AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudipto Sen: ಸಾವರ್ಕರ್​ ಜೀವನಾಧಾರಿತ ಸಿನಿಮಾದ ನಿರ್ಮಾಪಕರ ಜೊತೆ ‘ದಿ ಕೇರಳ ಸ್ಟೋರಿ’ ನಿರ್ದೇಶಕರ ಹೊಸ ಪ್ರಾಜೆಕ್ಟ್​

Sandeep Singh: ಸಂದೀಪ್​ ಸಿಂಗ್​ ಅವರು ಈಗ ‘ಸ್ವಾತಂತ್ರವೀರ್​ ಸಾವರ್ಕರ್​’ ಹಾಗೂ ‘ಮೈ ಅಟಲ್​ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್​ ಸಿಂಗ್​ ಮುಂದಾಗಿದ್ದಾರೆ.

Sudipto Sen: ಸಾವರ್ಕರ್​ ಜೀವನಾಧಾರಿತ ಸಿನಿಮಾದ ನಿರ್ಮಾಪಕರ ಜೊತೆ ‘ದಿ ಕೇರಳ ಸ್ಟೋರಿ’ ನಿರ್ದೇಶಕರ ಹೊಸ ಪ್ರಾಜೆಕ್ಟ್​
ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್​
ಮದನ್​ ಕುಮಾರ್​
|

Updated on: Jun 10, 2023 | 9:40 AM

Share

ನಿರ್ದೇಶಕ ಸುದೀಪ್ತೋ ಸೇನ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಆದರೆ ಅವರಿಗೆ ದೊಡ್ಡ ಮಟ್ಟದ ಗೆಲುವು ಸಿಕ್ಕಿದ್ದು ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದಿಂದ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ 237 ಕೋಟಿ ರೂಪಾಯಿ ಗಳಿಸಿದೆ. ಈಗ ಸುದೀಪ್ತೋ ಸೇನ್​ ಅವರು ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ, ಸಾವರ್ಕರ್​ ಜೀವನಾಧಾರಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವ ನಿರ್ಮಾಪಕ ಸಂದೀಪ್​ ಸಿಂಗ್​ (Sandeep Singh) ಜೊತೆ ಸುದೀಪ್ತೋ ಸೇನ್​ ಕೈ ಜೋಡಿಸಿದ್ದಾರೆ. ಆದರೆ ಅವರಿಬ್ಬರೂ ಜೊತೆಯಾಗಿ ಮಾಡಲಿರುವ ಹೊಸ ಪ್ರಾಜೆಕ್ಟ್​ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗ ಆಗಬೇಕಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್​ ಹಿಟ್​ ಆಗಿರುವುದರಿಂದ ಸುದೀಪ್ತೋ ಸೇನ್ (Sudipto Sen) ಅವರ ಮೇಲೆ ಅಭಿಮಾನಿಗಳಿಗೆ ಭರವಸೆ ಮೂಡಿದೆ.

ಸಂದೀಪ್​ ಸಿಂಗ್​ ಅವರು ಈಗ ‘ಸ್ವಾತಂತ್ರವೀರ್​ ಸಾವರ್ಕರ್​’ ಹಾಗೂ ‘ಮೈ ಅಟಲ್​ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್​ ಸಿಂಗ್​ ಮುಂದಾಗಿದ್ದಾರೆ. ಮತ್ತೆ ಅವರು ನೈಜ ಘಟನೆ ಆಧಾರಿತ ಸಿನಿಮಾವನ್ನು ನಿರ್ಮಿಸಲಿದ್ದಾರೆ ಎಂದು ಹೇಳಲಾಗುತ್ತಿವೆ. ಆದಷ್ಟು ಬೇಗ ಈ ಪ್ರಾಜೆಕ್ಟ್​ ಕುರಿತು ವಿವರ ಲಭ್ಯವಾಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ ಅಂಥ ಸಿನಿಮಾಗಳನ್ನು ಜನರು ನೋಡಬೇಕು’; ಅಚ್ಚರಿಯ ಹೇಳಿಕೆ ನೀಡಿದ ಕಮಲ್ ಹಾಸನ್

ಕೆಲವೇ ದಿನಗಳ ಹಿಂದೆ ‘ದಿ ಕೇರಳ ಸ್ಟೋರಿ’ ಸಿನಿಮಾದ ಸೀಕ್ವೆಲ್​ ಬಗ್ಗೆ ಮಾತು ಕೇಳಿಬಂದಿತ್ತು. ಅದಾ ಶರ್ಮಾ ನಟನೆಯ ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಕೇವಲ ಮಹಿಳೆಯರ ಬ್ರೇನ್​ವಾಶ್​ ಬಗ್ಗೆ ತೋರಿಸಲಾಗಿದೆ. ಆದರೆ ಹುಡುಗರ ಬ್ರೇನ್​ವಾಶ್​​ ಬಗ್ಗೆ ಯಾಕೆ ತೋರಿಸಿಲ್ಲ ಎಂದು ಅನೇಕರು ಪ್ರಶ್ನೆ ಎತ್ತಿದ್ದಾರೆ. ನಿರ್ದೇಶಕ ಸುದೀಪ್ತೋ ಸೇನ್​ ಅವರನ್ನು ಈ ಕುರಿತು ಕೆಲವರು ಪ್ರಶ್ನಿಸಿದ್ದಾರಂತೆ. ಹುಡುಗರನ್ನು ಬ್ರೇನ್​ವಾಶ್​ ಮಾಡಿದ್ದರ ಕುರಿತು ಸೀಕ್ವೆಲ್​ ಮಾಡುವಂತೆ ಅವರಿಗೆ ಆಫರ್​ ನೀಡಲಾಗಿದೆ. ಹಾಗಾಗಿ ‘ದಿ ಕೇರಳ ಸ್ಟೋರಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: Naseeruddin Shah: ‘ದಿ ಕೇರಳ ಸ್ಟೋರಿ ಹಿಟ್​ ಆಗಿದ್ದು ಅಪಾಯಕಾರಿ ಟ್ರೆಂಡ್​’: ವಿವಾದಿತ ಚಿತ್ರದ ಬಗ್ಗೆ ನಸೀರುದ್ದೀನ್​ ಶಾ ಟೀಕೆ

ನಟಿ ಅದಾ ಶರ್ಮಾಗೆ ಆಫರ್​ಗಳ ಸುರಿಮಳೆ:

‘ಗಾಂಧಾರ್​ ಫಿಲ್ಮ್ಸ್​ ಆ್ಯಂಡ್​ ಸ್ಟುಡಿಯೋ ಪ್ರೈವೇಟ್​ ಲಿಮಿಡೆಟ್​’ ಸಂಸ್ಥೆ ಮೂಲಕ ‘ದಿ ಗೇಮ್​ ​ಆಫ್​​ ಗಿರ್ಗಿಟ್​’ ಸಿನಿಮಾ ಮೂಡಿಬರುತ್ತಿದೆ. ಅದಾ ಶರ್ಮಾ ಅವರ ಬರ್ತ್​ಡೇ (ಮೇ 11) ಪ್ರಯುಕ್ತ ‘ದಿ ಗೇಮ್​ ಆಫ್​​ ಗಿರ್ಗಿಟ್​’ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರು ಪೊಲೀಸ್​ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!