AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 156 ಕೋಟಿ ರೂಪಾಯಿಗೆ ಏರಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್; ಮುಂದಿನ ಟಾರ್ಗೆಟ್​ 200 ಕೋಟಿ ರೂ.

The Kerala Story Box Office Collection: ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.

The Kerala Story: 156 ಕೋಟಿ ರೂಪಾಯಿಗೆ ಏರಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್; ಮುಂದಿನ ಟಾರ್ಗೆಟ್​ 200 ಕೋಟಿ ರೂ.
ಅದಾ ಶರ್ಮಾ
ಮದನ್​ ಕುಮಾರ್​
|

Updated on: May 17, 2023 | 1:02 PM

Share

ಮುಖ್ಯಾಂಶಗಳು

  • ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ.
  • ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್​ 200 ಕೋಟಿ ರೂಪಾಯಿ!
  • ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.

ನೋಡನೋಡುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಜಯಭೇರಿ ಬಾರಿಸಿದೆ. ದೇಶದ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ವಿವಾದಾತ್ಮಕ ಕಥಾಹಂದರ ಇರುವುದೇ ಇದಕ್ಕೆ ಕಾರಣ ಎಂದರೂ ತಪ್ಪಿಲ್ಲ. ಟೀಸರ್​ ಬಿಡುಗಡೆ ಆದಾಗಲೇ ಈ ಸಿನಿಮಾ ವಿವಾದ ಎಬ್ಬಿಸಿತ್ತು. ಸಿನಿಮಾ ಬಿಡುಗಡೆ ಬಳಿಕವೂ ಕಿರಿಕ್​ ಜೋರಾಯಿತು. ಏನೇ ಆದರೂ ಈ ಚಿತ್ರದ ಗಲ್ಲಾಪೆಟ್ಟಿಗೆ ಗಳಿಕೆಗೆ ತೊಂದರೆ ಆಗಿಲ್ಲ. ಈಗ ‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್ (Box Office Collection)​ 156 ಕೋಟಿ ರೂಪಾಯಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ನಿರ್ದೇಶಕ ಸುದೀಪ್ತೋ ಸೇನ್​ ಅವರಿಗೆ ಈ ಚಿತ್ರದಿಂದ ಖ್ಯಾತಿ ಹೆಚ್ಚಾಗಿದೆ. ಮುಖ್ಯಭೂಮಿಕೆ ನಿಭಾಯಿಸಿರುವ ನಟಿ ಅದಾ ಶರ್ಮಾ (Adah Sharma) ಕೂಡ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ.

ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್​ 200 ಕೋಟಿ ರೂಪಾಯಿ! ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ಇದನ್ನೂ ಓದಿ: Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

10ನೇ ದಿನ: 23.75 ಕೋಟಿ ರೂ.

11ನೇ ದಿನ: 10.30 ಕೋಟಿ ರೂ.

12ನೇ ದಿನ: 9.65 ಕೋಟಿ ರೂ.

‘ದಿ ಕೇರಳ ಸ್ಟೋರಿ’ ಸೀಕ್ವೆಲ್​ ಮಾಡಲು ನಿರ್ದೇಶಕರಿಗೆ ಆಫರ್​:

ಈ ಸಿನಿಮಾದ ಸೀಕ್ವೆಲ್​ ಬಗ್ಗೆ ಸುದ್ದಿ ಕೇಳಿಬಂದಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ