AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂಜನೇಯನೇ ನನ್ನ ನೆಚ್ಚಿನ ಸೂಪರ್​ ಹೀರೋ’: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಹೇಳಿಕೆ

ಬಾಲಿವುಡ್​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅದಾ ಶರ್ಮಾ ಅವರ ಫೇಮಸ್​ ಆಗಿದ್ದಾರೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದ್ದು ‘ದಿ ಕೇರಳ ಸ್ಟೋರಿ’ ಸಿನಿಮಾದ ಮೂಲಕ. ಈಗ ಅವರೊಂದು ಸೂಪರ್​ ಹೀರೋ ಕಾನ್ಸೆಪ್ಟ್​ನ ಸಿನಿಮಾದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ತಮ್ಮ ಸೂಪರ್​ ಹೀರೋ ಯಾರು ಎಂಬುದನ್ನು ತಿಳಿಸಿದ್ದಾರೆ.

‘ಆಂಜನೇಯನೇ ನನ್ನ ನೆಚ್ಚಿನ ಸೂಪರ್​ ಹೀರೋ’: ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ ಹೇಳಿಕೆ
ಅದಾ ಶರ್ಮಾ
ಮದನ್​ ಕುಮಾರ್​
|

Updated on: Aug 24, 2023 | 2:56 PM

Share

ನಟಿ ಅದಾ ಶರ್ಮಾ (Adah Sharma) ಅವರಿಗೆ ಭಾರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಲ್ಲಿ ಮುಖ್ಯ ಭೂಮಿಕೆ ಮಾಡಿದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದಕ್ಕಿಂತ ಮತ್ತೊಂದು ಒಳ್ಳೆಯ ಅವಕಾಶ ಅವರನ್ನು ಹುಡುಕಿಕೊಂಡು ಬರುತ್ತಿವೆ. ಈಗ ಅವರು ಜಾಗತಿಕ ಮಟ್ಟದ ಒಂದು ಪ್ರಾಜೆಕ್ಟ್​ಗೆ ಸಹಿ ಮಾಡಿದ್ದಾರೆ. ಅದರಲ್ಲಿ ಅವರು ಲೇಡಿ ಸೂಪರ್​ ಹೀರೋ ಪಾತ್ರವನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ಸೂಪರ್​ ಹೀರೋ ಯಾರು ಎಂಬುದನ್ನು ಅದಾ ಶರ್ಮಾ ಬಹಿರಂಗಪಡಿಸಿದ್ದಾರೆ. ಅವರಿಗೆ ಆಂಜನೇಯನ ಮೇಲೆ ಅಪಾರವಾದ ಭಕ್ತಿ ಇದೆ. ಹಾಗಾಗಿ ಆಂಜನೇಯನೇ (Hanuman) ತಮ್ಮ ಸೂಪರ್​ ಹೀರೋ ಎಂದು ಅವರು ಹೇಳಿದ್ದಾರೆ. ಅವರ ಈ ಹೇಳಿಕೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಮಾನವೀಯತೆ, ಅಗಾದವಾದ ಶಕ್ತಿ, ಏಕಾಗ್ರತೆ, ಜ್ಞಾನ ಮುಂತಾದ ಗುಣಗಳ ಮಿಶ್ರಣದಂತೆ ಆಂಜನೇಯ ವ್ಯಕ್ತಿತ್ವ ಇದೆ. ಆತ ಅದ್ಭುತ ಸಂಗೀತಗಾರ ಕೂಡ ಹೌದು. ಯಾವುದೇ ಆಕಾರವನ್ನು ಪಡೆಯಬಲ್ಲ ಶಕ್ತಿ ಆತನಿಗೆ ಇದೆ. ಅವನೇ ನನ್ನ ಸೂಪರ್​ ಹೀರೋ’ ಎಂದು ಹೇಳುವ ಮೂಲಕ ಅದಾ ಶರ್ಮಾ ಅವರು ಹನುಮಂತನ ಗುಣಗಾನ ಮಾಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್​ ಆದ ಬಳಿಕ ಅದಾ ಶರ್ಮಾ ಅವರ ಖ್ಯಾತಿ ಹೆಚ್ಚಾಗಿದೆ. ಅವರ ಸೂಪರ್ ಹೀರೋ ಪ್ರಾಜೆಕ್ಟ್​ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಖ್ಯಾತಿಯ ನಟಿ ಅದಾ ಶರ್ಮಾ ಮುಂದಿನ ಸಿನಿಮಾ ‘ಸಿ.ಡಿ’ ಪೋಸ್ಟರ್​ ವೈರಲ್​

ಬಾಲಿವುಡ್​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅದಾ ಶರ್ಮಾ ಅವರು ಫೇಮಸ್​ ಆಗಿದ್ದಾರೆ. ಕನ್ನಡದ ‘ರಣವಿಕ್ರಮ’ ಸಿನಿಮಾದಲ್ಲಿ ಅವರು ಪುನೀತ್​ ರಾಜ್​ಕುಮಾರ್​ ಜೊತೆ ನಟಿಸಿದ್ದರು. ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ನಟಿಸಿ ಅವರು ಜನರನ್ನು ರಂಜಿಸಿದ್ದಾರೆ. ಅವರಿಗೆ ದೊಡ್ಡ ಗೆಲುವು ಸಿಕ್ಕಿದ್ದು ‘ದಿ ಕೇರಳ ಸ್ಟೋರಿ’ ಸಿನಿಮಾದ ಮೂಲಕ. ಈ ಚಿತ್ರದಲ್ಲಿ ಅವರು ಎರಡು ಶೇಡ್​ನ ಪಾತ್ರ ನಿಭಾಯಿಸಿದ್ದಾರೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವ ಹಿಂದೂ ಹುಡುಗಿಯಾಗಿ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಅಂಥವರ ಜತೆ ಕೆಲಸ ಮಾಡೋಕೆ ನಂಗೆ ಇಷ್ಟ ಇಲ್ಲ’: ಕೆಟ್ಟ ನಿರ್ದೇಶಕರ ಬಣ್ಣ ಬಯಲು ಮಾಡಿದ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

ಅದಾ ಶರ್ಮ ಅವರು ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಇದು ಬ್ಲ್ಯೂ ವೇಲ್​ ಗೇಮ್​ ಕುರಿತ ಸಿನಿಮಾ ಆಗಿರಲಿದೆ. ಅದರಲ್ಲಿ ಅವರು ಪೊಲೀಸ್​ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ. ಆ ಚಿತ್ರ ಬಿಡುಗಡೆ ಆಗುವುದಕ್ಕಿಂತಲೂ ಮುನ್ನವೇ ‘ಸಿ.ಡಿ’ ಸಿನಿಮಾದ ಬಗ್ಗೆ ಮಾಹಿತಿ ಕೇಳಿಬಂದಿದೆ. ಈ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ವೈರಲ್​ ಆಗಿದೆ. ‘ಕ್ರಿಮಿನಲ್​ ಅಥವಾ ಡೆವಿಲ್​’ ಎಂಬ ಟ್ಯಾಗ್​ಲೈನ್​ ಈ ಪೋಸ್ಟರ್​ನಲ್ಲಿ ಕಾಣಿಸಿದೆ. ಸಿ ಎಂದರೆ ಕ್ರಿಮಿನಲ್​, ಡಿ ಎಂದರೆ ಡೆವಿಲ್​ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?