ಎನ್ನುವ ವಿಚಾರ ಆತಂಕ ಮೂಡಿಸಿತ್ತು. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.

‘ನಾನು ಆರೋಗ್ಯವಾಗಿದ್ದೀನಿ. ಅಪಘಾತದ ಬಗ್ಗೆ ಸುದ್ದಿ ಹಬ್ಬಿರುವುದರಿಂದ ಸಾಕಷ್ಟು ಮೆಸೇಜ್​ಗಳು ಬರುತ್ತಿವೆ. ಇಡೀ ತಂಡ ಹಾಗೂ ನಾವು ಆರೋಗ್ಯವಾಗಿದ್ದೀವಿ. ಗಂಭೀರ ಅಪಘಾತ ಅಲ್ಲ. ನಿಮ್ಮ ಕಾಳಜಿಗೆ ಧನ್ಯವಾದ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Adah Sharma: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್

ಅದಾ ಶರ್ಮಾ ಬಗ್ಗೆ ಟೀಕೆ:

ಅದಾ ಶರ್ಮಾ ಸದಾ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾರೆ. ಅವರ ಇನ್​ಸ್ಟಾಗ್ರಾಮ್ ಖಾತೆ ತೆರೆದರೆ ಈ ರೀತಿಯ ಹಲವು ಫೋಟೋಗಳು ಸಿಗುತ್ತವೆ. ಸಿನಿಮಾದಲ್ಲೂ ಅವರು ಪಕ್ಕದ ಮನೆಯ ಹುಡುಗಿ ಪಾತ್ರ ಮಾಡಿದ್ದೇ ಹೆಚ್ಚು. ಆ ಪಾತ್ರಗಳನ್ನು ಮಾಡಿ ಗೆಲುವು ಪಡೆದಿರಲಿಲ್ಲ. ಆದರೆ, ‘ದಿ ಕೇರಳ ಸ್ಟೋರಿ’ ಅದಾ ವೃತ್ತಿ ಜೀವನವನ್ನೇ ಬದಲಾಯಿಸಿತು. ಹೀಗಾಗಿ, ಅನೇಕರು ನಟಿಯನ್ನು ಟೀಕಿಸಿದ್ದಾರೆ.

‘ಅದಾ ಶರ್ಮಾ ಎಷ್ಟೇ ಗ್ಲಾಮರಸ್ ಆಗಿ ಕಾಣಿಸಿಕೊಂಡರೂ ಜನರು ಅವರನ್ನು ಗೆಲ್ಲಿಸಲಿಲ್ಲ. ಬುರ್ಖಾ ಹಾಕಿದ ಬಳಿಕ ಅವರಿಗೆ ಯಶಸ್ಸು ಸಿಕ್ಕಿದೆ’ ಎನ್ನುವ ಮಾತುಗಳು ಕೇಳಿ ಬಂದಿವೆ. ಆದರೆ, ಈ ಮಾತಿಗೆಲ್ಲ ಅದಾ ಶರ್ಮಾ ಕಿವಿಕೊಟ್ಟಿಲ್ಲ. ಅವರು ಈ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:30 am, Mon, 15 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು