AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಇನ್ನಷ್ಟು ರಾಷ್ಟ್ರ ಪ್ರಶಸ್ತಿ ಸಿಗಬೇಕು: ವಿವಾದದ ನಡುವೆ ನಿರ್ದೇಶಕನ ಹೇಳಿಕೆ

ಬಿಡುಗಡೆ ಆದಾಗ ‘ದಿ ಕೇರಳ ಸ್ಟೋರಿ’ ಸಿನಿಮಾ ಸಾಕಷ್ಟು ವಿವಾದಗಳನ್ನು ಸೃಷ್ಟಿ ಮಾಡಿತ್ತು. ಈಗ ರಾಷ್ಟ್ರ ಪ್ರಶಸ್ತಿಯ ಕಾರಣದಿಂದಲೂ ಈ ಸಿನಿಮಾ ಮತ್ತೆ ವಿವಾದದ ಕೇಂದ್ರ ಬಿಂದು ಆಗಿದೆ. ‘ಅತ್ಯುತ್ತಮ ನಿರ್ದೇಶನ’ ಮತ್ತು ‘ಅತ್ಯುತ್ತಮ ‘ಛಾಯಾಗ್ರಹಣ’ ಪ್ರಶಸ್ತಿಗಳು ಈ ಸಿನಿಮಾಗೆ ಸಿಕ್ಕಿದೆ. ಅದನ್ನು ಕೆಲವರು ವಿರೋಧಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಇನ್ನಷ್ಟು ರಾಷ್ಟ್ರ ಪ್ರಶಸ್ತಿ ಸಿಗಬೇಕು: ವಿವಾದದ ನಡುವೆ ನಿರ್ದೇಶಕನ ಹೇಳಿಕೆ
Sudipto Sen, Adah Sharma
ಮದನ್​ ಕುಮಾರ್​
|

Updated on: Aug 03, 2025 | 11:49 AM

Share

2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ (National Award) ಘೋಷಣೆ ಮಾಡಲಾಯಿತು. 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳ ಪಟ್ಟಿಯಲ್ಲಿ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಕೂಡ ಸ್ಥಾನ ಪಡೆದುಕೊಂಡಿದೆ. ಈ ಸಿನಿಮಾದ ನಿರ್ದೇಶನಕ್ಕಾಗಿ ಸುದೀಪ್ತೋ ಸೇನ್ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ನೀಡಲಾಗಿದೆ. ಈ ಸಿನಿಮಾದ ಛಾಯಾಗ್ರಹಣಕ್ಕೆ ಕೂಡ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ವಿವಾದಾತ್ಮಕ ಅಂಶ ಇದೆ ಎಂಬ ಕಾರಣಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ನೀಡಿದನ್ನು ಹಲವರು ಖಂಡಿಸಿದ್ದಾರೆ. ಈ ನಡುವೆ ನಿರ್ದೇಶಕ ಸುದೀಪ್ತೋ ಸೇನ್ (Sudipto Sen) ಅವರು ಒಂದು ಹೇಳಿಕೆ ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುದೀಪ್ತೋ ಸೇನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ತಮ್ಮ ಸಿನಿಮಾದ ತಾಂತ್ರಿಕ ಬಳಗದಲ್ಲಿ ಕೆಲಸ ಮಾಡಿದವರ ಬಗ್ಗೆ ಸುದೀಪ್ತೋ ಸೇನ್ ಅವರಿಗೆ ಹೆಮ್ಮೆ ಇದೆ. ಈ ಚಿತ್ರದ ಹಲವು ತಂತ್ರಜ್ಞರಿಗೆ ರಾಷ್ಟ್​ರ ಪ್ರಶಸ್ತಿ ಬರಬೇಕಿತ್ತು ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸಿನಿಮಾ ನಟಿ ಅದಾ ಶರ್ಮಾ ಅವರಿಗೆ ‘ಅತ್ತುತ್ತಮ ನಟಿ’ ಪ್ರಶಸ್ತಿ ಸಿಕ್ಕಿಲ್ಲ ಎಂಬುದಕ್ಕೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಚಿತ್ರವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸಿದೆ ಎಂಬುದು ಹಲವರ ವಾದ. ಆ ಕಾರಣದಿಂದಲೇ ಕೇರಳದ ಅನೇಕರು ಈ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ‘ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ನೀಡಿದ್ದು ಭಾರತೀಯ ಸಿನಿಮಾ ಪರಂಪರೆಗೆ ಮಾಡಿದ ಅವಮಾನ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಕೇರಳ ಮುಖ್ಯಮಂತ್ರಿ ಹೇಳಿಕೆಗೆ ನಿರ್ದೇಶಕ ಸುದೀಪ್ತೋ ಸೇನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಪಿಣರಾಯಿ ವಿಜಯನ್ ಅವರು ನಮ್ಮ ಸಿನಿಮಾ ನೋಡಿಲ್ಲ ಎನಿಸುತ್ತದೆ. ಒಂದು ವೇಳೆ ಸಿನಿಮಾ ನೋಡಿದ್ದರೆ ಅವರು ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ’ ಎಂದು ಸುದೀಪ್ತೋ ಸೇನ್ ಹೇಳಿದ್ದಾರೆ. 2023ರ ಮೇ 5ರಂದು ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ: ಚಿತ್ರಮಂದಿರದ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ದಿ ಕೇರಳ ಸ್ಟೋರಿ’

ಕನ್ನಡದ ಸಿನಿಮಾಗಳಿಗೆ ಈ ಬಾರಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಸಿಕ್ಕಿಲ್ಲ. ಶಾರುಖ್ ಖಾನ್ (ಜವಾನ್) ಮತ್ತು ವಿಕ್ರಾಂತ್ ಮಾಸಿ (12th ಫೇಲ್) ಅವರು ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ನಟಿ ರಾಣಿ ಮುಖರ್ಜಿ ಅವರು ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಚಿತ್ರದ ಅಭಿನಯಕ್ಕಾಗಿ ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್