AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ಸಾವರ್ಕರ್​ ಜೀವನಾಧಾರಿತ ಸಿನಿಮಾದ ನಿರ್ಮಾಪಕರ ಜೊತೆ ‘ದಿ ಕೇರಳ ಸ್ಟೋರಿ’ ನಿರ್ದೇಶಕರ ಹೊಸ ಪ್ರಾಜೆಕ್ಟ್​

Sandeep Singh: ಸಂದೀಪ್​ ಸಿಂಗ್​ ಅವರು ಈಗ ‘ಸ್ವಾತಂತ್ರವೀರ್​ ಸಾವರ್ಕರ್​’ ಹಾಗೂ ‘ಮೈ ಅಟಲ್​ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್​ ಸಿಂಗ್​ ಮುಂದಾಗಿದ್ದಾರೆ.

Sudipto Sen: ಸಾವರ್ಕರ್​ ಜೀವನಾಧಾರಿತ ಸಿನಿಮಾದ ನಿರ್ಮಾಪಕರ ಜೊತೆ ‘ದಿ ಕೇರಳ ಸ್ಟೋರಿ’ ನಿರ್ದೇಶಕರ ಹೊಸ ಪ್ರಾಜೆಕ್ಟ್​
ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್​
Follow us
ಮದನ್​ ಕುಮಾರ್​
|

Updated on: Jun 10, 2023 | 9:40 AM

ನಿರ್ದೇಶಕ ಸುದೀಪ್ತೋ ಸೇನ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆದರೆ ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಕ್ಕಿದ್ದು ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ 237 ಕೋಟಿ ರೂಪಾಯಿ ಗಳಿಸಿದೆ. ಈಗ ಸುದೀಪ್ತೋ ಸೇನ್​ ಅವರು ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ, ಸಾವರ್ಕರ್​ ಜೀವನಾಧಾರಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವ ನಿರ್ಮಾಪಕ ಸಂದೀಪ್​ ಸಿಂಗ್​ (Sandeep Singh) ಜೊತೆ ಸುದೀಪ್ತೋ ಸೇನ್​ ಕೈ ಜೋಡಿಸಿದ್ದಾರೆ. ಆದರೆ ಅವರಿಬ್ಬರೂ ಜೊತೆಯಾಗಿ ಮಾಡಲಿರುವ ಹೊಸ ಪ್ರಾಜೆಕ್ಟ್​ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗ ಆಗಬೇಕಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸುದೀಪ್ತೋ ಸೇನ್ (Sudipto Sen) ಅವರ ಮೇಲೆ ಅಭಿಮಾನಿಗಳಿಗೆ ಭರವಸೆ ಮೂಡಿದೆ.

ಸಂದೀಪ್​ ಸಿಂಗ್​ ಅವರು ಈಗ ‘ಸ್ವಾತಂತ್ರವೀರ್​ ಸಾವರ್ಕರ್​’ ಹಾಗೂ ‘ಮೈ ಅಟಲ್​ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್​ ಸಿಂಗ್​ ಮುಂದಾಗಿದ್ದಾರೆ. ಮತ್ತೆ ಅವರು ನೈಜ ಘಟನೆ ಆಧಾರಿತ ಸಿನಿಮಾವನ್ನು ನಿರ್ಮಿಸಲಿದ್ದಾರೆ ಎಂದು ಹೇಳಲಾಗುತ್ತಿವೆ. ಆದಷ್ಟು ಬೇಗ ಈ ಪ್ರಾಜೆಕ್ಟ್​ ಕುರಿತು ವಿವರ ಲಭ್ಯವಾಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

ಕೆಲವೇ ದಿನಗಳ ಹಿಂದೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಸೀಕ್ವೆಲ್​ ಬಗ್ಗೆ ಮಾತು ಕೇಳಿಬಂದಿತ್ತು. ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ

ನಟಿ ಅದಾ ಶರ್ಮಾಗೆ ಆಫರ್​ಗಳ ಸುರಿಮಳೆ:

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಅದಾ ಶರ್ಮಾ ಅವರ ಬರ್ತ್​ಡೇ (ಮೇ 11) ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ