AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಜನೇಯನೇ ನನ್ನ ನೆಚ್ಚಿನ ಸೂಪರ್​ ಹೀರೋ’: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಹೇಳಿಕೆ

ಬಾಲಿವುಡ್​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅದಾ ಶರ್ಮಾ ಅವರ ಫೇಮಸ್​ ಆಗಿದ್ದಾರೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದ್ದು ‘ದಿ ಕೇರಳ ಸ್ಟೋರಿ’ ಸಿನಿಮಾದ ಮೂಲಕ. ಈಗ ಅವರೊಂದು ಸೂಪರ್​ ಹೀರೋ ಕಾನ್ಸೆಪ್ಟ್​ನ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ತಮ್ಮ ಸೂಪರ್​ ಹೀರೋ ಯಾರು ಎಂಬುದನ್ನು ತಿಳಿಸಿದ್ದಾರೆ.

‘ಆಂಜನೇಯನೇ ನನ್ನ ನೆಚ್ಚಿನ ಸೂಪರ್​ ಹೀರೋ’: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಹೇಳಿಕೆ
ಅದಾ ಶರ್ಮಾ
ಮದನ್​ ಕುಮಾರ್​
|

Updated on: Aug 24, 2023 | 2:56 PM

Share

ನಟಿ ಅದಾ ಶರ್ಮಾ (Adah Sharma) ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಲ್ಲಿ ಮುಖ್ಯ ಭೂಮಿಕೆ ಮಾಡಿದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದಕ್ಕಿಂತ ಮತ್ತೊಂದು ಒಳ್ಳೆಯ ಅವಕಾಶ ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಜಾಗತಿಕ ಮಟ್ಟದ ಒಂದು ಪ್ರಾಜೆಕ್ಟ್​ಗೆ ಸಹಿ ಮಾಡಿದ್ದಾರೆ. ಅದರಲ್ಲಿ ಅವರು ಲೇಡಿ ಸೂಪರ್​ ಹೀರೋ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಸೂಪರ್​ ಹೀರೋ ಯಾರು ಎಂಬುದನ್ನು ಅದಾ ಶರ್ಮಾ ಬಹಿರಂಗಪಡಿಸಿದ್ದಾರೆ. ಅವರಿಗೆ ಆಂಜನೇಯನ ಮೇಲೆ ಅಪಾರವಾದ ಭಕ್ತಿ ಇದೆ. ಹಾಗಾಗಿ ಆಂಜನೇಯನೇ (Hanuman) ತಮ್ಮ ಸೂಪರ್​ ಹೀರೋ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಮಾನವೀಯತೆ, ಅಗಾದವಾದ ಶಕ್ತಿ, ಏಕಾಗ್ರತೆ, ಜ್ಞಾನ ಮುಂತಾದ ಗುಣಗಳ ಮಿಶ್ರಣದಂತೆ ಆಂಜನೇಯ ವ್ಯಕ್ತಿತ್ವ ಇದೆ. ಆತ ಅದ್ಭುತ ಸಂಗೀತಗಾರ ಕೂಡ ಹೌದು. ಯಾವುದೇ ಆಕಾರವನ್ನು ಪಡೆಯಬಲ್ಲ ಶಕ್ತಿ ಆತನಿಗೆ ಇದೆ. ಅವನೇ ನನ್ನ ಸೂಪರ್​ ಹೀರೋ’ ಎಂದು ಹೇಳುವ ಮೂಲಕ ಅದಾ ಶರ್ಮಾ ಅವರು ಹನುಮಂತನ ಗುಣಗಾನ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್​ ಆದ ಬಳಿಕ ಅದಾ ಶರ್ಮಾ ಅವರ ಖ್ಯಾತಿ ಹೆಚ್ಚಾಗಿದೆ. ಅವರ ಸೂಪರ್ ಹೀರೋ ಪ್ರಾಜೆಕ್ಟ್​ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಖ್ಯಾತಿಯ ನಟಿ ಅದಾ ಶರ್ಮಾ ಮುಂದಿನ ಸಿನಿಮಾ ‘ಸಿ.ಡಿ’ ಪೋಸ್ಟರ್​ ವೈರಲ್​

ಬಾಲಿವುಡ್​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅದಾ ಶರ್ಮಾ ಅವರು ಫೇಮಸ್​ ಆಗಿದ್ದಾರೆ. ಕನ್ನಡದ ‘ರಣವಿಕ್ರಮ’ ಸಿನಿಮಾದಲ್ಲಿ ಅವರು ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದರು. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ನಟಿಸಿ ಅವರು ಜನರನ್ನು ರಂಜಿಸಿದ್ದಾರೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದ್ದು ‘ದಿ ಕೇರಳ ಸ್ಟೋರಿ’ ಸಿನಿಮಾದ ಮೂಲಕ. ಈ ಚಿತ್ರದಲ್ಲಿ ಅವರು ಎರಡು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಹಿಂದೂ ಹುಡುಗಿಯಾಗಿ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

ಅದಾ ಶರ್ಮ ಅವರು ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಇದು ಬ್ಲ್ಯೂ ವೇಲ್​ ಗೇಮ್​ ಕುರಿತ ಸಿನಿಮಾ ಆಗಿರಲಿದೆ. ಅದರಲ್ಲಿ ಅವರು ಪೊಲೀಸ್​ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಆ ಚಿತ್ರ ಬಿಡುಗಡೆ ಆಗುವುದಕ್ಕಿಂತಲೂ ಮುನ್ನವೇ ‘ಸಿ.ಡಿ’ ಸಿನಿಮಾದ ಬಗ್ಗೆ ಮಾಹಿತಿ ಕೇಳಿಬಂದಿದೆ. ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ವೈರಲ್​ ಆಗಿದೆ. ‘ಕ್ರಿಮಿನಲ್​ ಅಥವಾ ಡೆವಿಲ್​’ ಎಂಬ ಟ್ಯಾಗ್​ಲೈನ್​ ಈ ಪೋಸ್ಟರ್​ನಲ್ಲಿ ಕಾಣಿಸಿದೆ. ಸಿ ಎಂದರೆ ಕ್ರಿಮಿನಲ್​, ಡಿ ಎಂದರೆ ಡೆವಿಲ್​ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್