AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ಅನಾರೋಗ್ಯಕ್ಕೆ ಒಳಗಾದ ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್​; ಈ ಪರಿಸ್ಥಿತಿ ಬರಲು ಕಾರಣ ಏನು?

Sudipto Sen Health Update: ನಿರ್ದೇಶಕ ಸುದೀಪ್ತೋ ಸೇನ್​ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ.

Sudipto Sen: ಅನಾರೋಗ್ಯಕ್ಕೆ ಒಳಗಾದ ‘ದಿ ಕೇರಳ ಸ್ಟೋರಿ’ ನಿರ್ದೇಶಕ ಸುದೀಪ್ತೋ ಸೇನ್​; ಈ ಪರಿಸ್ಥಿತಿ ಬರಲು ಕಾರಣ ಏನು?
ಸುದೀಪ್ತೋ ಸೇನ್​, ಅದಾ ಶರ್ಮಾ
ಮದನ್​ ಕುಮಾರ್​
|

Updated on: May 26, 2023 | 6:36 PM

Share

ಭಾರಿ ಚರ್ಚೆಗೆ ಒಳಗಾದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಆದರೆ ಬೇಸರದ ಸಂಗತಿ ಏನೆಂದರೆ ಈ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್​ (Sudipto Sen) ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಮತ್ತು ಆಪ್ತರು ಪ್ರಾರ್ಥಿಸುತ್ತಿದ್ದಾರೆ. ಹಲವು ವರ್ಷಗಳಿಂದ ಸುದೀಪ್ತೋ ಸೇನ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವು ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಿಗೆ ನಿರ್ದೇಶನ ಮಾಡಿದ್ದರೂ ಕೂಡ ಅವರಿಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾ ಗೆದ್ದ ಬಳಿಕ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತು. ಈ ಸಿನಿಮಾದ ಪ್ರಚಾರದಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅನೇಕ ಊರುಗಳಿಗೆ ಭೇಟಿ ನೀಡಿದ್ದರು. ವಿಶ್ರಾಂತಿ ಇಲ್ಲದೇ ಪ್ರಯಾಣ ಮಾಡಿದ್ದರಿಂದಲೇ ಸುದೀಪ್ತೋ ಸೇನ್​ ಅವರಿಗೆ ಈಗ ಆರೋಗ್ಯ ಕೈ ಕೊಟ್ಟಿದೆ. ಕೊಂಚ ಸುಧಾರಿಸಿಕೊಂಡು ಮತ್ತೆ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ಕೆಲವೇ ದಿನಗಳ ಹಿಂದೆ ಸುದೀಪ್ತೋ ಸೇನ್​ ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೆ ಈಡಾಗಿತ್ತು. ಆದರೂ ಅವರಿಗೆ ಹೆಚ್ಚೇನೂ ಪೆಟ್ಟಾಗಿರಲಿಲ್ಲ ಎಂಬುದು ಸಮಾಧಾನಕರ ಸಂಗತಿ. ಅದರ ಬೆನ್ನಲ್ಲೇ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅನೇಕ ಕಡೆಗಳಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇದರ ಕಲೆಕ್ಷನ್​ ಇಳಿಮುಖ ಆಗಿದ್ದರೂ ಕೂಡ ಇನ್ನೂ ಅನೇಕ ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿಯಲಿದೆ. ಹಾಗಾಗಿ ಸುದೀಪ್ತೋ ಸೇನ್​ ಮತ್ತು ತಂಡದವರು ಬೇರೆ ಬೇರೆ ನಗರಗಳಿಗೆ ತೆರಳಿ ಪ್ರಚಾರ ಮುಂದುವರಿಸುವ ಪ್ಲ್ಯಾನ್​ನಲ್ಲಿದ್ದಾರೆ. ನಿರ್ದೇಶಕರು ಅನಾರೋಗ್ಯದಿಂದ ಚೇತರಿಸಿಕೊಳ್ಳಲಿ ಎಂದು ಕಾಯಲಾಗುತ್ತಿದೆ.

ಇದನ್ನೂ ಓದಿ: Sudipto Sen: ‘ದಿ ಕೇರಳ ಸ್ಟೋರಿ​ 2’ ಮಾಡಲು ನಿರ್ದೇಶಕರಿಗೆ ಆಫರ್​; ಇದರಲ್ಲಿ ತೋರಿಸಲಿರುವ ವಿಷಯ ಏನು?

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

ನಟಿ ಅದಾ ಶರ್ಮಾ ಅವರು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅವರ ಪಾತ್ರದ ಸುತ್ತವೇ ಇಡೀ ಸಿನಿಮಾ ಸಾಗುತ್ತದೆ. ಈ ಚಿತ್ರದಲ್ಲಿ ಅವರ ನಟನೆಗೆ ಸಖತ್ ಸ್ಕೋಪ್​ ಸಿಕ್ಕಿದೆ. ಎಲ್ಲರೂ ಅವರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ. ಆದರೆ ಈ ಸಿನಿಮಾದಲ್ಲಿ ನಟಿಸಿದ ಬಳಿಕ ಅವರಿಗೆ ಒಂದಷ್ಟು ತೊಂದರೆ ಕೂಡ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಟ್ರೋಲ್​ ಮಾಡಲಾಯಿತು. ಅಲ್ಲದೇ, ಸೈಬರ್​ ಕಿಡಿಗೇಡಿಗಳಿಂದ ಕಿರುಕುಳ ಕೂಡ ಉಂಟಾಯಿತು.

ಇದನ್ನೂ ಓದಿ: The Kerala Story: ಕುಸಿಯಿತು ‘ದಿ ಕೇರಳ ಸ್ಟೋರಿ’ ಕಲೆಕ್ಷನ್​; 250 ಕೋಟಿ ರೂ. ಗಡಿ ಮುಟ್ಟುವುದು ಅನುಮಾನ

ಇನ್​ಸ್ಟಾಗ್ರಾಮ್​ನಲ್ಲಿ ಕಿಡಿಗೇಡಿಯೊಬ್ಬನು ಅದಾ ಶರ್ಮಾ ಅವರ ಫೋನ್​ ನಂಬರ್​ ಲೀಕ್​ ಮಾಡಿದ್ದಾನೆ ಎಂದು ಇತ್ತೀಚೆಗೆ ವರದಿ ಆಯಿತು. ಅಲ್ಲದೇ ಅದಾ ಶರ್ಮಾಗೆ ಸಂಬಂಧಿಸಿದ ಖಾಸಗಿ ಮಾಹಿತಿಯನ್ನು ಕೂಡ ಸೋರಿಕೆ ಮಾಡುವುದಾಗಿ ಆತ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಸದ್ಯಕ್ಕೆ ಆ ಕಿಡಿಗೇಡಿಯ ಇನ್​ಸ್ಟಾಗ್ರಾಮ್​ ಖಾತೆ ಡಿಆ್ಯಕ್ಟಿವೇಟ್​ ಆಗಿದೆ. ಫೋನ್​ ನಂಬರ್​ ಲೀಕ್​ ಆದ ಬಳಿಕ ಆ ನಂಬರ್​ ಬದಲಿಸುವುದು ಸೆಲೆಬ್ರಿಟಿಗಳಿಗೆ ಅನಿವಾರ್ಯ ಆಗುತ್ತದೆ. ಅದಾ ಶರ್ಮಾ ಕೂಡ ಹಾಗೆಯೇ ಮಾಡಿದ್ದಾರೆ. ಆದರೆ ಹೊಸ ನಂಬರ್​ ಅನ್ನು ಕೂಡ ಲೀಕ್​ ಮಾಡುವುದಾಗಿ ಕಿಡಿಗೇಡಿಯಿಂದ ಬೆದರಿಕೆ ಬಂತು. ಈತನ ವಿರುದ್ಧ ಮುಂಬೈ ಸೈಬರ್​ ಕ್ರೈಂ ವಿಭಾಗದ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!