AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bastar: ‘ದಿ ಕೇರಳ ಸ್ಟೋರಿ’ ತಂಡದಿಂದ ಹೊಸ ಸಿನಿಮಾ ಅನೌನ್ಸ್​; ತೆರೆಗೆ ಬರಲಿದೆ ಮತ್ತೊಂದು ರಿಯಲ್​ ಘಟನೆ

Sudipto Sen: ‘ಬಸ್ತರ್​’ ಸಿನಿಮಾದ ಟೈಟಲ್​ ಪೋಸ್ಟರ್​ ಅನಾವರಣ ಮಾಡಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

Bastar: ‘ದಿ ಕೇರಳ ಸ್ಟೋರಿ’ ತಂಡದಿಂದ ಹೊಸ ಸಿನಿಮಾ ಅನೌನ್ಸ್​; ತೆರೆಗೆ ಬರಲಿದೆ ಮತ್ತೊಂದು ರಿಯಲ್​ ಘಟನೆ
ಬಸ್ತರ್​, ದಿ ಕೇರಳ ಸ್ಟೋರಿ
Follow us
ಮದನ್​ ಕುಮಾರ್​
|

Updated on: Jun 26, 2023 | 3:04 PM

ಈ ವರ್ಷ ತೆರೆಕಂಡ ಸಿನಿಮಾಗಳ ಪೈಕಿ ಅತಿ ಹೆಚ್ಚು ಚರ್ಚೆ ನಡೆದಿದ್ದು ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಬಗ್ಗೆ. ಇನ್ನೂ ಕೆಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಸುದೀಪ್ತೋ ಸೇನ್ (Sudipto Sen) ಹಾಗೂ ಬಂಡವಾಳ ಹೂಡಿದ್ದ ವಿಪುಲ್​ ಅಮೃತ್​ಲಾಲ್​ ಶಾ ಅವರು ಮತ್ತೊಂದು ಹೊಸ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಚಿತ್ರಕ್ಕೆ ‘ಬಸ್ತರ್​’ (Bastar) ಎಂದು ಹೆಸರು ಇಡಲಾಗಿದೆ. ಟೈಟಲ್​ ಪೋಸ್ಟರ್​ ಅನಾವರಣ ಮಾಡಲಾಗಿದ್ದು, ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಬಾರಿ ಕೂಡ ಅವರಿಬ್ಬರು ಒಂದು ರಿಯಲ್​ ಲೈಫ್​ ಘಟನೆಯನ್ನು ಇಟ್ಟುಕೊಂಡು ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಣ ಆಗಿದ್ದು ‘ಸನ್​ಶೈನ್​ ಪಿಕ್ಚರ್ಸ್​’ ಸಂಸ್ಥೆ ಮೂಲಕ. ಈಗ ‘ಬಸ್ತರ್​’ ಚಿತ್ರ ಕೂಡ ಇದೇ ಬ್ಯಾನರ್​ ಮೂಲಕ ಮೂಡಿಬರಲಿದೆ. ಈ ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ನಟಿಸಿದ ಕೆಲವು ಕಲಾವಿದರು ಕೂಡ ‘ಬಸ್ತರ್’ ಚಿತ್ರದಲ್ಲಿ ಇರುತ್ತಾರಾ ಎಂಬ ಕೌತುಕ ಮೂಡಿದೆ. ಈ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರ ಖರೀದಿಸಲು ಯಾವ ಒಟಿಟಿ ಸಂಸ್ಥೆಯೂ ಮುಂದೆ ಬಂದಿಲ್ಲ; ಇದರ ಹಿಂದಿದೆ ಷಡ್ಯಂತ್ರ?

‘ಬಸ್ತರ್​’ ಪೋಸ್ಟರ್​ನಲ್ಲಿ ಏನಿದೆ?

ದಟ್ಟ ಅರಣ್ಯದಲ್ಲಿ ಕೆಂಪು ಬಾವುಟ ಇದೆ. ನೆಲಕ್ಕೆ ಉರುಳಿದ ಮರ ಹೈಲೈಟ್​ ಆಗಿದೆ. ಗನ್​ ಮತ್ತು ಹೊಗೆ ಕೂಡ ಈ ಪೋಸ್ಟರ್​ನಲ್ಲಿ ಇದೆ. ‘ದೇಶದಲ್ಲಿ ಸಂಚಲನ ಮೂಡಿಸಲಿದೆ ಅಡಗಿದ ಸತ್ಯ’ ಎಂಬ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಈಗಲೇ ಅನೌನ್ಸ್​ ಮಾಡಲಾಗಿದೆ. 2024ರ ಏಪ್ರಿಲ್​ 5ರಂದು ‘ಬಸ್ತರ್​’ ತೆರೆಕಾಣಲಿದೆ ಎಂದು ಪೋಸ್ಟರ್​ನಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಕೇರಳದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಲವ್​ ಜಿಹಾದ್​ ಘಟನೆಗಳನ್ನು ಇಟ್ಟುಕೊಂಡು ‘ದಿ ಕೇರಳ ಸ್ಟೋರಿ’ ಸಿದ್ಧಗೊಂಡಿತ್ತು. ಕೆಲವರು ಇದನ್ನು ಪ್ರೊಪೊಗಾಂಡ ಸಿನಿಮಾ ಎಂದು ತೆಗಳಿದ್ದರು. ಕಮಲ್​ ಹಾಸನ್​, ಪ್ರಕಾಶ್​ ರೈ ಮುಂತಾದ ಸೆಲೆಬ್ರಿಟಿಗಳು ಸಹ ಈ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಮೂಲಕ ಈ ಸಿನಿಮಾ ಸಖತ್​ ವಿವಾದ ಸೃಷ್ಟಿ ಮಾಡಿತ್ತು. ಈಗ ಅದೇ ಚಿತ್ರತಂಡದವರು ‘ಬಸ್ತರ್​’ ಸಿನಿಮಾದಲ್ಲಿ ಯಾವ ನೈಜ ಘಟನೆಯನ್ನು ಜನರ ಎದುರು ಇಡಲಿದ್ದಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್